3:05 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ಜಾದೂಗಾರ ಕುದ್ರೋಳಿ ಗಣೇಶ್ ಅವರ ‘ತುಳುನಾಡು ತುಡರ್ ಚೆಂಡು’ ಜಾದೂವಿಗೆ 2 ಅಂತಾರಾಷ್ಟ್ರೀಯ ಪುರಸ್ಕಾರ

21/12/2022, 12:46

ಮಂಗಳೂರು(reporterkarnataka.com): ಥಾಯ್ ಲ್ಯಾಂಡಿನ ಬ್ಯಾಂಕಾಕ್ ನಲ್ಲಿ ಇತ್ತೀಚೆಗೆ ನಡೆದ ವಿಶ್ವ ಜಾದೂ ಸಮ್ಮೇಳನದಲ್ಲಿ ಜಾದೂಗಾರ ಕುದ್ರೋಳಿ ಗಣೇಶ್ ಅವರು ಪ್ರಸುತ ಪಡಿಸಿದ ” ತುಳುನಾಡು ತುಡರ್ ಚೆಂಡು” ಜಾದೂವಿಗೆ ಎರಡು ಅಂತಾರಾಷ್ಟ್ರೀಯ ಮಟ್ಟದ ಪುರಸ್ಕಾರಗಳು ಲಭಿಸಿವೆ.

ಜಗತ್ತಿನ ಅತ್ಯಂತ ಪುರಾತನ ಜಾದೂ ಆಗಿರುವ ಕಪ್ಸ್ ಆಂಡ್ ಬಾಲ್ಸ್ ಮ್ಯಾಜಿಕ್ ಅನ್ನು ಕುದ್ರೋಳಿ ಗಣೇಶ್ ಅವರು ನೂತನ ತಂತ್ರಗಾರಿಕೆಯ ಮೂಲಕ ತುಳು ಭಾಷೆ ಹಾಗೂ ಪಾಡ್ದನದ ಮೂಲಕ ಪ್ರಸ್ತುತ ಪಡಿಸಿದ ಸೃಜನಶೀಲತೆಯನ್ನು ಪರಿಗಣಿಸಿ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿರುವ ಜಗತ್ತಿನ ಬ್ರಹತ್ ಜಾದೂ ಸಂಸ್ಥೆ ಅನ್ನುವ ಹೆಗ್ಗಳಿಕೆ ಹೊಂದಿದ ಅಮೆರಿಕದ ಇಂಟರ್ ನ್ಯಾಶನಲ್ ಸೊಸೈಟಿ ಆಫ್ ಮ್ಯಾಜಿಕ್ ಸಂಸ್ಥೆಯು ಪ್ರತಿಷ್ಟಿತ “ಮರ್ಲಿನ್ ಮೆಡಲ್ ” ನೀಡಿ ಗೌರವಿಸಿದೆ.

ತುಳುನಾಡು ತುಡರ್ ಚೆಂಡು ಜಾದೂವಿನ ಹೊಸತನವನ್ನು ಗಮನಿಸಿ ವಿಶ್ವ ಜಾದೂ ಸಮ್ಮೇಳನ ಸಂಘಟಿಸಿದ ಥಾಯ್ ಲ್ಯಾಂಡ್ ಇಂಟರ್ ನ್ಯಾಶನಲ್ ಅಕಾಡೆಮಿ ಆಫ್ ಮ್ಯಾಜಿಕ್ ಸಂಸ್ಥೆ ” ಮೋಸ್ಟ್ ಓರಿಜಿನಲ್ ಆಕ್ಟ್ ” ಪ್ರಶಸ್ತಿ ನೀಡಿ ಪುರಸ್ಕರಿಸಿದೆ.

ಇಂಟರ್ ನ್ಯಾಶನಲ್ ಸೊಸೈಟಿ ಆಫ್ ಮ್ಯಾಜಿಕ್ ಸಂಸ್ಥೆಯ ಅಧ್ಯಕ್ಷರಾದ ಅಮೆರಿಕದ ಜಾದೂಗಾರ ಟೋನಿ ಹಸೀನಿ ಹಾಗೂ ಉಕ್ರೇನಿನ ಜಾದೂಗಾರ ವೊರೋನಿನ್ ಅವರು ಕುದ್ರೋಳಿ ಗಣೇಶ್ ಅವರಿಗೆ ಪುರಸ್ಕಾರ ನೀಡಿ ಗೌರವಿಸಿದರು. ಥಾಯ್ ಲ್ಯಾಂಡ್ ಇಂಟರ್ ನ್ಯಾಶನಲ್ ಅಕಾಡೆಮಿ ಆಫ್ ಮ್ಯಾಜಿಕ್ ಸಂಸ್ಥೆ ಅಧ್ಯಕ್ಷರಾದ ಜಾದೂಗಾರ ಮಮದಾ ಹಾಗೂ ಭಾರತದ ದಿಲ್ಲಿ ಸ್ಕೂಲ್ ಆಫ್ ಮ್ಯಾಜಿಕ್ ಸಂಸ್ಥೆಯ ಅಧ್ಯಕ್ಷರಾದ ಜಾದೂಗಾರ ರಾಜ್ ಕುಮಾರ್ ಉಪಸ್ಥಿತರಿದ್ದರು.


ಹಾಂಗ್ ಕಾಂಗ್ ಜಾದೂಗಾರರಾದ ಅಲ್ಬರ್ಟ್ ಟಾಮ್ ಮತ್ತು ಬಾಂಡ್ ಲೀ, ಇಂಡೋನೇಶಿಯಾದ ಜಾದೂಗಾರ ಹ್ಯಾಂಡಿ, ಸಿಂಗಾಪುರದ ಜಾದೂಗಾರ ಕಸ್ಸಿಡಿ ಲೀ ಮುಂತಾದವರು ಆಯ್ಕೆ ಸಮಿತಿಯಲ್ಲಿದ್ದರು.
ಬ್ಯಾಂಕಾಕ್ ನ ಫ್ಯಾಶನ್ ಐಲ್ಯಾಂಡ್ ಮಾಲ್ ಪ್ರಾಂಗಣದಲ್ಲಿ ನಡೆದ ಐದು ದಿನಗಳ ವಿಶ್ವ ಜಾದೂ ಸಮ್ಮೇಳನದಲ್ಲಿ ಜಗತ್ತಿನ ಹತ್ತಕ್ಕೂ ಹೆಚ್ಚು ದೇಶಗಳ ನೂರಾರು ಜಾದೂಗಾರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು