2:29 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಜಾಗತಿಕ ಹೂಡಿಕೆದಾರರ ಸಮಾವೇಶ: 16 ದೇಶಗಳ ರಾಯಭಾರಿಗಳು ಭಾಗಿ; ಸಚಿವರ, ಉದ್ಯಮಿಗಳ ದಂಡು

11/02/2025, 21:19

ಬೆಂಗಳೂರು(reporterkarnataka.com):ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5,000ಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳಲ್ಲದೆ, ಹಲವು ದೇಶಗಳ ರಾಯಭಾರಿಗಳು ಕೂಡ ಭಾಗವಹಿಸಿದ್ದಾರೆ.
ಇವರಲ್ಲಿ ಬಹ್ರೇನ್ ರಾಯಭಾರಿ ಮಹಮದ್ ಅಲ್ ಗಾವ್ಡ್, ಕ್ಯೂಬಾದ ಅಬೆಲ್ ಅಬಾಲ್ ಡೆಸ್ಪೇನ್, ಇಟಲಿಯ ಆಂಟೋನಿಯೊ ಬಾರ್ತೋಲಿ, ನೇಪಾಳದ ಡಾ.ಶಂಕರ್ ಪ್ರಸಾದ್ ಶರ್ಮ, ಪೋಲೆಂಡಿನ ಸೆಬಾಸ್ಟಿಯನ್ ಡಾಮ್ಜಾಲ್ಸ್ಕಿ, ಮಲೇಷ್ಯಾದ ದಾತೊ ಮಜಾಫರ್ ಷಾ ಮುಸ್ತಫ, ಜಪಾನಿನ ಓನೋ ಕೀಚಿ, ಕಾಂಗೋದ ರೇಮಂಡ್ ಸರ್ಜ್ ಬೇಲ್, ಜಮೈಕಾದ ಜೇಸನ್ ಹಾಲ್ ಫಿಜಿಯ ಜಗನ್ನಾಥ ಸ್ವಾಮಿ, ಜಮೈಕಾದ ಜೇಸನ್ ಹಾಲ್, ಕಝಕಸ್ತಾನದ ನೂರುಲಾನ್ ಝಲ್ಗಸ್ಬಯೇವ್, ಮೊರಾಕ್ಕೋದ ಮಹಮದ್ ಮಾಲೀಕಿ, ಸೀಷೆಲ್ಸ್ ನ ಲಲಟಿಯಾನಾ ಅಕೌಷೆ, ತಝಕಿಸ್ತಾನದ ಲೂಕ್ಮನ್ ಬೊಬಕಾಲೊಜೋಡ, ಟೋಗೋದ ಯಾವೋ ಇಡೆಂ ಮತ್ತು ಜಿಂಬಾಬ್ವೆಯ ಸ್ಟೆಲ್ಲಾ ನೋಮೋ ಸೇರಿದ್ದಾರೆ.
*ಸಚಿವರ, ಉದ್ಯಮಿಗಳ ದಂಡು:* ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ರಾಜನಾಥಸಿಂಗ್, ಪ್ರಹ್ಲಾದ್ ಜೋಶಿ, ರಾಜ್ಯ ಸಂಪುಟದ ಸಚಿವರಾದ ಜಿ.ಪರಮೇಶ್ವರ, ಕೆ ಜೆ ಜಾರ್ಜ್, ಪ್ರಿಯಾಂಕ ಖರ್ಗೆ, ಡಾ. ಎಂ ಸಿ ಸುಧಾಕರ್ ಎಚ್ ಸಿ ಮಹದೇವಪ್ಪ, ಕೆ ಎಚ್ ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಡಾ.ಶರಣ ಪ್ರಕಾಶ ಪಾಟೀಲ, ಶಿವಾನಂದ‌ ಪಾಟೀಲ ಕೂಡ ಹಾಜರಿದ್ದರು.
ಗಣ್ಯ ಉದ್ಯಮಿಗಳಾದ ಆನಂದ್ ಮಹೀಂದ್ರ, ಸಜ್ಜನ್ ಜಿಂದಾಲ್, ಕಿರಣ್ ಮಜುಂದಾರ್ ಷಾ, ಗೀತಾಂಜಲಿ ಕಿರ್ಲೋಸ್ಕರ್, ರಾಹುಲ್ ಬಜಾಜ್, ಶೇಷ ವರದರಾಜನ್, ಪ್ರಶಾಂತ್ ಪ್ರಕಾಶ್ ಮುಂತಾದವರು ಕೂಡ ಪಾಲ್ಗೊಂಡಿದ್ದರು. ಇವರನ್ನೆಲ್ಲ ಸಚಿವ ಎಂ. ಬಿ. ಪಾಟೀಲ್ ಅವರು ಶಾಲು ಹೊದಿಸಿ, ಕಾಣಿಕೆ ನೀಡಿ, ರಾಜ್ಯದ ಪರವಾಗಿ ಬರಮಾಡಿಕೊಂಡರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಸೆಲ್ವಕುಮಾರ್ ಸೇರಿದಂತೆ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು