12:12 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಇತ್ತೀಚಿಗಿನ ಘಟನೆ ಸಂಬಂಧಿಸಿದಂತೆ ಶಿಕ್ಷಕಿಯ ತಕ್ಷಣದಿಂದ ವಜಾಗೊಳಿಸಲಾಗಿದೆ: ಸಂತ ಜೆರೋಸ ಶಾಲೆಯ ಮುಖ್ಯ ಶಿಕ್ಷಕಿ ಪ್ರಕಟಣೆ

12/02/2024, 19:48

ಮಂಗಳೂರು(reporterkarnataka.com): ಸಂತ ಜೆರೋಸ ಶಾಲೆಯು 60 ವರ್ಷಗಳ ಇತಿಹಾಸ ಹೊಂದಿದ್ದು, ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿದೆ. ಆದರೆ ಇತ್ತೀಚಿಗೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಸಿಸ್ಟರ್ ಪ್ರಭಾ ಅವರನ್ನು ಈ ಕ್ಷಣದಿಂದ ನಮ್ಮ ಸಂಸ್ಥೆಯಿಂದ ವಜಾಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ಮತ್ತೊಬ್ಬ ಶಿಕ್ಷಕರನ್ನು ನೇಮಿಸಲಾಗುವುದು ಎಂದು ಸೈಂಟ್ ಜೆರೋಸ ಹೈಯರ್ ಪ್ರೈಮರಿ ಶಾಲೆಯ ಮುಖ್ಯ ಶಿಕ್ಷಕಿ ತಿಳಿಸಿದ್ದಾರೆ.
ಘಟನೆಯ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳಿಂದ ನಡೆಯುತ್ತಿರುವ ತನಿಖೆಯು ಪಾರದರ್ಶಕತೆಯಿಂದ ಕೂಡಿರಲು ನಮ್ಮ ಸಹಕಾರ ನೀಡಲಾಗುವುದು. ಈ ತನಿಖೆಯ ಅಂತಿಮ ಆದೇಶಕ್ಕೆ ನಾವು ಬದ್ಧರಾಗಿದ್ದೇವೆ ಮತ್ತು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಪೋಷಕರಿಂದ ಇದೇ ರೀತಿಯ ಸಹಕಾರವನ್ನು ನಿರೀಕ್ಷಿಸುತ್ತೇವೆ.
ಜೆರೋಸ ಶಾಲೆಯ ಇತಿಹಾಸದಲ್ಲಿ ಯಾವುದೇ ಇಂತಹ ಘಟನೆ ನಡೆದಿಲ್ಲ. ನಾವು ಸಾಂವಿಧಾನಿಕ ಸಿದ್ದಾಂತಗಳಿಗೆ ಬೆಲೆ ಕೊಟ್ಟು ಅವುಗಳಿಗೆ ಬದ್ದರಾಗಿ ಇರುತ್ತೇವೆ. ಮುಂದೆಯೂ ನಾವು ಎಲ್ಲ ಧರ್ಮಗಳು, ನಂಬಿಕೆಗಳು ಮತ್ತು ಆಚರಣೆಗಳನ್ನು ಸಮಾನವಾಗಿ ಸ್ವೀಕರಿಸುತ್ತೇವೆ. ಈ ದುರಾದೃಷ್ಟಕರ ಘಟನೆಯು ನಮ್ಮ ಮಧ್ಯೆ ತಾತ್ಕಾಲಿಕ ಅಪನಂಬಿಕೆಯನ್ನು ಸೃಷ್ಟಿಸಿದ್ದು, ನಮ್ಮ ಈ ನಡೆಯು ನಿಮ್ಮ ಸಹಕಾರದಿಂದ ಈ ನಂಬಿಕೆಯನ್ನು ಪುನಃ ನಿರ್ಮಿಸುವುದಕ್ಕೆ ಸಹಕಾರಿಯಾಗಲಿದೆ ಮತ್ತು ನಾವೆಲ್ಲ ನಮ್ಮ ವಿದ್ಯಾರ್ಥಿ ಗಳ ಉತ್ತಮ ಭವಿಷ್ಯಕ್ಕೆ ಒಟ್ಟಾಗಿ ಶ್ರಮಿಸೋಣ ಎಂದು ಮುಖ್ಯ ಶಿಕ್ಷಕಿಯವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು