9:55 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಐತಿಹಾಸಿಕ ʼಅಮರನಾಥ ಯಾತ್ರೆʼ ಜೂನ್ 30ರಿಂದ ಆರಂಭ: 43 ದಿನ ಬಾಬಾ ಬರ್ವಾನಿಯ ದರ್ಶನಕ್ಕೆ ಅವಕಾಶ

28/03/2022, 15:31

ಹೊಸದಿಲ್ಲಿ(reporterkarnataka.com): ಐತಿಹಾಸಿಕ ಅಮರನಾಥ ಯಾತ್ರೆ ಜೂನ್ 30ರಿಂದ ಆರಂಭವಾಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿ ತಿಳಿಸಿದೆ.

ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಅಧ್ಯಕ್ಷತೆಯಲ್ಲಿ ಇಂದು ಶ್ರೀಅಮರನಾಥಜೀ ದೇವಾಲಯ ಮಂಡಳಿಯ ಸಭೆ ಭಾನುವಾರ ನಡೆಯಿತು.

ಮುಂಬರುವ ಭೇಟಿಗೆ ಸಂಬಂಧಿಸಿದ ವಿವಿಧ ವಿಷಯಗಳನ್ನ ಸಭೆಯಲ್ಲಿ ಆಳವಾಗಿ ಚರ್ಚಿಸಲಾಯಿತು. ಅದ್ರಂತೆ, ಈ ಬಾರಿಯ ಅಮರನಾಥ ಯಾತ್ರೆಯು ಜೂನ್ 30 ರಿಂದ ಪ್ರಾರಂಭವಾಗಿ ರಕ್ಷಾ ಬಂಧನದ ದಿನದಂದು ಸಂಪ್ರದಾಯದಂತೆ ಕೊನೆಗೊಳ್ಳಲು ನಿರ್ಧರಿಸಲಾಗಿದೆ.

ಈ ವರ್ಷ, ಭಕ್ತರು ಸುಮಾರು 43 ದಿನಗಳ ಕಾಲ ಬಾಬಾ ಬರ್ವಾನಿಯ ದರ್ಶನ ಪಡೆಯಲು ಸಾಧ್ಯವಾಗುತ್ತದೆ. ಆದರೆ ಪ್ರಯಾಣದ ಸಮಯದಲ್ಲಿ ಕೋವಿಡ್ ನಿಯಮಗಳನ್ನ ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಕಡ್ಡಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು