2:51 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಜೈಲಿನಲ್ಲಿ ಅಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡಿದರೆ ಕಠಿಣ ಕ್ರಮ: ಬೆಳಗಾವಿ ಕೇಂದ್ರ ಕಾರಾಗೃಹಕ್ಕೆ ಹಠಾತ್ ಭೇಟಿ ನೀಡಿದ ಗೃಹ ಸಚಿವರ ಎಚ್ಚರಿಕೆ

29/12/2022, 16:43

ಬೆಳಗಾವಿ(reporterkarnataka.com): ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡುವ ಜೈಲು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ಕೇಂದ್ರ ಕಾರಾಗೃಹವಾದ ಹಿಂಡಲಗಾ ಜೈಲಿಗೆ ಹಠಾತ್ ಭೇಟಿ ನೀಡಿದ ಗೃಹ ಸಚಿವರು ನಂತರ ಜೈಲಿನ ಹಿರಿಯ ಅಧಿಕಾರಿಗಳ ಜತೆ
ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿದರು.
ಜೈಲಿನೊಳಗೆ ಅಕ್ರಮವಾಗಿ ಮೊಬೈಲ್ ಗಳು ಹಾಗೂ ಮಾದಕ ವಸ್ತುಗಳನ್ನು ಸರಬರಾಜು ತಪ್ಪಿಸಲು, ಅತ್ಯಾಧುನಿಕ ತಪಾಸಣಾ ಯಂತ್ರ ಅಳವಡಿಸಲಾಗಿದೆ. ಆದರೂ, ಕೆಲವು ಬಾರಿ ಸಿಬ್ಬಂದಿ ಕಣ್ಣು ತಪ್ಪಿಸಿ, ನಿಷೇಧಿತ ಪದಾರ್ಥಗಳು ಜೈಲಿನೊಳಗೆ ಜಪ್ತಿ ಮಾಡಿರುವುದು ನಡೆದಿದೆ. ಇದಕ್ಕೆ ಕಡಿವಾಣ ಹಾಕಬೇಕಿದೆ. ತಪ್ಪಿತಸ್ಥರ ವಿರುದ್ಧ, ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಜೈಲಿನ ಒಳಗಿರುವ, ಟೈಲರಿಂಗ್ ಘಟಕ ಹಾಗೂ ಮರಗೆಲಸ ಘಟಕಗಳಿಗೆ ಭೇಟಿ ನೀಡಿ, ಆಧುನಿಕ ಉಪಕರಣ ಗಳನ್ನು ಒದಗಿಸಲು, ಕ್ರಮ ಕೈಗೊಳ್ಳಲಾಗುವುದು ಎಂದರು.

ಅತಿ ಭದ್ರತಾ ಸೆಲ್ ಗಳು, ಆಸ್ಪತ್ರೆ ಹಾಗೂ ಕೈದಿಗಳೇ
ನಿರ್ವಹಿಸುತ್ತಿರುವ ಎಫ್ ಎಂ ಸ್ಟೇಷನ್, ಅಡುಗೆ ಮನೆ ಹಾಗೂ ಇನ್ನಿತರ ವ್ಯವಸ್ಥೆಗಳ ಬಗ್ಗೆ ಸಚಿವರು ಮಾಹಿತಿ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು