11:36 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಐತಿಹಾಸಿಕ ಎಡನೀರು ಮಠ ಹಾಗೂ ಸ್ವಾಮೀಜಿಗೆ ರಕ್ಷಣೆ ನೀಡಿ: ಕೈಯೂರು ನಾರಾಯಣ ಭಟ್ ಆಗ್ರಹ

07/11/2024, 10:32

ಬಂಟ್ವಾಳ(reporterkarnataka.com): ಸುಮಾರು ೧೩೦೦ ವರ್ಷಗಳ ಇತಿಹಾಸವಿರುವ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕಾರಿಗೆ ದುಷ್ಕರ್ಮಿಗಳು ತಡೆಯೊಡ್ಡಿ ಅಡ್ಡಿಪಡಿಸಿದ ಕಿಡಿಗೇಡಿ ಕೃತ್ಯ ಖಂಡನೀಯ ಎಂದು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅವರು ಬಿ.ಸಿ. ರೋಡ್ ನ ಪತ್ರಿಕಾ ಭವನದಲ್ಲಿ ಶ್ರೀ ಕ್ಷೇತ್ರ ಎಡನೀರು ಮಠದ ಭಕ್ತಾಭಿಮಾನಿಗಳ ಬಳಗ ಬಂಟ್ವಾಳ ಇವರು ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕಾಸರಗೋಡು ಎಡನೀರು ಮಠವು ತನ್ನದೇ ಆದ ವಿಶಿಷ್ಠ ಪರಂಪರೆ ಹೊಂದಿದ್ದು ಎಲ್ಲಾ ಜಾತಿ,ಮತ,ಸಂಪ್ರದಾಯಗಳನ್ನು ಗೌರವಿಸುವ ಹಿನ್ನೆಲೆ ಹೊಂದಿದೆ. ಮುಖ್ಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ಸ್ವಾಮೀಜಿಯವರು ತೆರಳುತ್ತಿರುವುದನ್ನು ಕಂಡು ದುರುದ್ದೇಶ ಪೂರ್ವಕವಾಗಿ ‌ ಆಕ್ರಮಣಕಾರಿ ರೀತಿಯಲ್ಲಿ ಕಾರಿಗೆ ಹಾನಿಗೊಳಿಸಿ ಬೆದರಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು.
ಈ ಮಠಕ್ಕೆ ಮುಸಲ್ಮಾನರು ಸಹಿತ ದೇಶದ ವಿವಿಧೆಡೆ ಭಕ್ತರಿದ್ದು ಇಲ್ಲಿನ ಉತ್ಸವಾದಿಗಳಿಗೆ ದೇಣಿಗೆ ಹೊರೆಕಾಣಿಕೆ ಸಮರ್ಪಿಸುತ್ತಿದ್ದಾರೆ. ಲಕ್ಷಾಂತರ ಮಠದ ಅಭಿಮಾನಿಗಳಿಗೆ ಈ ಘಟನೆಯಿಂದ ಖೇದವಾಗಿದೆ ಎಂದು‌ ತಿಳಿಸಿದರು.

ಕನ್ನಡ ಭಾಷಾ ಸಾಹಿತ್ಯ,ಯಕ್ಷಗಾನ ಹಾಗೂ ವಿವಿಧ ಕಲೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಶ್ರೀಗಳಿಗೆ ಮತ್ತು ಮಠಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು‌ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರತಿಷ್ಠಾನದ ಕೋಶಾಧಿಕಾರಿ ಅನಾರು ಕೃಷ್ಣ ಶರ್ಮ, ಜಿಲ್ಲಾ ಪ್ರತಿನಿಧಿ ರಾಜಮಣಿ ರಾಮ ಕುಂಜ, ಬಂಟ್ವಾಳ ತಾಲೂಕು‌ ಅಧ್ಯಕ್ಷ ಸುಬ್ರಾಯ ಮಡಿವಾಳ, ಕಾರ್ಯದರ್ಶಿ ಕೋಕಳ ರಾಮಕೃಷ್ಣ ನಾಯಕ್ ಹಾಗೂ ಡಾ.ಮಹಾಲಿಂಗ ಭಟ್, ನ್ಯಾಯವಾದಿ ರವೀಂದ್ರ ಕುಕ್ಕಾಜೆ, ಶೇಖರ ಮಂಚಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು