11:15 PM Wednesday11 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಇವರೇ ಅದೃಷ್ಟವಂತ 110 ಮಂದಿ ಕನ್ನಡಿಗರು!: ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರೈಲಿನ ಪ್ರಯಾಣಿಕರು; ಎಲ್ಲರೂ ಚಿಕ್ಕಮಗಳೂರಿನ ಕಳಸ ತಾಲೂಕಿನವರು!!

03/06/2023, 17:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುದ್ದಿಯ ಲಿಂಕ್ ನಲ್ಲಿ ಕಾಣುವ ಗ್ರೂಪ್ ಫೋಟೋ ಹಾಗೂ ಸುದ್ದಿಯ ಒಳಗಡೆ ಇರುವ ಗ್ರೂಪ್ ಫೋಟೋಗಳಲ್ಲಿ ಇರುವವರೆಲ್ಲ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿಗೆ ಸೇರಿದವರು. ಇವರೆಲ್ಲ ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಆದರೆ ಅದೃಷ್ಟವಶಾತ್ ಇವರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಂಗಸರು, ಮಕ್ಕಳು, ವೃದ್ಧರು ಸೇರಿದಂತೆ ಒಟ್ಟು 110 ಮಂದಿ ಕನ್ನಡಿಗರು ಇದ್ದರು.
ಇವರೆಲ್ಲ ಬೆಂಗಳೂರಿನಿಂದ ದುರಂತಕ್ಕೀಡಾದ ರೈಲಿನ ಕೊನೆಯ S5, S6, S7 ಬೋಗಿಯಲ್ಲಿ ಪ್ರಯಾಣಿಸುತ್ತಿದ್ದರು. ನಿನ್ನೆ ಮಧ್ಯಾಹ್ನ ಕೋಲ್ಕತ್ತಾ ಬಳಿ ಇಂಜಿನ್ ಬದಲಾಯಿಸಿದ್ದ ಕಾರಣ ರೈಲಿನ ಮೊದಲ ಬೋಗಿಗೆ ಸ್ಥಳಾಂತರಗೊಂಡಿದ್ದರು. ಹಾಗಾಗಿ ಇವರೆಲ್ಲ ಅಪಾಯದಿಂದ ಪಾರಾಗಿದ್ದಾರೆ.


ಇಲ್ಲಿನ ಬಾಲಾಸೋರ್ ಜಿಲ್ಲೆಯ ಬಹನಗ ರೈಲ್ವೆ ನಿಲ್ದಾಣದ ಬಳಿಕ ಈ ದುರ್ಘಟನೆ ನಡೆದಿತ್ತು. ಚೆನ್ನೈ- ಕೊರೊಮಂಡೆಲ್ ಎಕ್ಸ್ ಪ್ರೆಸ್ ರೈಲು ಹಾಗೂ ಯಶವಂತಪುರ- ಹೌರಾ ರೈಲು ಮತ್ತು ಗೂಡ್ಸ್ ರೈಲು ಡಿಕ್ಕಿ ಹೊಡೆದಿತ್ರು.
ಪಶ್ಚಿಮ ಬಂಗಾಳದ ಶಾಲಿಮಾರ್ ರೈಲು ನಿಲ್ದಾಣ ದಿಂದ ಚೆನ್ನೈಗೆ ಆಗಮಿಸುತ್ತಿದ್ದ ಈ ರೈಲು ಒಡಿಶಾದಲ್ಲಿ ತರ ಯಶವಂತ ಪುರ ಪ್ಯಾಸೆಂಜ್ ರೈಲು ಹಾಗೂ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಅಪಘಾತ ಸ್ಥಳದಲ್ಲಿ ರಕ್ಷಣಾ ತಂಡ ಬೀಡು ಬಿಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು