2:31 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಐತಿಹಾಸಿಕ ಕದ್ರಿ ಜೋಗಿ ಮಠದಲ್ಲಿ ಶ್ರೀ ಕಾಲಬೈರವ ದೇವರ ಮೂಲಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

27/08/2023, 19:13

ಮಂಗಳೂರು(reporterkarnataka.com):ನಗರದ ಕದ್ರಿಯಲ್ಲಿರುವ ಐತಿಹಾಸಿಕ ಜೋಗಿ ಮಠದಲ್ಲಿ ಶ್ರೀ ಕಾಲ ಬೈರವ ದೇವರ ಮೂಲಮೂರ್ತಿ ಪ್ರತಿಷ್ಠಾಪಿಸುವಂತೆ ಆಗ್ರಹಿಸಿ ಭಾನುವಾರ ಜೋಗಿ ಸಮಾಜದ ಆಶ್ರಯದಲ್ಲಿ ಉಪವಾಸ ಸತ್ಯಾಗ್ರಹವನ್ನು ಭಜನೆಯ ಮೂಲಕ ನಡೆಸಲಾಯಿತು.
ಕದ್ರಿ ಜೋಗಿಮಠ ಹಿತರಕ್ಷಣಾ ಸಮಿತಿ, ದಕ್ಷಿಣ ಕನ್ನಡ ಜೋಗಿ ಸಮಾಜ ಸುಧಾರಕ ಸಂಘ, ಕದ್ರಿ ಶ್ರೀ ಜೋಗಿಮಠ ಜೀರ್ಣೋದ್ಧಾರ ಮತ್ತು ನಿರ್ವಹಣಾ ಸಮಿತಿಯ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು.
ಕಾಲಭೈರವದೇವರಿಗೆ ಬ್ರಹ್ಮಕಲಶೋತ್ಸವ ಹಾಗೂ ಮೂರ್ತಿ ಪುನಃ ಪ್ರತಿಷ್ಠಾಪನೆ ಕಳೆದ ಫೆಬ್ರವರಿಯಲ್ಲಿ ನಡೆದಿದ್ದು, ಸಾವಿರಾರು ವರ್ಷ ಇತಿಹಾಸ ಇರುವ ಮೂಲ ಮೂರ್ತಿಯನ್ನು ಬಿಟ್ಟು ಯಾರೋ ಮಾರ್ವಾಡಿಗಳು ಕೊಡಮಾಡಿದ ಅಮೃತ ಶಿಲೆಯನ್ನು ಇಟ್ಟು ಬ್ರಹ್ಮಕಲಶ ಮಾಡಿದ್ದು, ಬಹುದೊಡ್ಡ ಅಪಚಾರವಾಗಿದೆ. ತಕ್ಷಣ ಈ ಬಗ್ಗೆ ಪುರಾ ತತ್ವ ಇಲಾಖೆ ನೀಡಿದ ಆದೇಶ ಜಾರಿ ಮಾಡಿ ಶ್ರೀ ಕಾಲಬೈರವ ದೇವರ ಮೂಲ ಮೂರ್ತಿ ಪ್ರತಿಷ್ಠಾಪನೆ ಆಗಬೇಕು ಎಂದು ಹರಿನಾಥ್ ಜೋಗಿ ಒತ್ತಾಯಿಸಿದರು.
ಈಗಿನ ನಿರ್ಮಲನಾಥ ಸ್ವಾಮೀಜಿ ಮಠಾಧಿಪತಿಗಳು ಕಾಲಬೈರವನ ಆರಾಧಕರಾದ ಸ್ಥಳೀಯ ಜೋಗಿ ಸಮಾಜದ ಬಂಧುಗಳ ಮನಸ್ಸಿಗೆ ನೋವುಂಟು ಮಾಡುತ್ತಿದ್ದಾರೆ.
ರಾಜಸ್ಥಾನದ ಭಕ್ತರು ಹಾಗೂ ಕೆಲವರು ಸೇರಿಕೊಂಡು ಪುರಾತನ ಕಾಲದಿಂದ ಆರಾಧಿಸಿಕೊಂಡು ಬರುತ್ತಿದ್ದ ಕಾಲಭೈರವ ದೇವರ ವಿಗ್ರಹವನ್ನು ಬಟ್ಟೆಯಲ್ಲಿ ಸುತ್ತಿ ಬಿಸಾಡಿದ್ದರು. ಯಾವುದೇ ವಿಧಿವಿಧಾನ ಅನುಸರಿಸದೆ ಚೀಲದಿಂದ ತೆಗೆದು ಹೊಸ ವಿಗ್ರಹ ಕೂರಿಸಿದ್ದಾರೆ. ಮಠ ಜೋಗಿ ಸಮುದಾಯಕ್ಕೆ ಸೇರಿದ್ದು, ಮಠಾಧೀಶರ ನಿರ್ದೇಶನದಲ್ಲಿ ಜೋಗಿಗಳೇ ಪ್ರತಿನಿತ್ಯ ಪೂಜೆ ನಡೆಸಬೇಕು ಎಂದರು.


ಹಳೆಯ ಕಾಲಭೈರವ ದೇವರ ವಿಗ್ರಹವನ್ನು ಮಠಾಧಿಪತಿಗಳು ಮಾರಾಟಕ್ಕೆ ಯತ್ನಿಸಿದ್ದರು. ನಾವು ಪ್ರಾಚ್ಯವಸ್ತು ಇಲಾಖೆಯನ್ನು ಸಂಪರ್ಕಿಸಿ ಮಾರಾಟ ತಡೆದಿದ್ದೇವೆ. ಮೊದಲಿನ ವಿಗ್ರಹವನ್ನೇ ಪ್ರತಿಷ್ಠಾಪಿಸುವಂತೆ ಜಿಲ್ಲಾಧಿಕಾರಿಗೆ ತಿಳಿಸಿದ್ದು, ಈ ಬಗ್ಗೆ ಪ್ರತಿಕ್ರಿಯೆ ಬಂದಿಲ್ಲ. ಇದರಿಂದ ಬೇಸತ್ತು ಉಪವಾಸ ಸತ್ಯಾಗ್ರಹ ಮಾಡಿದ್ದೇವೆ. ಇದು ಸಾಂಕೇತಿಕವಾಗಿದ್ದು ಬೇಡಿಕೆ ಈಡೇರದೇ ಇದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುದು ಎಂದರು.
ಕದ್ರಿ ಜೋಗಿ ಮಠ ಹಿತರಕ್ಷಣಾ ಸಮಿತಿ ಅಧ್ಯಕ್ಷ ಶರತ್ ಕುಮಾರ್, ಜೀರ್ಣೋದ್ದಾರ ಮತ್ತು ಕಾರ್ಯ ನಿರ್ವಹಣ ಸಮಿತಿ ಕಾರ್ಯದರ್ಶಿ ಹರೀಶ್ ಎಸ್.ಜೋಗಿ, ಸಮಾಜದ ಪ್ರಮುಖರಾದ ಕೆ. ದಯಾನಂದ ಜೋಗಿ, ಬಾಲಕೃಷ್ಣಕದ್ರಿ, ನಾಗೇಂದ್ರ ಚಿಲಿಂಬಿ, ಸತೀಶ್ ಜೋಗಿ ಮಾಲೆಮಾರ್, ವಿದ್ಯಾ ಗಣೇಶ್, ಶರತ್ ಕುಮಾರ್,ಜಗಜೀವನ್ ದಾಸ್,ಸುರೇಶ್ ಕುಮಾರ್, ನಾಗೇಶ್, ಗಣೇಶ್, ಕಾನೂನು ಸಲಹೆಗಾರರಾದ ಹರೀಶ್ ಎಸ್., ಮೋಹನ್, ಜಯಂತ್ ಜೋಗಿ, ದಯಾನಂದ ಜೋಗಿ, ಪ್ರಮಿತ್ ಜೋಗಿ ಮತ್ತಿತರ ಪದಾಧಿಕಾರಿಗಳು ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು