8:12 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಜಾಗತಿಕ ಹೂಡಿಕೆದಾರರ ಸಮಾವೇಶ: 16 ದೇಶಗಳ ರಾಯಭಾರಿಗಳು ಭಾಗಿ; ಸಚಿವರ, ಉದ್ಯಮಿಗಳ ದಂಡು

11/02/2025, 21:19

ಬೆಂಗಳೂರು(reporterkarnataka.com):ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5,000ಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳಲ್ಲದೆ, ಹಲವು ದೇಶಗಳ ರಾಯಭಾರಿಗಳು ಕೂಡ ಭಾಗವಹಿಸಿದ್ದಾರೆ.
ಇವರಲ್ಲಿ ಬಹ್ರೇನ್ ರಾಯಭಾರಿ ಮಹಮದ್ ಅಲ್ ಗಾವ್ಡ್, ಕ್ಯೂಬಾದ ಅಬೆಲ್ ಅಬಾಲ್ ಡೆಸ್ಪೇನ್, ಇಟಲಿಯ ಆಂಟೋನಿಯೊ ಬಾರ್ತೋಲಿ, ನೇಪಾಳದ ಡಾ.ಶಂಕರ್ ಪ್ರಸಾದ್ ಶರ್ಮ, ಪೋಲೆಂಡಿನ ಸೆಬಾಸ್ಟಿಯನ್ ಡಾಮ್ಜಾಲ್ಸ್ಕಿ, ಮಲೇಷ್ಯಾದ ದಾತೊ ಮಜಾಫರ್ ಷಾ ಮುಸ್ತಫ, ಜಪಾನಿನ ಓನೋ ಕೀಚಿ, ಕಾಂಗೋದ ರೇಮಂಡ್ ಸರ್ಜ್ ಬೇಲ್, ಜಮೈಕಾದ ಜೇಸನ್ ಹಾಲ್ ಫಿಜಿಯ ಜಗನ್ನಾಥ ಸ್ವಾಮಿ, ಜಮೈಕಾದ ಜೇಸನ್ ಹಾಲ್, ಕಝಕಸ್ತಾನದ ನೂರುಲಾನ್ ಝಲ್ಗಸ್ಬಯೇವ್, ಮೊರಾಕ್ಕೋದ ಮಹಮದ್ ಮಾಲೀಕಿ, ಸೀಷೆಲ್ಸ್ ನ ಲಲಟಿಯಾನಾ ಅಕೌಷೆ, ತಝಕಿಸ್ತಾನದ ಲೂಕ್ಮನ್ ಬೊಬಕಾಲೊಜೋಡ, ಟೋಗೋದ ಯಾವೋ ಇಡೆಂ ಮತ್ತು ಜಿಂಬಾಬ್ವೆಯ ಸ್ಟೆಲ್ಲಾ ನೋಮೋ ಸೇರಿದ್ದಾರೆ.
*ಸಚಿವರ, ಉದ್ಯಮಿಗಳ ದಂಡು:* ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ರಾಜನಾಥಸಿಂಗ್, ಪ್ರಹ್ಲಾದ್ ಜೋಶಿ, ರಾಜ್ಯ ಸಂಪುಟದ ಸಚಿವರಾದ ಜಿ.ಪರಮೇಶ್ವರ, ಕೆ ಜೆ ಜಾರ್ಜ್, ಪ್ರಿಯಾಂಕ ಖರ್ಗೆ, ಡಾ. ಎಂ ಸಿ ಸುಧಾಕರ್ ಎಚ್ ಸಿ ಮಹದೇವಪ್ಪ, ಕೆ ಎಚ್ ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಡಾ.ಶರಣ ಪ್ರಕಾಶ ಪಾಟೀಲ, ಶಿವಾನಂದ‌ ಪಾಟೀಲ ಕೂಡ ಹಾಜರಿದ್ದರು.
ಗಣ್ಯ ಉದ್ಯಮಿಗಳಾದ ಆನಂದ್ ಮಹೀಂದ್ರ, ಸಜ್ಜನ್ ಜಿಂದಾಲ್, ಕಿರಣ್ ಮಜುಂದಾರ್ ಷಾ, ಗೀತಾಂಜಲಿ ಕಿರ್ಲೋಸ್ಕರ್, ರಾಹುಲ್ ಬಜಾಜ್, ಶೇಷ ವರದರಾಜನ್, ಪ್ರಶಾಂತ್ ಪ್ರಕಾಶ್ ಮುಂತಾದವರು ಕೂಡ ಪಾಲ್ಗೊಂಡಿದ್ದರು. ಇವರನ್ನೆಲ್ಲ ಸಚಿವ ಎಂ. ಬಿ. ಪಾಟೀಲ್ ಅವರು ಶಾಲು ಹೊದಿಸಿ, ಕಾಣಿಕೆ ನೀಡಿ, ರಾಜ್ಯದ ಪರವಾಗಿ ಬರಮಾಡಿಕೊಂಡರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಸೆಲ್ವಕುಮಾರ್ ಸೇರಿದಂತೆ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು