7:42 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಇತ್ತೀಚಿಗಿನ ಘಟನೆ ಸಂಬಂಧಿಸಿದಂತೆ ಶಿಕ್ಷಕಿಯ ತಕ್ಷಣದಿಂದ ವಜಾಗೊಳಿಸಲಾಗಿದೆ: ಸಂತ ಜೆರೋಸ ಶಾಲೆಯ ಮುಖ್ಯ ಶಿಕ್ಷಕಿ ಪ್ರಕಟಣೆ

12/02/2024, 19:48

ಮಂಗಳೂರು(reporterkarnataka.com): ಸಂತ ಜೆರೋಸ ಶಾಲೆಯು 60 ವರ್ಷಗಳ ಇತಿಹಾಸ ಹೊಂದಿದ್ದು, ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿದೆ. ಆದರೆ ಇತ್ತೀಚಿಗೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಸಿಸ್ಟರ್ ಪ್ರಭಾ ಅವರನ್ನು ಈ ಕ್ಷಣದಿಂದ ನಮ್ಮ ಸಂಸ್ಥೆಯಿಂದ ವಜಾಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ಮತ್ತೊಬ್ಬ ಶಿಕ್ಷಕರನ್ನು ನೇಮಿಸಲಾಗುವುದು ಎಂದು ಸೈಂಟ್ ಜೆರೋಸ ಹೈಯರ್ ಪ್ರೈಮರಿ ಶಾಲೆಯ ಮುಖ್ಯ ಶಿಕ್ಷಕಿ ತಿಳಿಸಿದ್ದಾರೆ.
ಘಟನೆಯ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳಿಂದ ನಡೆಯುತ್ತಿರುವ ತನಿಖೆಯು ಪಾರದರ್ಶಕತೆಯಿಂದ ಕೂಡಿರಲು ನಮ್ಮ ಸಹಕಾರ ನೀಡಲಾಗುವುದು. ಈ ತನಿಖೆಯ ಅಂತಿಮ ಆದೇಶಕ್ಕೆ ನಾವು ಬದ್ಧರಾಗಿದ್ದೇವೆ ಮತ್ತು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಪೋಷಕರಿಂದ ಇದೇ ರೀತಿಯ ಸಹಕಾರವನ್ನು ನಿರೀಕ್ಷಿಸುತ್ತೇವೆ.
ಜೆರೋಸ ಶಾಲೆಯ ಇತಿಹಾಸದಲ್ಲಿ ಯಾವುದೇ ಇಂತಹ ಘಟನೆ ನಡೆದಿಲ್ಲ. ನಾವು ಸಾಂವಿಧಾನಿಕ ಸಿದ್ದಾಂತಗಳಿಗೆ ಬೆಲೆ ಕೊಟ್ಟು ಅವುಗಳಿಗೆ ಬದ್ದರಾಗಿ ಇರುತ್ತೇವೆ. ಮುಂದೆಯೂ ನಾವು ಎಲ್ಲ ಧರ್ಮಗಳು, ನಂಬಿಕೆಗಳು ಮತ್ತು ಆಚರಣೆಗಳನ್ನು ಸಮಾನವಾಗಿ ಸ್ವೀಕರಿಸುತ್ತೇವೆ. ಈ ದುರಾದೃಷ್ಟಕರ ಘಟನೆಯು ನಮ್ಮ ಮಧ್ಯೆ ತಾತ್ಕಾಲಿಕ ಅಪನಂಬಿಕೆಯನ್ನು ಸೃಷ್ಟಿಸಿದ್ದು, ನಮ್ಮ ಈ ನಡೆಯು ನಿಮ್ಮ ಸಹಕಾರದಿಂದ ಈ ನಂಬಿಕೆಯನ್ನು ಪುನಃ ನಿರ್ಮಿಸುವುದಕ್ಕೆ ಸಹಕಾರಿಯಾಗಲಿದೆ ಮತ್ತು ನಾವೆಲ್ಲ ನಮ್ಮ ವಿದ್ಯಾರ್ಥಿ ಗಳ ಉತ್ತಮ ಭವಿಷ್ಯಕ್ಕೆ ಒಟ್ಟಾಗಿ ಶ್ರಮಿಸೋಣ ಎಂದು ಮುಖ್ಯ ಶಿಕ್ಷಕಿಯವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು