12:19 PM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಜೈ ತುಳುನಾಡ್ ಬೆಂಗಳೂರು ಘಟಕದ ವಾರ್ಷಿಕ ಮಹಾಸಭೆ: ಧನಂಜಯ ಆಚಾರ್ಯ ನೂತನ ಅಧ್ಯಕ್ಷ

20/03/2024, 11:30

ಬೆಂಗಳೂರು(reporterkarnataka.com): ಜೈ ತುಳುನಾಡ್ ಬೆಂಗಳೂರು ಘಟಕದ ವಾರ್ಷಿಕ ಮಹಾಸಭೆ ಭಾನುವಾರ ಮೆಜೆಸ್ಟಿಕ್ ನ ಸ್ವಾಗತ್ ಹೋಟೆಲಿನಲ್ಲಿ ನಡೆಯಿತು.


ಸಭೆಯಲ್ಲಿ ಪ್ರಸ್ತುತ ಸಮಿತಿ ಕಳೆದ ವರ್ಷ ಮಾಡಿದ ತುಳು ಪರವಾದ ಕಾರ್ಯಕ್ರಮಗಳ ಬಗ್ಗೆ ವರದಿ ವಾಚನ ಸಲ್ಲಿಸಲಾಯಿತು. ಹಾಗೆಯೇ ಸಂಸ್ಥಾಪಕ ಸಮಿತಿಯ ಮಾರ್ಗದರ್ಶನದಲ್ಲಿ, ಜೈ ತುಳುನಾಡ್ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ವಿಶು ಶ್ರೀಕೇರ ಅವರ ಉಪಸ್ಥಿತಿಯಲ್ಲಿ ಹೊಸ ಸಮಿತಿ ರಚನೆಯಾಯಿತು. ಧನಂಜಯ ಆಚಾರ್ಯ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ನಿಧೀಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಅಕ್ಷಯ್ ಆಚಾರ್ಯ, ಜೊತೆ ಕಾರ್ಯದರ್ಶಿಗಳಾಗಿ ಶಕುಂತಳಾ ಹಾಗೂ ವಿನಯ್, ಖಜಾಂಜಿಯಾಗಿ ಅನುದೀಪ್ ಶೆಟ್ಟಿ , ಜೊತೆ ಖಜಾಂಜಿಯಾಗಿ ಪ್ರಗತಿ ಎಸ್., ಸಂಘಟನಾ ಕಾರ್ಯದರ್ಶಿಗಳಾಗಿ ಶರತ್ ಕೊಡವೂರು, ಕಾಶಿನಾಥ್ ಮತ್ತು ಪ್ರಶಾಂತ್ ಅವರು ಆಯ್ಕೆಯಾದರು.
ಅಧ್ಯಕ್ಷರಾಗಿ ಆಯ್ಕೆಯಾದ, ಧನಂಜಯ ಆಚಾರ್ಯ ಅವರು ಮಾತನಾಡುತ್ತಾ ತುಳು ಭಾಷೆಯ ಬೆಳವಣಿಗೆ ಹಾಗೂ ತುಳು ಭಾಷೆಯ ಉಳಿವಿಗೆ ಶ್ರಮಿಸುವೆ ಮತ್ತು ತುಳುಪರ ಕೆಲಸ ಮಾಡುವವರ ಜೊತೆ ನಾವು ಬೆನ್ನುಲುಬಾಗಿ ನಿಲ್ಲುತ್ತೇವೆ. ಆ ಸಲುವಾಗಿ ಸರ್ವ ತುಳುವರ ಸಹಕಾರವನ್ನು ಕೋರುತ್ತೇವೆ ಎಂದು
ಹೇಳಿದರು.
ವಿಶು ಶ್ರೀಕೇರ ಅವರು ಮಾತನಾಡುತ್ತಾ ಜೈ ತುಳುನಾಡು (ರಿ.) ಸಂಘಟನೆಯ ಸಾಧನೆಯ ಬಗ್ಗೆ, ಸಾಮರ್ಥ್ಯದ ಬಗ್ಗೆ ತಿಳಿಸುತ್ತಾ ಹೊಸ ಘಟಕದ ಅವಧಿಯಲ್ಲಿ ಸಂಘಟನೆ ಇನ್ನಷ್ಟು ಬಲಿಷ್ಠವಾಗಲಿ ಎಂದು ಶುಭ ಹಾರೈಸಿದರು. ಘಟಕದ ಮಾಜಿ ಅಧ್ಯಕ್ಷರಾದ ವಿಶಾಲ್ ಕೊಡಿಯಾಲ್ ಅವರು ತಮ್ಮ ಅವಧಿಯಲ್ಲಿ ಘಟಕದ ವತಿಯಿಂದಾಗಿರುವ ಸಾಧನೆಗಳನ್ನು ವಿವರಿಸಿದರು ಹಾಗೂ ಅವಕಾಶ ಕಲ್ಪಿಸಿದ ಸಂಘಟನೆಗೆ ಕೃತಜ್ಞತೆಯನ್ನು ಸಲ್ಲಿಸಿದರು. ನಿಧೀಶ್ ಶೆಟ್ಟಿ ಯವರು ವರದಿ ವಾಚಿಸಿದರು. ಧನಂಜಯ ಅವರು ಲೆಕ್ಕಪತ್ರ ವಾಚಿಸಿದರು. ಸಭೆಯಲ್ಲಿ ಸ್ಥಾಪಕ ಸಮಿತಿಯ ಸದಸ್ಯರು , ಕೇಂದ್ರ ಸಮಿತಿಯ ಸದಸ್ಯರು ಹಾಗೂ ಘಟಕದ ಸದಸ್ಯರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು