3:29 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಐತಿಹಾಸಿಕ ಎಡನೀರು ಮಠ ಹಾಗೂ ಸ್ವಾಮೀಜಿಗೆ ರಕ್ಷಣೆ ನೀಡಿ: ಕೈಯೂರು ನಾರಾಯಣ ಭಟ್ ಆಗ್ರಹ

07/11/2024, 10:32

ಬಂಟ್ವಾಳ(reporterkarnataka.com): ಸುಮಾರು ೧೩೦೦ ವರ್ಷಗಳ ಇತಿಹಾಸವಿರುವ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕಾರಿಗೆ ದುಷ್ಕರ್ಮಿಗಳು ತಡೆಯೊಡ್ಡಿ ಅಡ್ಡಿಪಡಿಸಿದ ಕಿಡಿಗೇಡಿ ಕೃತ್ಯ ಖಂಡನೀಯ ಎಂದು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅವರು ಬಿ.ಸಿ. ರೋಡ್ ನ ಪತ್ರಿಕಾ ಭವನದಲ್ಲಿ ಶ್ರೀ ಕ್ಷೇತ್ರ ಎಡನೀರು ಮಠದ ಭಕ್ತಾಭಿಮಾನಿಗಳ ಬಳಗ ಬಂಟ್ವಾಳ ಇವರು ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕಾಸರಗೋಡು ಎಡನೀರು ಮಠವು ತನ್ನದೇ ಆದ ವಿಶಿಷ್ಠ ಪರಂಪರೆ ಹೊಂದಿದ್ದು ಎಲ್ಲಾ ಜಾತಿ,ಮತ,ಸಂಪ್ರದಾಯಗಳನ್ನು ಗೌರವಿಸುವ ಹಿನ್ನೆಲೆ ಹೊಂದಿದೆ. ಮುಖ್ಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ಸ್ವಾಮೀಜಿಯವರು ತೆರಳುತ್ತಿರುವುದನ್ನು ಕಂಡು ದುರುದ್ದೇಶ ಪೂರ್ವಕವಾಗಿ ‌ ಆಕ್ರಮಣಕಾರಿ ರೀತಿಯಲ್ಲಿ ಕಾರಿಗೆ ಹಾನಿಗೊಳಿಸಿ ಬೆದರಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು.
ಈ ಮಠಕ್ಕೆ ಮುಸಲ್ಮಾನರು ಸಹಿತ ದೇಶದ ವಿವಿಧೆಡೆ ಭಕ್ತರಿದ್ದು ಇಲ್ಲಿನ ಉತ್ಸವಾದಿಗಳಿಗೆ ದೇಣಿಗೆ ಹೊರೆಕಾಣಿಕೆ ಸಮರ್ಪಿಸುತ್ತಿದ್ದಾರೆ. ಲಕ್ಷಾಂತರ ಮಠದ ಅಭಿಮಾನಿಗಳಿಗೆ ಈ ಘಟನೆಯಿಂದ ಖೇದವಾಗಿದೆ ಎಂದು‌ ತಿಳಿಸಿದರು.

ಕನ್ನಡ ಭಾಷಾ ಸಾಹಿತ್ಯ,ಯಕ್ಷಗಾನ ಹಾಗೂ ವಿವಿಧ ಕಲೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಶ್ರೀಗಳಿಗೆ ಮತ್ತು ಮಠಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು‌ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರತಿಷ್ಠಾನದ ಕೋಶಾಧಿಕಾರಿ ಅನಾರು ಕೃಷ್ಣ ಶರ್ಮ, ಜಿಲ್ಲಾ ಪ್ರತಿನಿಧಿ ರಾಜಮಣಿ ರಾಮ ಕುಂಜ, ಬಂಟ್ವಾಳ ತಾಲೂಕು‌ ಅಧ್ಯಕ್ಷ ಸುಬ್ರಾಯ ಮಡಿವಾಳ, ಕಾರ್ಯದರ್ಶಿ ಕೋಕಳ ರಾಮಕೃಷ್ಣ ನಾಯಕ್ ಹಾಗೂ ಡಾ.ಮಹಾಲಿಂಗ ಭಟ್, ನ್ಯಾಯವಾದಿ ರವೀಂದ್ರ ಕುಕ್ಕಾಜೆ, ಶೇಖರ ಮಂಚಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು