1:48 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮಗೆ ಸನ್ಮಾನ,  ಓದಿಗೆ ನೆರವು: ಶ್ರೀದೇವಿ ನಾಯಕ್ ಭರವಸೆ

09/07/2021, 08:01

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮ ಅವರನ್ನು ಭೇಟಿಯಾದ ಸಾಮಾಜಿಕ ಕಾರ್ಯಕರ್ತೆ ಶ್ರೀದೇವಿ ನಾಯಕ್ ಅವರು ಆಕೆಯನ್ನು ಸನ್ಮಾನಿಸಿ ಓದಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಹುಲ್ಲಿಗೆಮ್ಮ ತನ್ನ ತಂದೆ ಭೀಮಣ್ಣ ನಿಧನದ ನಂತರ ಇಡಿ ಕುಟುಂಬವನ್ನು ನಿರ್ವಹಿಸುತ್ತಾಳೆ. ಈಕೆ ಕಾಲೇಜಿನಲ್ಲಿ ಓದಿಕೊಂಡು ಮತ್ತು ಹೊಲದಲ್ಲಿ
ಟ್ರಾಕ್ಟರು ಹೊಡಿಯುವದು, ಕುಂಟೆ ಹೊಡಿಯುವದು, ರಸಾಯನಿಕ ಎಣ್ಣೆ ಸಿಂಪರಣೆ ಮಾಡುವದು, ಇನ್ನೂ  ಆನೇಕ  ಕೆಲಸಗಳನ್ನು ನಿರ್ವಹಿಸುತ್ತಾಳೆ.  ಇಂತಹ  ದಿಟ್ಟ ರೈತ ವಿದ್ಯಾರ್ಥಿನಿ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದಾಳೆ. ಇಂತಹ ಸಾಧನೆ  ಮಾಡಿದ ರೈತ ವಿದ್ಯಾರ್ಥಿಯನ್ನು  ಮನೆಗೆ ಭೇಟಿ ನೀಡಿ ಮುಂದಿನ ಓದಿಗಾಗಿ ಏನೇ  ಸಹಾಯ ಬೇಕಾದರೂ ನಾನು ಮಾಡುತ್ತೇನೆ ಎಂದು ಶ್ರೀದೇವಿ ನಾಯಕ್ ನುಡಿದರು.

ಮುಂದೆ ಯಾವುದೇ ಕಷ್ಟ ಬಂದರೂ ನಿನ್ನ ಜೊತೆ ನಾನು ಯಾವಾಗಲೂ ಇರುತ್ತೇನೆ ಎಂದು ಶ್ರೀದೇವಿ ನಾಯಕ್ ಧೈರ್ಯ ತುಂಬಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು