7:59 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಇತಿಹಾಸ ಕಂಡರಿಯದ ವರ್ಷಧಾರೆ: ಬೆಚ್ಚಿಬಿದ್ದ ಮುಳ್ಳಯ್ಯನ ಗಿರಿ ಶ್ರೇಣಿ; ರಸ್ತೆಯಲ್ಲಿ 2 ಅಡಿ ಮಳೆ ನೀರು

20/10/2024, 14:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇತಿಹಾಸದಲ್ಲಿ ಕಂಡು ಕೇಳರಿಯದ ಮಳೆಗೆ ಮುಳ್ಳಯ್ಯನ ಗಿರಿ ಬೆಚ್ಚಿ ಬಿದ್ದಿದೆ. ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶದಲ್ಲೇ 2 ಅಡಿ ಮಳೆ ನೀರು ನಿಂತಿದೆ.
ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲು ಅಲ್ಲೋಲ-ಕಲ್ಲೋಲವಾಗಿದೆ.
ದತ್ತಪೀಠದ ರಸ್ತೆಯಲ್ಲಿ 2 ಅಡಿ ಎತ್ತರದಲ್ಲಿ ಮಳೆ ನೀರು ಹರಿದಿದೆ. ಎಷ್ಟೇ ಮಳೆ ಬಂದರೂ ಪಶ್ಚಿಮ ಘಟ್ಟಕ್ಕೆ ಲೆಕ್ಕವೇ ಅಲ್ಲ. ಸಾವಿರಾರು ಅಡಿ ಆಳ, ಮುಗಿಲೆತ್ತರದ ಬೆಟ್ಟಗುಡ್ಡಗಳ ಪಶ್ಚಿಮ ಘಟ್ಟದಲ್ಲಿವೆ. ಎಷ್ಟೇ ಮಳೆ, ಹೇಗೆ ಸುರಿದರೂ ನೀರು ಹರಿದು ಹೋಗುತ್ತೆ. ಆದರೆ
ಹಿಂಗಾರು ಮಳೆ ಅಬ್ಬರಕ್ಕೆ ಅಂತಹಾ ಪಶ್ಚಿಮ ಘಟ್ಟವೇ ಬೆದರಿದೆ ಹೋಗಿದೆ.


ಮುಗಿಲೆತ್ತರದ ಬೆಟ್ಟಗಳ ಮೇಲೆ 2 ಅಡಿ ನೀರು ನಿಂತಿತ್ತು. ಇದರಿಂದಲೇ ಮಳೆ ಪ್ರಮಾಣ ಹೇಗಿರಬಹುದು ಎಂದು ಅಂದಾಜಿಸಬಹುದು. ಮಳೆರಾಯನ ಅಬ್ಬರಕ್ಕೆ ಪ್ರವಾಸಿಗರು ತೊಯ್ದು ತೊಪ್ಪೆ ಮಳೆ ಮಧ್ಯೆ ಸಿಲುಕಿ ಮುಳ್ಳಯ್ಯನಗಿರಿ ಸಹವಾಸವೇ ಬೇಡ ಎಂದ ಪ್ರವಾಸಿಗರು ಹೇಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು