2:55 PM Sunday14 - December 2025
ಬ್ರೇಕಿಂಗ್ ನ್ಯೂಸ್
ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್…

ಇತ್ತೀಚಿನ ಸುದ್ದಿ

ಜೈ ತುಳುನಾಡ್ ಬೆಂಗಳೂರು ಘಟಕದ ವಾರ್ಷಿಕ ಮಹಾಸಭೆ: ಧನಂಜಯ ಆಚಾರ್ಯ ನೂತನ ಅಧ್ಯಕ್ಷ

20/03/2024, 11:30

ಬೆಂಗಳೂರು(reporterkarnataka.com): ಜೈ ತುಳುನಾಡ್ ಬೆಂಗಳೂರು ಘಟಕದ ವಾರ್ಷಿಕ ಮಹಾಸಭೆ ಭಾನುವಾರ ಮೆಜೆಸ್ಟಿಕ್ ನ ಸ್ವಾಗತ್ ಹೋಟೆಲಿನಲ್ಲಿ ನಡೆಯಿತು.


ಸಭೆಯಲ್ಲಿ ಪ್ರಸ್ತುತ ಸಮಿತಿ ಕಳೆದ ವರ್ಷ ಮಾಡಿದ ತುಳು ಪರವಾದ ಕಾರ್ಯಕ್ರಮಗಳ ಬಗ್ಗೆ ವರದಿ ವಾಚನ ಸಲ್ಲಿಸಲಾಯಿತು. ಹಾಗೆಯೇ ಸಂಸ್ಥಾಪಕ ಸಮಿತಿಯ ಮಾರ್ಗದರ್ಶನದಲ್ಲಿ, ಜೈ ತುಳುನಾಡ್ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ವಿಶು ಶ್ರೀಕೇರ ಅವರ ಉಪಸ್ಥಿತಿಯಲ್ಲಿ ಹೊಸ ಸಮಿತಿ ರಚನೆಯಾಯಿತು. ಧನಂಜಯ ಆಚಾರ್ಯ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ನಿಧೀಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಅಕ್ಷಯ್ ಆಚಾರ್ಯ, ಜೊತೆ ಕಾರ್ಯದರ್ಶಿಗಳಾಗಿ ಶಕುಂತಳಾ ಹಾಗೂ ವಿನಯ್, ಖಜಾಂಜಿಯಾಗಿ ಅನುದೀಪ್ ಶೆಟ್ಟಿ , ಜೊತೆ ಖಜಾಂಜಿಯಾಗಿ ಪ್ರಗತಿ ಎಸ್., ಸಂಘಟನಾ ಕಾರ್ಯದರ್ಶಿಗಳಾಗಿ ಶರತ್ ಕೊಡವೂರು, ಕಾಶಿನಾಥ್ ಮತ್ತು ಪ್ರಶಾಂತ್ ಅವರು ಆಯ್ಕೆಯಾದರು.
ಅಧ್ಯಕ್ಷರಾಗಿ ಆಯ್ಕೆಯಾದ, ಧನಂಜಯ ಆಚಾರ್ಯ ಅವರು ಮಾತನಾಡುತ್ತಾ ತುಳು ಭಾಷೆಯ ಬೆಳವಣಿಗೆ ಹಾಗೂ ತುಳು ಭಾಷೆಯ ಉಳಿವಿಗೆ ಶ್ರಮಿಸುವೆ ಮತ್ತು ತುಳುಪರ ಕೆಲಸ ಮಾಡುವವರ ಜೊತೆ ನಾವು ಬೆನ್ನುಲುಬಾಗಿ ನಿಲ್ಲುತ್ತೇವೆ. ಆ ಸಲುವಾಗಿ ಸರ್ವ ತುಳುವರ ಸಹಕಾರವನ್ನು ಕೋರುತ್ತೇವೆ ಎಂದು
ಹೇಳಿದರು.
ವಿಶು ಶ್ರೀಕೇರ ಅವರು ಮಾತನಾಡುತ್ತಾ ಜೈ ತುಳುನಾಡು (ರಿ.) ಸಂಘಟನೆಯ ಸಾಧನೆಯ ಬಗ್ಗೆ, ಸಾಮರ್ಥ್ಯದ ಬಗ್ಗೆ ತಿಳಿಸುತ್ತಾ ಹೊಸ ಘಟಕದ ಅವಧಿಯಲ್ಲಿ ಸಂಘಟನೆ ಇನ್ನಷ್ಟು ಬಲಿಷ್ಠವಾಗಲಿ ಎಂದು ಶುಭ ಹಾರೈಸಿದರು. ಘಟಕದ ಮಾಜಿ ಅಧ್ಯಕ್ಷರಾದ ವಿಶಾಲ್ ಕೊಡಿಯಾಲ್ ಅವರು ತಮ್ಮ ಅವಧಿಯಲ್ಲಿ ಘಟಕದ ವತಿಯಿಂದಾಗಿರುವ ಸಾಧನೆಗಳನ್ನು ವಿವರಿಸಿದರು ಹಾಗೂ ಅವಕಾಶ ಕಲ್ಪಿಸಿದ ಸಂಘಟನೆಗೆ ಕೃತಜ್ಞತೆಯನ್ನು ಸಲ್ಲಿಸಿದರು. ನಿಧೀಶ್ ಶೆಟ್ಟಿ ಯವರು ವರದಿ ವಾಚಿಸಿದರು. ಧನಂಜಯ ಅವರು ಲೆಕ್ಕಪತ್ರ ವಾಚಿಸಿದರು. ಸಭೆಯಲ್ಲಿ ಸ್ಥಾಪಕ ಸಮಿತಿಯ ಸದಸ್ಯರು , ಕೇಂದ್ರ ಸಮಿತಿಯ ಸದಸ್ಯರು ಹಾಗೂ ಘಟಕದ ಸದಸ್ಯರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು