5:58 AM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಜೈನ ಮುನಿಯ ಬರ್ಬರ ಹತ್ಯೆ: ಇನ್ನೂ ಪತ್ತೆಯಾಗದ ಪಾರ್ಥಿವ ಶರೀರ; ಇಬ್ಬರ ಬಂಧನ; ಆಪ್ತರಿಂದಲೇ ದುಷ್ಕೃತ್ಯ?

08/07/2023, 16:04

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿ
ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಇದೀಗ ಅವರು ಹತ್ಯೆಗೀಡಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಆಪ್ತರೇ ಕೊಲೆ ಮಾಡಿರುವುದು ಗೊತ್ತಾಗಿದ್ದು ಹತ್ಯೆಗೆ ಕಾರಣ ಹಾಗೂ ಶವ ಇನ್ನೂ ಪತ್ತೆಯಾಗಬೇಕಿದೆ.


ಜುಲೈ 6ರಿಂದ ನಂದಿಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದ ಜೈನಮುನಿಗಾಗಿ ಜುಲೈ 6ರಂದು ಇಡೀ ದಿನ ಆಶ್ರಮದ ಸುತ್ತಮುತ್ತ ಭಕ್ತರು ಶೋಧ ನಡೆಸಿದ್ದರು. ಬಳಿಕ ನಿನ್ನೆ ಚಿಕ್ಕೋಡಿ ಪೊಲೀಸ್ ಠಾಣೆಗೆ ಜೈನಮುನಿಗಳು ನಾಪತ್ತೆಯಾದ ಬಗ್ಗೆ ದೂರು ನೀಡಿದ್ದರು. ಕಳೆದ 15 ವರ್ಷಗಳಿಂದ ನಂದಿಪರ್ವತ ಆಶ್ರಮದಲ್ಲಿ ಮುನಿ ವಾಸವಿದ್ದರು. ಅವರು ನಾಪತ್ತೆಯಾದ ಬಗ್ಗೆ ಆಚಾರ್ಯ ಕಾಮಕುಮಾರ ನಂದಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಉಗಾರೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಚಿಕ್ಕೋಡಿ ಪೊಲೀಸರು, ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದರು. ತನಿಖೆಯ ವೇಳೆ ಜೈನಮುನಿಯ ಹತ್ಯೆಯಾಗಿರುವುದು ಬಯಲಾಗಿದೆ. ತನಿಖೆ ಸಂದರ್ಭದಲ್ಲಿ ರಾತ್ರಿಯಿಡೀ ಇಬ್ಬರು ಆರೋಪಿಗಳು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದರು. ಹತ್ಯೆ ಮಾಡಿ ಶವ ಎಲ್ಲಿ ಬಿಸಾಕಿದ್ದೇವೆ ಎಂದು ಸ್ಪಷ್ಟ ಮಾಹಿತಿ ನೀಡದೇ ಸತಾಯಿಸಿದ್ದರು. ಒಂದು ಬಾರಿ ಕೊಲೆ ಮಾಡಿ ಮೃತದೇಹ ಕತ್ತರಿಸಿ ಕಟಕಬಾವಿ ಗ್ರಾಮದಲ್ಲಿ ತೆರೆದ ಕೊಳವೆಬಾವಿಯಲ್ಲಿ ಎಸೆದಿದ್ದೇವೆ ಎಂದಿದ್ದರು. ಮತ್ತೊಂದು ಬಾರಿ ಮೃತದೇಹ ಬಟ್ಟೆಯಲ್ಲಿ ಸುತ್ತಿ ನದಿಗೆ ಎಸೆದಿದ್ದೇವೆ ಎಂದಿದ್ದರು. ಕಟಕಬಾವಿ ಗ್ರಾಮದಲ್ಲಿ ರಾತ್ರಿಯಿಡೀ ಪರಿಶೀಲನೆ ನಡೆಸಿದ ಪೊಲೀಸರಿಗೆ ಶವ ದೊರೆತಿಲ್ಲ. ಇಂದು ಬೆಳಗ್ಗೆ 6.30ರಿಂದ ಮುನಿಗಳ ಮೃತದೇಹದ ಶೋಧ ಕಾರ್ಯ ಮತ್ತೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು