12:17 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಜೈ ತುಳುನಾಡ್ ಬೆಂಗಳೂರು ಘಟಕದ ವಾರ್ಷಿಕ ಮಹಾಸಭೆ: ಧನಂಜಯ ಆಚಾರ್ಯ ನೂತನ ಅಧ್ಯಕ್ಷ

20/03/2024, 11:30

ಬೆಂಗಳೂರು(reporterkarnataka.com): ಜೈ ತುಳುನಾಡ್ ಬೆಂಗಳೂರು ಘಟಕದ ವಾರ್ಷಿಕ ಮಹಾಸಭೆ ಭಾನುವಾರ ಮೆಜೆಸ್ಟಿಕ್ ನ ಸ್ವಾಗತ್ ಹೋಟೆಲಿನಲ್ಲಿ ನಡೆಯಿತು.


ಸಭೆಯಲ್ಲಿ ಪ್ರಸ್ತುತ ಸಮಿತಿ ಕಳೆದ ವರ್ಷ ಮಾಡಿದ ತುಳು ಪರವಾದ ಕಾರ್ಯಕ್ರಮಗಳ ಬಗ್ಗೆ ವರದಿ ವಾಚನ ಸಲ್ಲಿಸಲಾಯಿತು. ಹಾಗೆಯೇ ಸಂಸ್ಥಾಪಕ ಸಮಿತಿಯ ಮಾರ್ಗದರ್ಶನದಲ್ಲಿ, ಜೈ ತುಳುನಾಡ್ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ವಿಶು ಶ್ರೀಕೇರ ಅವರ ಉಪಸ್ಥಿತಿಯಲ್ಲಿ ಹೊಸ ಸಮಿತಿ ರಚನೆಯಾಯಿತು. ಧನಂಜಯ ಆಚಾರ್ಯ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ನಿಧೀಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಅಕ್ಷಯ್ ಆಚಾರ್ಯ, ಜೊತೆ ಕಾರ್ಯದರ್ಶಿಗಳಾಗಿ ಶಕುಂತಳಾ ಹಾಗೂ ವಿನಯ್, ಖಜಾಂಜಿಯಾಗಿ ಅನುದೀಪ್ ಶೆಟ್ಟಿ , ಜೊತೆ ಖಜಾಂಜಿಯಾಗಿ ಪ್ರಗತಿ ಎಸ್., ಸಂಘಟನಾ ಕಾರ್ಯದರ್ಶಿಗಳಾಗಿ ಶರತ್ ಕೊಡವೂರು, ಕಾಶಿನಾಥ್ ಮತ್ತು ಪ್ರಶಾಂತ್ ಅವರು ಆಯ್ಕೆಯಾದರು.
ಅಧ್ಯಕ್ಷರಾಗಿ ಆಯ್ಕೆಯಾದ, ಧನಂಜಯ ಆಚಾರ್ಯ ಅವರು ಮಾತನಾಡುತ್ತಾ ತುಳು ಭಾಷೆಯ ಬೆಳವಣಿಗೆ ಹಾಗೂ ತುಳು ಭಾಷೆಯ ಉಳಿವಿಗೆ ಶ್ರಮಿಸುವೆ ಮತ್ತು ತುಳುಪರ ಕೆಲಸ ಮಾಡುವವರ ಜೊತೆ ನಾವು ಬೆನ್ನುಲುಬಾಗಿ ನಿಲ್ಲುತ್ತೇವೆ. ಆ ಸಲುವಾಗಿ ಸರ್ವ ತುಳುವರ ಸಹಕಾರವನ್ನು ಕೋರುತ್ತೇವೆ ಎಂದು
ಹೇಳಿದರು.
ವಿಶು ಶ್ರೀಕೇರ ಅವರು ಮಾತನಾಡುತ್ತಾ ಜೈ ತುಳುನಾಡು (ರಿ.) ಸಂಘಟನೆಯ ಸಾಧನೆಯ ಬಗ್ಗೆ, ಸಾಮರ್ಥ್ಯದ ಬಗ್ಗೆ ತಿಳಿಸುತ್ತಾ ಹೊಸ ಘಟಕದ ಅವಧಿಯಲ್ಲಿ ಸಂಘಟನೆ ಇನ್ನಷ್ಟು ಬಲಿಷ್ಠವಾಗಲಿ ಎಂದು ಶುಭ ಹಾರೈಸಿದರು. ಘಟಕದ ಮಾಜಿ ಅಧ್ಯಕ್ಷರಾದ ವಿಶಾಲ್ ಕೊಡಿಯಾಲ್ ಅವರು ತಮ್ಮ ಅವಧಿಯಲ್ಲಿ ಘಟಕದ ವತಿಯಿಂದಾಗಿರುವ ಸಾಧನೆಗಳನ್ನು ವಿವರಿಸಿದರು ಹಾಗೂ ಅವಕಾಶ ಕಲ್ಪಿಸಿದ ಸಂಘಟನೆಗೆ ಕೃತಜ್ಞತೆಯನ್ನು ಸಲ್ಲಿಸಿದರು. ನಿಧೀಶ್ ಶೆಟ್ಟಿ ಯವರು ವರದಿ ವಾಚಿಸಿದರು. ಧನಂಜಯ ಅವರು ಲೆಕ್ಕಪತ್ರ ವಾಚಿಸಿದರು. ಸಭೆಯಲ್ಲಿ ಸ್ಥಾಪಕ ಸಮಿತಿಯ ಸದಸ್ಯರು , ಕೇಂದ್ರ ಸಮಿತಿಯ ಸದಸ್ಯರು ಹಾಗೂ ಘಟಕದ ಸದಸ್ಯರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು