2:08 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಜಲಕ್ಷಾಮದ ನಡುವೆ ಈಜುಕೊಳ: ಮತ್ತೊಂದು ವಿವಾದದಲ್ಲಿ ಬ್ರಿಟನ್ ಪ್ರಧಾನಿ ಅಭ್ಯರ್ಥಿ ರಿಷಿ ಸುನಾಕ್

16/08/2022, 19:09

ಲಂಡನ್(reporterkarnataka.com): ಬ್ರಿಟನ್ ಪ್ರಧಾನಿ ಅಭ್ಯರ್ಥಿ ರಿಷಿ ಸುನಾಕ್ ಈಗ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಇಂಗ್ಲೆಂಡಿನ ಹಲವೆಡೆ ಕ್ಷಾಮದ ಪರಿಸ್ಥಿತಿ ಇರುವಾಗ ತಮ್ಮ ಮನೆಯಲ್ಲಿ 3.8 ಕೋಟಿ ರೂಪಾಯಿ ವೆಚ್ಚದ ಈಜುಕೊಳ ನಿರ್ಮಿಸಿದ್ದಾರೆ ಎಂಬ ಟೀಕೆಗೆ ಗುರಿಯಾಗಿದ್ದಾರೆ.

ನಾರ್ಥ್ ಯಾರ್ಕ್‌ಶೈರ್‌ನಲ್ಲಿನ ತನ್ನ ಬಂಗಲೆಯಲ್ಲಿ ಸುನಾಕ್ 3.8 ಕೋಟಿ ರೂ. ವೆಚ್ಚದಲ್ಲಿ ಈಜುಕೊಳ ನಿರ್ಮಿಸಿದ್ದು ಅವರು ಪತ್ನಿ, ಇಬ್ಬರು ಮಕ್ಕಳೊಂದಿಗೆ ಇಲ್ಲಿ ವಾರಾಂತ್ಯ ಹಾಗೂ ರಜೆಯನ್ನು ಮೋಜಿನಿಂದ ಕಳೆಯುತ್ತಿದ್ದಾರೆ ಎಂದು ‘ಡೈಲಿ ಮೈಲ್’ ವರದಿ ಮಾಡಿದೆ. ಅಲ್ಲದೆ ಈ ಬಂಗಲೆಯಲ್ಲಿ ಟೆನಿಸ್ ಕೋರ್ಟ್ ಹಾಗೂ ಜಿಮ್ ಅನ್ನೂ ನಿರ್ಮಿಸಲಾಗುತ್ತಿದೆ. ಆಗಸದಿಂದ ತೆಗೆಯಲಾಗಿರುವ ಈ ಪ್ರದೇಶದ ಚಿತ್ರದಲ್ಲಿ ಈಜುಕೊಳ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿರುವುದು ದೃಢಪಟ್ಟಿದೆ ಎಂದು ವರದಿ ಹೇಳಿದೆ. ಕ್ಷಾಮದ ಹಿನ್ನೆಲೆಯಲ್ಲಿ ನೀರಿನ ಖರ್ಚು ಮಿತಗೊಳಿಸಲು ನಗರದಲ್ಲಿನ ಸಾರ್ವಜನಿಕ ಈಜುಕೊಳವನ್ನು ಮುಚ್ಚಿರುವ ಸಂದರ್ಭದಲ್ಲಿ ಜನಪ್ರತಿನಿಧಿಯೊಬ್ಬರು ಈ ರೀತಿ ಮಾಡುತ್ತಿರುವುದು ಸರಿಯೇ ಎಂದು ವ್ಯಾಪಕ ಖಂಡನೆ, ಟೀಕೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು