7:46 AM Sunday8 - September 2024
ಬ್ರೇಕಿಂಗ್ ನ್ಯೂಸ್
ಕಲಿಯುವ ಛಲದಿಂದ ಸಂಕಲ್ಪ ಸಾಧಿಸಿದ ತನ್ವಿ!: ಕೆಳ ಮಧ್ಯಮ ಕುಟುಂಬದ ವಿದ್ಯಾರ್ಥಿನಿ ಎಂಬಿಬಿಎಸ್… ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಚಾಲನೆ ಗಣೇಶೋತ್ಸವಕ್ಕೆ ಕಾಂಗ್ರೆಸ್‌ ಸರಕಾರ ಯಾವುದೇ ಅಡ್ಡಿ ಮಾಡಿಲ್ಲ; ಶಾಸಕ ಕಾಮತ್ ಸಂಕುಚಿತ ಭಾವನೆಯಿಂದ… ಓವರ್‌ಟೇಕ್ ವಿವಾದ: ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಬೀದಿ ಜಗಳ; ಪ್ರಕರಣ ದಾಖಲು ತೀರ್ಥಹಳ್ಳಿ: ಎದೆ ನೋವು ಚಿಕಿತ್ಸೆಗೆಂದು ಆಸ್ಪತ್ರೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವಕ ರಸ್ತೆಗೆ ಬಿದ್ದು… ಭಾರಿ ಮಳೆ: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ ದಿಢೀರ್ ವಾಹನ ಸಂಚಾರ ಬದಲಾವಣೆಯಿಂದ ಸಾರ್ವಜನಿಕರಿಗೆ ತೊಂದರೆ: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ಬಳ್ಳಾರಿಯಲ್ಲಿ ಸೆ.6ರಂದು ಗೋ ಬ್ಯಾಕ್ ಗವರ್ನರ್ ಚಳವಳಿ: ಕಪ್ಪುಪಟ್ಟಿ, ಬಾವುಟ ಪ್ರದರ್ಶನ ರಾಜಕೀಯ ರಣತಂತ್ರಕ್ಕೆ ಮುದುಡಿದ ಕಮಲ: ನಂಜನಗೂಡು ನಗರಸಭೆ ನೂತನ ಸಾರಥಿಗಳಾಗಿ ಕಾಂಗ್ರೆಸ್ ನ… ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಮಾಡಿ; ಸಾರ್ವಜನಿಕರಿಗೆ ಮಾರಕವಾಗುವ ಡಿಜೆ ಬೇಡ: ಡಿವೈಎಸ್’ಪಿ…

ಇತ್ತೀಚಿನ ಸುದ್ದಿ

ಜೈ ತುಳುನಾಡ್ ಬೆಂಗಳೂರು ಘಟಕದ ವಾರ್ಷಿಕ ಮಹಾಸಭೆ: ಧನಂಜಯ ಆಚಾರ್ಯ ನೂತನ ಅಧ್ಯಕ್ಷ

20/03/2024, 11:30

ಬೆಂಗಳೂರು(reporterkarnataka.com): ಜೈ ತುಳುನಾಡ್ ಬೆಂಗಳೂರು ಘಟಕದ ವಾರ್ಷಿಕ ಮಹಾಸಭೆ ಭಾನುವಾರ ಮೆಜೆಸ್ಟಿಕ್ ನ ಸ್ವಾಗತ್ ಹೋಟೆಲಿನಲ್ಲಿ ನಡೆಯಿತು.


ಸಭೆಯಲ್ಲಿ ಪ್ರಸ್ತುತ ಸಮಿತಿ ಕಳೆದ ವರ್ಷ ಮಾಡಿದ ತುಳು ಪರವಾದ ಕಾರ್ಯಕ್ರಮಗಳ ಬಗ್ಗೆ ವರದಿ ವಾಚನ ಸಲ್ಲಿಸಲಾಯಿತು. ಹಾಗೆಯೇ ಸಂಸ್ಥಾಪಕ ಸಮಿತಿಯ ಮಾರ್ಗದರ್ಶನದಲ್ಲಿ, ಜೈ ತುಳುನಾಡ್ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ವಿಶು ಶ್ರೀಕೇರ ಅವರ ಉಪಸ್ಥಿತಿಯಲ್ಲಿ ಹೊಸ ಸಮಿತಿ ರಚನೆಯಾಯಿತು. ಧನಂಜಯ ಆಚಾರ್ಯ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ನಿಧೀಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಅಕ್ಷಯ್ ಆಚಾರ್ಯ, ಜೊತೆ ಕಾರ್ಯದರ್ಶಿಗಳಾಗಿ ಶಕುಂತಳಾ ಹಾಗೂ ವಿನಯ್, ಖಜಾಂಜಿಯಾಗಿ ಅನುದೀಪ್ ಶೆಟ್ಟಿ , ಜೊತೆ ಖಜಾಂಜಿಯಾಗಿ ಪ್ರಗತಿ ಎಸ್., ಸಂಘಟನಾ ಕಾರ್ಯದರ್ಶಿಗಳಾಗಿ ಶರತ್ ಕೊಡವೂರು, ಕಾಶಿನಾಥ್ ಮತ್ತು ಪ್ರಶಾಂತ್ ಅವರು ಆಯ್ಕೆಯಾದರು.
ಅಧ್ಯಕ್ಷರಾಗಿ ಆಯ್ಕೆಯಾದ, ಧನಂಜಯ ಆಚಾರ್ಯ ಅವರು ಮಾತನಾಡುತ್ತಾ ತುಳು ಭಾಷೆಯ ಬೆಳವಣಿಗೆ ಹಾಗೂ ತುಳು ಭಾಷೆಯ ಉಳಿವಿಗೆ ಶ್ರಮಿಸುವೆ ಮತ್ತು ತುಳುಪರ ಕೆಲಸ ಮಾಡುವವರ ಜೊತೆ ನಾವು ಬೆನ್ನುಲುಬಾಗಿ ನಿಲ್ಲುತ್ತೇವೆ. ಆ ಸಲುವಾಗಿ ಸರ್ವ ತುಳುವರ ಸಹಕಾರವನ್ನು ಕೋರುತ್ತೇವೆ ಎಂದು
ಹೇಳಿದರು.
ವಿಶು ಶ್ರೀಕೇರ ಅವರು ಮಾತನಾಡುತ್ತಾ ಜೈ ತುಳುನಾಡು (ರಿ.) ಸಂಘಟನೆಯ ಸಾಧನೆಯ ಬಗ್ಗೆ, ಸಾಮರ್ಥ್ಯದ ಬಗ್ಗೆ ತಿಳಿಸುತ್ತಾ ಹೊಸ ಘಟಕದ ಅವಧಿಯಲ್ಲಿ ಸಂಘಟನೆ ಇನ್ನಷ್ಟು ಬಲಿಷ್ಠವಾಗಲಿ ಎಂದು ಶುಭ ಹಾರೈಸಿದರು. ಘಟಕದ ಮಾಜಿ ಅಧ್ಯಕ್ಷರಾದ ವಿಶಾಲ್ ಕೊಡಿಯಾಲ್ ಅವರು ತಮ್ಮ ಅವಧಿಯಲ್ಲಿ ಘಟಕದ ವತಿಯಿಂದಾಗಿರುವ ಸಾಧನೆಗಳನ್ನು ವಿವರಿಸಿದರು ಹಾಗೂ ಅವಕಾಶ ಕಲ್ಪಿಸಿದ ಸಂಘಟನೆಗೆ ಕೃತಜ್ಞತೆಯನ್ನು ಸಲ್ಲಿಸಿದರು. ನಿಧೀಶ್ ಶೆಟ್ಟಿ ಯವರು ವರದಿ ವಾಚಿಸಿದರು. ಧನಂಜಯ ಅವರು ಲೆಕ್ಕಪತ್ರ ವಾಚಿಸಿದರು. ಸಭೆಯಲ್ಲಿ ಸ್ಥಾಪಕ ಸಮಿತಿಯ ಸದಸ್ಯರು , ಕೇಂದ್ರ ಸಮಿತಿಯ ಸದಸ್ಯರು ಹಾಗೂ ಘಟಕದ ಸದಸ್ಯರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು