9:18 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಜೈಲಿನಲ್ಲಿ ಅಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡಿದರೆ ಕಠಿಣ ಕ್ರಮ: ಬೆಳಗಾವಿ ಕೇಂದ್ರ ಕಾರಾಗೃಹಕ್ಕೆ ಹಠಾತ್ ಭೇಟಿ ನೀಡಿದ ಗೃಹ ಸಚಿವರ ಎಚ್ಚರಿಕೆ

29/12/2022, 16:43

ಬೆಳಗಾವಿ(reporterkarnataka.com): ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡುವ ಜೈಲು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ಕೇಂದ್ರ ಕಾರಾಗೃಹವಾದ ಹಿಂಡಲಗಾ ಜೈಲಿಗೆ ಹಠಾತ್ ಭೇಟಿ ನೀಡಿದ ಗೃಹ ಸಚಿವರು ನಂತರ ಜೈಲಿನ ಹಿರಿಯ ಅಧಿಕಾರಿಗಳ ಜತೆ
ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿದರು.
ಜೈಲಿನೊಳಗೆ ಅಕ್ರಮವಾಗಿ ಮೊಬೈಲ್ ಗಳು ಹಾಗೂ ಮಾದಕ ವಸ್ತುಗಳನ್ನು ಸರಬರಾಜು ತಪ್ಪಿಸಲು, ಅತ್ಯಾಧುನಿಕ ತಪಾಸಣಾ ಯಂತ್ರ ಅಳವಡಿಸಲಾಗಿದೆ. ಆದರೂ, ಕೆಲವು ಬಾರಿ ಸಿಬ್ಬಂದಿ ಕಣ್ಣು ತಪ್ಪಿಸಿ, ನಿಷೇಧಿತ ಪದಾರ್ಥಗಳು ಜೈಲಿನೊಳಗೆ ಜಪ್ತಿ ಮಾಡಿರುವುದು ನಡೆದಿದೆ. ಇದಕ್ಕೆ ಕಡಿವಾಣ ಹಾಕಬೇಕಿದೆ. ತಪ್ಪಿತಸ್ಥರ ವಿರುದ್ಧ, ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಜೈಲಿನ ಒಳಗಿರುವ, ಟೈಲರಿಂಗ್ ಘಟಕ ಹಾಗೂ ಮರಗೆಲಸ ಘಟಕಗಳಿಗೆ ಭೇಟಿ ನೀಡಿ, ಆಧುನಿಕ ಉಪಕರಣ ಗಳನ್ನು ಒದಗಿಸಲು, ಕ್ರಮ ಕೈಗೊಳ್ಳಲಾಗುವುದು ಎಂದರು.

ಅತಿ ಭದ್ರತಾ ಸೆಲ್ ಗಳು, ಆಸ್ಪತ್ರೆ ಹಾಗೂ ಕೈದಿಗಳೇ
ನಿರ್ವಹಿಸುತ್ತಿರುವ ಎಫ್ ಎಂ ಸ್ಟೇಷನ್, ಅಡುಗೆ ಮನೆ ಹಾಗೂ ಇನ್ನಿತರ ವ್ಯವಸ್ಥೆಗಳ ಬಗ್ಗೆ ಸಚಿವರು ಮಾಹಿತಿ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು