8:12 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಜಾಗತಿಕ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ: ಬೆಂಗಳೂರು ವಿವಿ ಭೌತಶಾಸ್ತ್ರ ಪ್ರಾಧ್ಯಾಪಕ ಡಾ.ಬಿ.ಈರಯ್ಯಗೆ ಸ್ಥಾನ

12/10/2023, 13:36

ಬೆಂಗಳೂರು(reporterkarnataka.com): 2023ನೇ ವರ್ಷದ ವಿಶ್ವ ಅಗ್ರಮಾನ್ಯ ಶೇ. 2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಬಿ.ಈರಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.

ಅಮೆರಿಕದ ಸ್ಟ್ಯಾನ್‌ ಫೋರ್ಡ್‌ ವಿಶ್ವವಿದ್ಯಾಲಯ ಮತ್ತು ನೆದರ್ ಲ್ಯಾಂಡಿನ ಎಲ್ಸೆ ವಿಯರ್ ಪ್ರಕಾಶನ ಸಂಸ್ಥೆಯ 2023ನೇ ಜಾಗತಿಕ ಉನ್ನತ ಮಟ್ಟದ ಶೇ. 2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ (Glass Science and Technology) ಗಾಜಿನ ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿನ ಸಂಶೋಧನೆಗಾಗಿ ಬಿಡುಗಡೆ ಮಾಡಿರುವ ಅಗ್ರಮಾನ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಗುರುತಿಸಿ ಕೊಂಡಿದ್ದಾರೆ.
ಪ್ರತಿ ವರ್ಷ ಸೈಟೇಷನ್ ಇಂಡೆಕ್ಸ್‌ ಆಧಾರದ ಮೇಲೆ ಒಂದು ಲಕ್ಷಕ್ಕೂ ಹೆಚ್ಚು ವಿಜ್ಞಾನಿಗಳನ್ನು ಗುರುತಿಸಿ, ಶ್ರೇಷ್ಠ ಶೇ. 2 ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಕಲ್ಪಿಸುತ್ತದೆ.
ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಬಿ. ಈರಯ್ಯ ಅವರು ಅಂತರಾಷ್ಟ್ರೀಯವಾಗಿ ಪ್ರಕಟವಾದ 145 ಸಂಶೋಧನಾ ಪ್ರಕಟಣೆಗಳು,1653 ಸೈಟೇಷನ್, 24 ಹೆಚ್ ಇಂಡೆಕ್ಸ್), 37 ಐ 10 ಇಂಡೆಕ್ಸ್ (i 10-index), (Glass Science and Technology) ಗಾಜಿನ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಇವರು 145 ಸಂಶೋಧನಾ ಲೇಖನಗಳನ್ನು
ಪರಿಶೀಲಿಸಿದ ನಂತರ ಜಾಗತಿಕ ಶ್ರೇಷ್ಠದ ಶೇ.2ರಷ್ಟು ಅಗ್ರ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಟ್ಯಾನ್‌ ಫೋರ್ಡ್‌ ವಿಶ್ವವಿದ್ಯಾಲಯವು ಇತ್ತೀಚೆಗೆ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸೇರಿರುವುದು ವಿಶೇಷವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು