5:41 PM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಜಾಗತಿಕ ಹೂಡಿಕೆದಾರರ ಸಮಾವೇಶ: ಗ್ರೀಸ್ ಮಾಜಿ ಪ್ರಧಾನಿ ಪಪಾಂಡ್ರಿಯೂ, ಝೆರೋದಾ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಈ ಬಾರಿಯ ಆಕರ್ಷಣೆ

06/02/2025, 09:27

ಬೆಂಗಳೂರು(reporterkarnataka.com): ಇದೇ 11ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಶಿ ತರೂರ್, ಆನಂದ್ ಮಹೀಂದ್ರ, ಕಿರಣ್ ಮಜುಂದಾರ್ ಷಾ, ಪ್ರಶಾಂತ್ ಪ್ರಕಾಶ್, ಗ್ರೀಸ್ ಮಾಜಿ ಪ್ರಧಾನಿ ಜಾರ್ಜ್ ಪಪಾಂಡ್ರಿಯೂ, ವೋಲ್ವೊ ಸಮೂಹದ ಅಧ್ಯಕ್ಷ ಮಾರ್ಟಿನ್ ಲುಂಡ್ ಸ್ಟೆಡ್ ಸೇರಿದಂತೆ 75 ಸಾಧಕ ಉದ್ಯಮಿಗಳು ಮಾತನಾಡಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ಆದಿತ್ಯ ಬಿರ್ಲಾ ಗ್ರೂಪ್ ಅಧ್ಯಕ್ಷ ಕುಮಾರಮಂಗಲಂ‌ ಬಿರ್ಲಾ, ಜಿಂದಾಲ್ ಸ್ಟೀಲ್ ವರ್ಕ್ಸ್ ವ್ಯವಸ್ಥಾಪಕ‌ ನಿರ್ದೇಶಕ ಸಜ್ಜನ್ ಜಿಂದಾಲ್, ಆಯುಷ್ಮಾನ್ ಭಾರತ ಯೋಜನೆಯ ಮಾಜಿ‌ ಸಿಇಒ ಇಂದುಭೂಷಣ್, ಸಿನಿಮಾ ನಿರ್ಮಾಪಕಿ‌ ಕಿರಣ್ ರಾವ್, ಇಸ್ರೋ ಮಾಜಿ ಅಧ್ಯಕ್ಷ ಸೋಮನಾಥ್, ಏಕಸ್ ಸಿಇಒ ಅರವಿಂದ್ ಮೆಳ್ಳಿಗೇರಿ, ಅಮೆರಿಕದ ಇಂಧನ‌ ಇಲಾಖೆಯ ಸಿಐಒ ಆ್ಯನ್ ಡಂಕಿನ್, ಝೆರೋದಾ ಸಹ ಸಂಸ್ಥಾಪಕ ನಿಖಿಲ್ ಕಾಮತ್, ಯೋಜನಾ ಆಯೋಗದ ಮಾಜಿ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ, ಕಿರ್ಲೋಸ್ಕರ್ ಸಮೂಹದ ಎಂಡಿ ಗೀತಾಂಜಲಿ‌ ಕಿರ್ಲೋಸ್ಕರ್ ಕೂಡ ಸಮಾವೇಶದಲ್ಲಿ ವಿವಿಧ ಗೋಷ್ಠಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದಿದ್ದಾರೆ.
ಸಮಾವೇಶದಲ್ಲಿ ಐದು ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ಒಟ್ಟಾರೆಯಾಗಿ 30ಕ್ಕೂ ಹೆಚ್ಚು ಚಿಂತನಾ ಗೋಷ್ಠಿಗಳನ್ನು ಏರ್ಪಡಿಸಲಾಗಿದೆ. ಸಣ್ಣ ಮತ್ತು ಮಧ್ಯಮ ಸ್ತರದ ಕೈಗಾರಿಕೆಗಳು ಹಾಗೂ ನವೋದ್ಯಮಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಮುಖ್ಯವಾಗಿ ಭವಿಷ್ಯದ ತಂತ್ರಜ್ಞಾನ, ಆರ್ಥಿಕತೆ ಮತ್ತು ಕೈಗಾರಿಕಾ ಉದ್ಯಮ ಕುರಿತು ಸಮಾವೇಶದಲ್ಲಿ ಮೂರು ದಿನಗಳ ಕಾಲ ಚರ್ಚಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.
ಸಮಾವೇಶದ ಮೂಲಕ 10 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಆಕರ್ಷಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಈ ಪೈಕಿ ಶೇಕಡಾ 80ರಷ್ಟಾದರೂ ನೈಜ ಹೂಡಿಕೆಯಾಗಿ ಬರಬೇಕು ಎನ್ನುವುದು ನಮ್ಮ ಪ್ರಯತ್ನವಾಗಿದೆ ಎಂದು ಎಂ ಬಿ ಪಾಟೀಲ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು