8:58 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಜಗಜ್ಯೋತಿ ಬಸವೇಶ್ವರ ಸಮುದಾಯ ಭವನ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ

17/03/2023, 18:33

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 26 ನೇ ದೇರೆಬೈಲು ನೈರುತ್ಯ ವಾರ್ಡಿನಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನದ ಕಾಮಗಾರಿಯ ಭೂಮಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಗಜ್ಯೋತಿ ಬಸವೇಶ್ವರ ಸಮುದಾಯ ಭವನದ ನಿರ್ಮಾಣದ ಕುರಿತು ಈ ಹಿಂದೆ ಸಮುದಾಯದ ಮುಖಂಡರಿಗೆ ನೀಡಿದ್ದ ಭರವಸೆಯಂತೆ 75 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ.

ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಸಹಕಾರದೊಂದಿಗೆ ಸರಕಾರದ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಶಾಸಕ ಕಾಮತ್ ಹೇಳಿದರು.
ಮುಂಬರುವ ದಿನಗಳಲ್ಲಿ ಸಮುದಾಯ ಭವನವು ಸಮಾಜದ ಬಂಧುಗಳ ಉಪಯೋಗಕ್ಕಾಗಿ ಕಾರ್ಯ ನಿರ್ವಹಿಸಲಿ ಎಂದು ಆಶಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಉಪಮೇಯರ್ ಪೂರ್ಣಿಮಾ, ಸ್ಥಳೀಯ ಕಾರ್ಪೋರೇಟರ್ ಗಣೇಶ್ ಕುಲಾಲ್, ಬಿಜೆಪಿ ಮುಖಂಡರಾದ ರಮೇಶ್ ಹೆಗ್ಡೆ, ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಾ. ಜಯಪ್ಪ, ಉಪಾಧ್ಯಕ್ಷ ಚನ್ನ ಬಸಪ್ಪ ರೊಟ್ಟಿ, ಪ್ರಧಾನ ಕಾರ್ಯದರ್ಶಿ ವಿವೇಕ್ ಶೆಟ್ಟರ್, ಜೊತೆ ಕಾರ್ಯದರ್ಶಿ ಸುನಂದಾ, ಎಚ್ ಎಸ್ ಗುರುಮೂರ್ತಿ, ಪ್ರದೀಪ್ ಜೆ.ಬಿ, ರುದ್ರಪ್ಪ, ರೂಪಾ ಮಲ್ಲಿಕಾರ್ಜುನ, ತೋಟೇ ಗೌಡ್ರು, ಮಂಗಳ, ಕವಿತಾ ಮುರುಗೇಶ್, ರಾಜೇಂದ್ರಪ್ಪ, ವೀರಣ್ಣ, ಧರ್ಮರಾಜ್, ಸುಷ್ಮಾ, ಲತಾ ಪ್ರಸನ್ನ, ಶಿವಪ್ಪ, ಶಿವಪ್ರಕಾಶ್, ಬಸವರಾಜ್, ಜೀವನ್, ಕರಿ ಬಸಪ್ಪ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು