9:31 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಐತಿಹಾಸಿಕ ಎಡನೀರು ಮಠ ಹಾಗೂ ಸ್ವಾಮೀಜಿಗೆ ರಕ್ಷಣೆ ನೀಡಿ: ಕೈಯೂರು ನಾರಾಯಣ ಭಟ್ ಆಗ್ರಹ

07/11/2024, 10:32

ಬಂಟ್ವಾಳ(reporterkarnataka.com): ಸುಮಾರು ೧೩೦೦ ವರ್ಷಗಳ ಇತಿಹಾಸವಿರುವ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕಾರಿಗೆ ದುಷ್ಕರ್ಮಿಗಳು ತಡೆಯೊಡ್ಡಿ ಅಡ್ಡಿಪಡಿಸಿದ ಕಿಡಿಗೇಡಿ ಕೃತ್ಯ ಖಂಡನೀಯ ಎಂದು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅವರು ಬಿ.ಸಿ. ರೋಡ್ ನ ಪತ್ರಿಕಾ ಭವನದಲ್ಲಿ ಶ್ರೀ ಕ್ಷೇತ್ರ ಎಡನೀರು ಮಠದ ಭಕ್ತಾಭಿಮಾನಿಗಳ ಬಳಗ ಬಂಟ್ವಾಳ ಇವರು ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕಾಸರಗೋಡು ಎಡನೀರು ಮಠವು ತನ್ನದೇ ಆದ ವಿಶಿಷ್ಠ ಪರಂಪರೆ ಹೊಂದಿದ್ದು ಎಲ್ಲಾ ಜಾತಿ,ಮತ,ಸಂಪ್ರದಾಯಗಳನ್ನು ಗೌರವಿಸುವ ಹಿನ್ನೆಲೆ ಹೊಂದಿದೆ. ಮುಖ್ಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ಸ್ವಾಮೀಜಿಯವರು ತೆರಳುತ್ತಿರುವುದನ್ನು ಕಂಡು ದುರುದ್ದೇಶ ಪೂರ್ವಕವಾಗಿ ‌ ಆಕ್ರಮಣಕಾರಿ ರೀತಿಯಲ್ಲಿ ಕಾರಿಗೆ ಹಾನಿಗೊಳಿಸಿ ಬೆದರಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು.
ಈ ಮಠಕ್ಕೆ ಮುಸಲ್ಮಾನರು ಸಹಿತ ದೇಶದ ವಿವಿಧೆಡೆ ಭಕ್ತರಿದ್ದು ಇಲ್ಲಿನ ಉತ್ಸವಾದಿಗಳಿಗೆ ದೇಣಿಗೆ ಹೊರೆಕಾಣಿಕೆ ಸಮರ್ಪಿಸುತ್ತಿದ್ದಾರೆ. ಲಕ್ಷಾಂತರ ಮಠದ ಅಭಿಮಾನಿಗಳಿಗೆ ಈ ಘಟನೆಯಿಂದ ಖೇದವಾಗಿದೆ ಎಂದು‌ ತಿಳಿಸಿದರು.

ಕನ್ನಡ ಭಾಷಾ ಸಾಹಿತ್ಯ,ಯಕ್ಷಗಾನ ಹಾಗೂ ವಿವಿಧ ಕಲೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಶ್ರೀಗಳಿಗೆ ಮತ್ತು ಮಠಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು‌ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರತಿಷ್ಠಾನದ ಕೋಶಾಧಿಕಾರಿ ಅನಾರು ಕೃಷ್ಣ ಶರ್ಮ, ಜಿಲ್ಲಾ ಪ್ರತಿನಿಧಿ ರಾಜಮಣಿ ರಾಮ ಕುಂಜ, ಬಂಟ್ವಾಳ ತಾಲೂಕು‌ ಅಧ್ಯಕ್ಷ ಸುಬ್ರಾಯ ಮಡಿವಾಳ, ಕಾರ್ಯದರ್ಶಿ ಕೋಕಳ ರಾಮಕೃಷ್ಣ ನಾಯಕ್ ಹಾಗೂ ಡಾ.ಮಹಾಲಿಂಗ ಭಟ್, ನ್ಯಾಯವಾದಿ ರವೀಂದ್ರ ಕುಕ್ಕಾಜೆ, ಶೇಖರ ಮಂಚಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು