1:41 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಜೈ ತುಳುನಾಡ್ ಬೆಂಗಳೂರು ಘಟಕದ ವಾರ್ಷಿಕ ಮಹಾಸಭೆ: ಧನಂಜಯ ಆಚಾರ್ಯ ನೂತನ ಅಧ್ಯಕ್ಷ

20/03/2024, 11:30

ಬೆಂಗಳೂರು(reporterkarnataka.com): ಜೈ ತುಳುನಾಡ್ ಬೆಂಗಳೂರು ಘಟಕದ ವಾರ್ಷಿಕ ಮಹಾಸಭೆ ಭಾನುವಾರ ಮೆಜೆಸ್ಟಿಕ್ ನ ಸ್ವಾಗತ್ ಹೋಟೆಲಿನಲ್ಲಿ ನಡೆಯಿತು.


ಸಭೆಯಲ್ಲಿ ಪ್ರಸ್ತುತ ಸಮಿತಿ ಕಳೆದ ವರ್ಷ ಮಾಡಿದ ತುಳು ಪರವಾದ ಕಾರ್ಯಕ್ರಮಗಳ ಬಗ್ಗೆ ವರದಿ ವಾಚನ ಸಲ್ಲಿಸಲಾಯಿತು. ಹಾಗೆಯೇ ಸಂಸ್ಥಾಪಕ ಸಮಿತಿಯ ಮಾರ್ಗದರ್ಶನದಲ್ಲಿ, ಜೈ ತುಳುನಾಡ್ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ವಿಶು ಶ್ರೀಕೇರ ಅವರ ಉಪಸ್ಥಿತಿಯಲ್ಲಿ ಹೊಸ ಸಮಿತಿ ರಚನೆಯಾಯಿತು. ಧನಂಜಯ ಆಚಾರ್ಯ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ನಿಧೀಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಅಕ್ಷಯ್ ಆಚಾರ್ಯ, ಜೊತೆ ಕಾರ್ಯದರ್ಶಿಗಳಾಗಿ ಶಕುಂತಳಾ ಹಾಗೂ ವಿನಯ್, ಖಜಾಂಜಿಯಾಗಿ ಅನುದೀಪ್ ಶೆಟ್ಟಿ , ಜೊತೆ ಖಜಾಂಜಿಯಾಗಿ ಪ್ರಗತಿ ಎಸ್., ಸಂಘಟನಾ ಕಾರ್ಯದರ್ಶಿಗಳಾಗಿ ಶರತ್ ಕೊಡವೂರು, ಕಾಶಿನಾಥ್ ಮತ್ತು ಪ್ರಶಾಂತ್ ಅವರು ಆಯ್ಕೆಯಾದರು.
ಅಧ್ಯಕ್ಷರಾಗಿ ಆಯ್ಕೆಯಾದ, ಧನಂಜಯ ಆಚಾರ್ಯ ಅವರು ಮಾತನಾಡುತ್ತಾ ತುಳು ಭಾಷೆಯ ಬೆಳವಣಿಗೆ ಹಾಗೂ ತುಳು ಭಾಷೆಯ ಉಳಿವಿಗೆ ಶ್ರಮಿಸುವೆ ಮತ್ತು ತುಳುಪರ ಕೆಲಸ ಮಾಡುವವರ ಜೊತೆ ನಾವು ಬೆನ್ನುಲುಬಾಗಿ ನಿಲ್ಲುತ್ತೇವೆ. ಆ ಸಲುವಾಗಿ ಸರ್ವ ತುಳುವರ ಸಹಕಾರವನ್ನು ಕೋರುತ್ತೇವೆ ಎಂದು
ಹೇಳಿದರು.
ವಿಶು ಶ್ರೀಕೇರ ಅವರು ಮಾತನಾಡುತ್ತಾ ಜೈ ತುಳುನಾಡು (ರಿ.) ಸಂಘಟನೆಯ ಸಾಧನೆಯ ಬಗ್ಗೆ, ಸಾಮರ್ಥ್ಯದ ಬಗ್ಗೆ ತಿಳಿಸುತ್ತಾ ಹೊಸ ಘಟಕದ ಅವಧಿಯಲ್ಲಿ ಸಂಘಟನೆ ಇನ್ನಷ್ಟು ಬಲಿಷ್ಠವಾಗಲಿ ಎಂದು ಶುಭ ಹಾರೈಸಿದರು. ಘಟಕದ ಮಾಜಿ ಅಧ್ಯಕ್ಷರಾದ ವಿಶಾಲ್ ಕೊಡಿಯಾಲ್ ಅವರು ತಮ್ಮ ಅವಧಿಯಲ್ಲಿ ಘಟಕದ ವತಿಯಿಂದಾಗಿರುವ ಸಾಧನೆಗಳನ್ನು ವಿವರಿಸಿದರು ಹಾಗೂ ಅವಕಾಶ ಕಲ್ಪಿಸಿದ ಸಂಘಟನೆಗೆ ಕೃತಜ್ಞತೆಯನ್ನು ಸಲ್ಲಿಸಿದರು. ನಿಧೀಶ್ ಶೆಟ್ಟಿ ಯವರು ವರದಿ ವಾಚಿಸಿದರು. ಧನಂಜಯ ಅವರು ಲೆಕ್ಕಪತ್ರ ವಾಚಿಸಿದರು. ಸಭೆಯಲ್ಲಿ ಸ್ಥಾಪಕ ಸಮಿತಿಯ ಸದಸ್ಯರು , ಕೇಂದ್ರ ಸಮಿತಿಯ ಸದಸ್ಯರು ಹಾಗೂ ಘಟಕದ ಸದಸ್ಯರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು