8:51 AM Tuesday21 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

ಜೈ ತುಳುನಾಡ್ ಬೆಂಗಳೂರು ಘಟಕದ ವಾರ್ಷಿಕ ಮಹಾಸಭೆ: ಧನಂಜಯ ಆಚಾರ್ಯ ನೂತನ ಅಧ್ಯಕ್ಷ

20/03/2024, 11:30

ಬೆಂಗಳೂರು(reporterkarnataka.com): ಜೈ ತುಳುನಾಡ್ ಬೆಂಗಳೂರು ಘಟಕದ ವಾರ್ಷಿಕ ಮಹಾಸಭೆ ಭಾನುವಾರ ಮೆಜೆಸ್ಟಿಕ್ ನ ಸ್ವಾಗತ್ ಹೋಟೆಲಿನಲ್ಲಿ ನಡೆಯಿತು.


ಸಭೆಯಲ್ಲಿ ಪ್ರಸ್ತುತ ಸಮಿತಿ ಕಳೆದ ವರ್ಷ ಮಾಡಿದ ತುಳು ಪರವಾದ ಕಾರ್ಯಕ್ರಮಗಳ ಬಗ್ಗೆ ವರದಿ ವಾಚನ ಸಲ್ಲಿಸಲಾಯಿತು. ಹಾಗೆಯೇ ಸಂಸ್ಥಾಪಕ ಸಮಿತಿಯ ಮಾರ್ಗದರ್ಶನದಲ್ಲಿ, ಜೈ ತುಳುನಾಡ್ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ವಿಶು ಶ್ರೀಕೇರ ಅವರ ಉಪಸ್ಥಿತಿಯಲ್ಲಿ ಹೊಸ ಸಮಿತಿ ರಚನೆಯಾಯಿತು. ಧನಂಜಯ ಆಚಾರ್ಯ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ನಿಧೀಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಅಕ್ಷಯ್ ಆಚಾರ್ಯ, ಜೊತೆ ಕಾರ್ಯದರ್ಶಿಗಳಾಗಿ ಶಕುಂತಳಾ ಹಾಗೂ ವಿನಯ್, ಖಜಾಂಜಿಯಾಗಿ ಅನುದೀಪ್ ಶೆಟ್ಟಿ , ಜೊತೆ ಖಜಾಂಜಿಯಾಗಿ ಪ್ರಗತಿ ಎಸ್., ಸಂಘಟನಾ ಕಾರ್ಯದರ್ಶಿಗಳಾಗಿ ಶರತ್ ಕೊಡವೂರು, ಕಾಶಿನಾಥ್ ಮತ್ತು ಪ್ರಶಾಂತ್ ಅವರು ಆಯ್ಕೆಯಾದರು.
ಅಧ್ಯಕ್ಷರಾಗಿ ಆಯ್ಕೆಯಾದ, ಧನಂಜಯ ಆಚಾರ್ಯ ಅವರು ಮಾತನಾಡುತ್ತಾ ತುಳು ಭಾಷೆಯ ಬೆಳವಣಿಗೆ ಹಾಗೂ ತುಳು ಭಾಷೆಯ ಉಳಿವಿಗೆ ಶ್ರಮಿಸುವೆ ಮತ್ತು ತುಳುಪರ ಕೆಲಸ ಮಾಡುವವರ ಜೊತೆ ನಾವು ಬೆನ್ನುಲುಬಾಗಿ ನಿಲ್ಲುತ್ತೇವೆ. ಆ ಸಲುವಾಗಿ ಸರ್ವ ತುಳುವರ ಸಹಕಾರವನ್ನು ಕೋರುತ್ತೇವೆ ಎಂದು
ಹೇಳಿದರು.
ವಿಶು ಶ್ರೀಕೇರ ಅವರು ಮಾತನಾಡುತ್ತಾ ಜೈ ತುಳುನಾಡು (ರಿ.) ಸಂಘಟನೆಯ ಸಾಧನೆಯ ಬಗ್ಗೆ, ಸಾಮರ್ಥ್ಯದ ಬಗ್ಗೆ ತಿಳಿಸುತ್ತಾ ಹೊಸ ಘಟಕದ ಅವಧಿಯಲ್ಲಿ ಸಂಘಟನೆ ಇನ್ನಷ್ಟು ಬಲಿಷ್ಠವಾಗಲಿ ಎಂದು ಶುಭ ಹಾರೈಸಿದರು. ಘಟಕದ ಮಾಜಿ ಅಧ್ಯಕ್ಷರಾದ ವಿಶಾಲ್ ಕೊಡಿಯಾಲ್ ಅವರು ತಮ್ಮ ಅವಧಿಯಲ್ಲಿ ಘಟಕದ ವತಿಯಿಂದಾಗಿರುವ ಸಾಧನೆಗಳನ್ನು ವಿವರಿಸಿದರು ಹಾಗೂ ಅವಕಾಶ ಕಲ್ಪಿಸಿದ ಸಂಘಟನೆಗೆ ಕೃತಜ್ಞತೆಯನ್ನು ಸಲ್ಲಿಸಿದರು. ನಿಧೀಶ್ ಶೆಟ್ಟಿ ಯವರು ವರದಿ ವಾಚಿಸಿದರು. ಧನಂಜಯ ಅವರು ಲೆಕ್ಕಪತ್ರ ವಾಚಿಸಿದರು. ಸಭೆಯಲ್ಲಿ ಸ್ಥಾಪಕ ಸಮಿತಿಯ ಸದಸ್ಯರು , ಕೇಂದ್ರ ಸಮಿತಿಯ ಸದಸ್ಯರು ಹಾಗೂ ಘಟಕದ ಸದಸ್ಯರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು