2:07 PM Friday10 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:…

ಇತ್ತೀಚಿನ ಸುದ್ದಿ

ಜೈ ತುಳುನಾಡ್ ಬೆಂಗಳೂರು ಘಟಕದ ವಾರ್ಷಿಕ ಮಹಾಸಭೆ: ಧನಂಜಯ ಆಚಾರ್ಯ ನೂತನ ಅಧ್ಯಕ್ಷ

20/03/2024, 11:30

ಬೆಂಗಳೂರು(reporterkarnataka.com): ಜೈ ತುಳುನಾಡ್ ಬೆಂಗಳೂರು ಘಟಕದ ವಾರ್ಷಿಕ ಮಹಾಸಭೆ ಭಾನುವಾರ ಮೆಜೆಸ್ಟಿಕ್ ನ ಸ್ವಾಗತ್ ಹೋಟೆಲಿನಲ್ಲಿ ನಡೆಯಿತು.


ಸಭೆಯಲ್ಲಿ ಪ್ರಸ್ತುತ ಸಮಿತಿ ಕಳೆದ ವರ್ಷ ಮಾಡಿದ ತುಳು ಪರವಾದ ಕಾರ್ಯಕ್ರಮಗಳ ಬಗ್ಗೆ ವರದಿ ವಾಚನ ಸಲ್ಲಿಸಲಾಯಿತು. ಹಾಗೆಯೇ ಸಂಸ್ಥಾಪಕ ಸಮಿತಿಯ ಮಾರ್ಗದರ್ಶನದಲ್ಲಿ, ಜೈ ತುಳುನಾಡ್ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ವಿಶು ಶ್ರೀಕೇರ ಅವರ ಉಪಸ್ಥಿತಿಯಲ್ಲಿ ಹೊಸ ಸಮಿತಿ ರಚನೆಯಾಯಿತು. ಧನಂಜಯ ಆಚಾರ್ಯ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ನಿಧೀಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಅಕ್ಷಯ್ ಆಚಾರ್ಯ, ಜೊತೆ ಕಾರ್ಯದರ್ಶಿಗಳಾಗಿ ಶಕುಂತಳಾ ಹಾಗೂ ವಿನಯ್, ಖಜಾಂಜಿಯಾಗಿ ಅನುದೀಪ್ ಶೆಟ್ಟಿ , ಜೊತೆ ಖಜಾಂಜಿಯಾಗಿ ಪ್ರಗತಿ ಎಸ್., ಸಂಘಟನಾ ಕಾರ್ಯದರ್ಶಿಗಳಾಗಿ ಶರತ್ ಕೊಡವೂರು, ಕಾಶಿನಾಥ್ ಮತ್ತು ಪ್ರಶಾಂತ್ ಅವರು ಆಯ್ಕೆಯಾದರು.
ಅಧ್ಯಕ್ಷರಾಗಿ ಆಯ್ಕೆಯಾದ, ಧನಂಜಯ ಆಚಾರ್ಯ ಅವರು ಮಾತನಾಡುತ್ತಾ ತುಳು ಭಾಷೆಯ ಬೆಳವಣಿಗೆ ಹಾಗೂ ತುಳು ಭಾಷೆಯ ಉಳಿವಿಗೆ ಶ್ರಮಿಸುವೆ ಮತ್ತು ತುಳುಪರ ಕೆಲಸ ಮಾಡುವವರ ಜೊತೆ ನಾವು ಬೆನ್ನುಲುಬಾಗಿ ನಿಲ್ಲುತ್ತೇವೆ. ಆ ಸಲುವಾಗಿ ಸರ್ವ ತುಳುವರ ಸಹಕಾರವನ್ನು ಕೋರುತ್ತೇವೆ ಎಂದು
ಹೇಳಿದರು.
ವಿಶು ಶ್ರೀಕೇರ ಅವರು ಮಾತನಾಡುತ್ತಾ ಜೈ ತುಳುನಾಡು (ರಿ.) ಸಂಘಟನೆಯ ಸಾಧನೆಯ ಬಗ್ಗೆ, ಸಾಮರ್ಥ್ಯದ ಬಗ್ಗೆ ತಿಳಿಸುತ್ತಾ ಹೊಸ ಘಟಕದ ಅವಧಿಯಲ್ಲಿ ಸಂಘಟನೆ ಇನ್ನಷ್ಟು ಬಲಿಷ್ಠವಾಗಲಿ ಎಂದು ಶುಭ ಹಾರೈಸಿದರು. ಘಟಕದ ಮಾಜಿ ಅಧ್ಯಕ್ಷರಾದ ವಿಶಾಲ್ ಕೊಡಿಯಾಲ್ ಅವರು ತಮ್ಮ ಅವಧಿಯಲ್ಲಿ ಘಟಕದ ವತಿಯಿಂದಾಗಿರುವ ಸಾಧನೆಗಳನ್ನು ವಿವರಿಸಿದರು ಹಾಗೂ ಅವಕಾಶ ಕಲ್ಪಿಸಿದ ಸಂಘಟನೆಗೆ ಕೃತಜ್ಞತೆಯನ್ನು ಸಲ್ಲಿಸಿದರು. ನಿಧೀಶ್ ಶೆಟ್ಟಿ ಯವರು ವರದಿ ವಾಚಿಸಿದರು. ಧನಂಜಯ ಅವರು ಲೆಕ್ಕಪತ್ರ ವಾಚಿಸಿದರು. ಸಭೆಯಲ್ಲಿ ಸ್ಥಾಪಕ ಸಮಿತಿಯ ಸದಸ್ಯರು , ಕೇಂದ್ರ ಸಮಿತಿಯ ಸದಸ್ಯರು ಹಾಗೂ ಘಟಕದ ಸದಸ್ಯರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು