9:31 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಜೈನ ಮುನಿ ಹತ್ಯೆ: ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರಾಷ್ಟ್ರೀಯ ಕಾರ್ಯಕಾರಿ ನಿರ್ದೇಶಕ ರೋಹಿತ್ ಕುಮಾರ್ ಕಟೀಲ್ ಖಂಡನೆ

10/07/2023, 18:27

ಕಾರ್ಕಳ(reporterkarnataka.com): ಚಿಕ್ಕೋಡಿ ಹಿರೇಕೋಡಿಯ ನಂದಿಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಹತ್ಯೆ ಖಂಡನೀಯ. ಇದು ಕೇವಲ ಒಬ್ಬ ವ್ಯಕ್ತಿಯ ಹತ್ಯೆಯಲ್ಲ ಸರ್ವ ಮನುಕುಲದ ಹತ್ಯೆಯಾಗಿದೆ. ತನ್ನ ಜೀವನವನ್ನು ಸೇವೆಗಾಗಿ ಮುಡಿಪಾಗಿಟ್ಟ,ಜೀವನ ಪರ್ಯಂತ ಮಾನವ ಸಮುದಾಯಕ್ಕೆ ಶಾಂತಿಯ ಸಂದೇಶವನ್ನು ಸಾರುತ್ತಿದ್ದ ಜೈನ ಮುನಿಗಳ ಹತ್ಯೆ ಕೇವಲ ಒಂದು ಸಮುದಾಯಕ್ಕೆ ಮಾತ್ರವಲ್ಲದೆ ಸಮಸ್ತ ಮಾನವ ಸಮುದಾಯಕ್ಕೆ ಆಘಾತ ಉಂಟು ಮಾಡಿದೆ. ಈ ಅಮಾನವೀಯ ಕ್ರತ್ಯವನ್ನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರಾಷ್ಟ್ರೀಯ ಕಾರ್ಯ ಕಾರಿ ನಿರ್ದೇಶಕ ರೋಹಿತ್ ಕುಮಾರ್ ಕಟೀಲ್ ಖಂಡಿಸಿದ್ದಾರೆ ಮನುಕುಲದ ಸೇವೆಗಾಗಿ ತಮ್ಮ ಆಶೆ , ಆಕಾಂಕ್ಷೆ , ಆಸ್ತಿ , ಸಂಪತ್ತು , ಕುಟುಂಬವನ್ನು ತ್ಯಜಿಸಿರುವ ಜೈನ ಮುನಿಗಳು ಒಂದು ಸಮುದಾಯಕ್ಕೆ ಸೀಮಿತವಾಗದೆ ಜಗತ್ತಿಗೆ ಶಾಂತಿ, ಅಹಿಂಸೆ ಸಂದೇಶ ನೀಡುವವರು. ಅವರ ಸದ್ಗುಣ, ಸಹಾಯವನ್ನು ದುರುಪಯೋಗ ಮಾಡಿಕೊಂಡು ಕೊಲೆ ಮಾಡುವ ಮಟ್ಟಕ್ಕೆ ಇಳಿದಿರುವ ಕೊಲೆಗಡುಕರನ್ನು ಸರಕಾರ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಂಡು ತಕ್ಷಣವೇ ಕಠಿಣ ಶಿಕ್ಷೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು