8:08 PM Friday27 - February 2026
ಬ್ರೇಕಿಂಗ್ ನ್ಯೂಸ್
ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12…

ಇತ್ತೀಚಿನ ಸುದ್ದಿ

ಜೈ ತುಳುನಾಡ್ ಬೆಂಗಳೂರು ಘಟಕದ ವಾರ್ಷಿಕ ಮಹಾಸಭೆ: ಧನಂಜಯ ಆಚಾರ್ಯ ನೂತನ ಅಧ್ಯಕ್ಷ

20/03/2024, 11:30

ಬೆಂಗಳೂರು(reporterkarnataka.com): ಜೈ ತುಳುನಾಡ್ ಬೆಂಗಳೂರು ಘಟಕದ ವಾರ್ಷಿಕ ಮಹಾಸಭೆ ಭಾನುವಾರ ಮೆಜೆಸ್ಟಿಕ್ ನ ಸ್ವಾಗತ್ ಹೋಟೆಲಿನಲ್ಲಿ ನಡೆಯಿತು.


ಸಭೆಯಲ್ಲಿ ಪ್ರಸ್ತುತ ಸಮಿತಿ ಕಳೆದ ವರ್ಷ ಮಾಡಿದ ತುಳು ಪರವಾದ ಕಾರ್ಯಕ್ರಮಗಳ ಬಗ್ಗೆ ವರದಿ ವಾಚನ ಸಲ್ಲಿಸಲಾಯಿತು. ಹಾಗೆಯೇ ಸಂಸ್ಥಾಪಕ ಸಮಿತಿಯ ಮಾರ್ಗದರ್ಶನದಲ್ಲಿ, ಜೈ ತುಳುನಾಡ್ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ವಿಶು ಶ್ರೀಕೇರ ಅವರ ಉಪಸ್ಥಿತಿಯಲ್ಲಿ ಹೊಸ ಸಮಿತಿ ರಚನೆಯಾಯಿತು. ಧನಂಜಯ ಆಚಾರ್ಯ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ನಿಧೀಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಅಕ್ಷಯ್ ಆಚಾರ್ಯ, ಜೊತೆ ಕಾರ್ಯದರ್ಶಿಗಳಾಗಿ ಶಕುಂತಳಾ ಹಾಗೂ ವಿನಯ್, ಖಜಾಂಜಿಯಾಗಿ ಅನುದೀಪ್ ಶೆಟ್ಟಿ , ಜೊತೆ ಖಜಾಂಜಿಯಾಗಿ ಪ್ರಗತಿ ಎಸ್., ಸಂಘಟನಾ ಕಾರ್ಯದರ್ಶಿಗಳಾಗಿ ಶರತ್ ಕೊಡವೂರು, ಕಾಶಿನಾಥ್ ಮತ್ತು ಪ್ರಶಾಂತ್ ಅವರು ಆಯ್ಕೆಯಾದರು.
ಅಧ್ಯಕ್ಷರಾಗಿ ಆಯ್ಕೆಯಾದ, ಧನಂಜಯ ಆಚಾರ್ಯ ಅವರು ಮಾತನಾಡುತ್ತಾ ತುಳು ಭಾಷೆಯ ಬೆಳವಣಿಗೆ ಹಾಗೂ ತುಳು ಭಾಷೆಯ ಉಳಿವಿಗೆ ಶ್ರಮಿಸುವೆ ಮತ್ತು ತುಳುಪರ ಕೆಲಸ ಮಾಡುವವರ ಜೊತೆ ನಾವು ಬೆನ್ನುಲುಬಾಗಿ ನಿಲ್ಲುತ್ತೇವೆ. ಆ ಸಲುವಾಗಿ ಸರ್ವ ತುಳುವರ ಸಹಕಾರವನ್ನು ಕೋರುತ್ತೇವೆ ಎಂದು
ಹೇಳಿದರು.
ವಿಶು ಶ್ರೀಕೇರ ಅವರು ಮಾತನಾಡುತ್ತಾ ಜೈ ತುಳುನಾಡು (ರಿ.) ಸಂಘಟನೆಯ ಸಾಧನೆಯ ಬಗ್ಗೆ, ಸಾಮರ್ಥ್ಯದ ಬಗ್ಗೆ ತಿಳಿಸುತ್ತಾ ಹೊಸ ಘಟಕದ ಅವಧಿಯಲ್ಲಿ ಸಂಘಟನೆ ಇನ್ನಷ್ಟು ಬಲಿಷ್ಠವಾಗಲಿ ಎಂದು ಶುಭ ಹಾರೈಸಿದರು. ಘಟಕದ ಮಾಜಿ ಅಧ್ಯಕ್ಷರಾದ ವಿಶಾಲ್ ಕೊಡಿಯಾಲ್ ಅವರು ತಮ್ಮ ಅವಧಿಯಲ್ಲಿ ಘಟಕದ ವತಿಯಿಂದಾಗಿರುವ ಸಾಧನೆಗಳನ್ನು ವಿವರಿಸಿದರು ಹಾಗೂ ಅವಕಾಶ ಕಲ್ಪಿಸಿದ ಸಂಘಟನೆಗೆ ಕೃತಜ್ಞತೆಯನ್ನು ಸಲ್ಲಿಸಿದರು. ನಿಧೀಶ್ ಶೆಟ್ಟಿ ಯವರು ವರದಿ ವಾಚಿಸಿದರು. ಧನಂಜಯ ಅವರು ಲೆಕ್ಕಪತ್ರ ವಾಚಿಸಿದರು. ಸಭೆಯಲ್ಲಿ ಸ್ಥಾಪಕ ಸಮಿತಿಯ ಸದಸ್ಯರು , ಕೇಂದ್ರ ಸಮಿತಿಯ ಸದಸ್ಯರು ಹಾಗೂ ಘಟಕದ ಸದಸ್ಯರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು