9:50 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಜಲಮಾಲಿನ್ಯ ತಡೆಯಲು ತುಂಗಭದ್ರಾ ಅಭಿಯಾನ ಪಾದಯಾತ್ರೆ ಸಭೆಯಲ್ಲಿ ಹಕ್ಕೊತ್ತಾಯ

09/11/2024, 15:58

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info reporterkarnataka@gmail.com

ಮಲೆನಾಡಿನ ದಟ್ಟಾರಣ್ಯ ಪ್ರದೇಶದಲ್ಲಿ ಹರಿಯುವ ನದಿ, ಕಣಿವೆಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ಜಲಮಾಲಿನ್ಯ ತಡೆಯಲು ಕೃಷಿ, ಕಾರ್ಖಾನೆ, ನಗರಾಭಿವೃದ್ಧಿ ಯೋಜನೆಗಳಲ್ಲಿ ಸುಸ್ಥಿರ ನಿಯಮ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ನಿರ್ಮಲ ತುಂಗಭದ್ರಾ ಅಭಿಯಾನ ಪಾದಯಾತ್ರೆ ಸಭೆಯಲ್ಲಿ ಹಕ್ಕೊತ್ತಾಯ ವ್ಯಕ್ತವಾಯಿತು.
ರಾಷ್ಟ್ರೀಯ ಸ್ವಾಭಿಮಾನ ಆಂದೋಲನ, ಪರ್ಯಾವರಣ ಟ್ರಸ್ಟ್ ಸಹಯೋಗದಲ್ಲಿ ಶೃಂಗೇರಿಯಿಂದ ಹೊರಟಿರುವ ನಿರ್ಮಲ ತುಂಗಾಭದ್ರಾ ಅಭಿಯಾನ ಶುಕ್ರವಾರ ಭೀಮನಕಟ್ಟೆ ಮಾರ್ಗವಾಗಿ ತೀರ್ಥಹಳ್ಳಿ ಪಟ್ಟಣ ಪ್ರವೇಶಿಸಿತು.
ನಂತರ ಗ್ರಾಮೀಣ ಭವನದಲ್ಲಿ ನಡೆದ ಬೃಹತ್ ಸಭೆಯಲ್ಲಿ ಪರಿಸರ ಹೋರಾಟಗಾರರು, ರಾಜಕೀಯ ಮುಖಂಡರು ಆಗ್ರಹಿಸಿದರು.
ಗಂಗಾ ಸ್ನಾನಂ-ತುಂಗಾ ಪಾನಂ ಎಂಬ ನಾಣ್ನುಡಿಗೆ ಅನ್ವರ್ಥವಾಗಿ ತುಂಗಾ ಕುಲುಷಿತಗೊಳ್ಳುತ್ತಿದೆ. ತುಂಗಭದ್ರೆಯಾದ ಬಳಿಕ ನೀರು ನೇರವಾಗಿ ಕುಡಿಯಲು ಯೋಗ್ಯವಲ್ಲದ ಸ್ಥಿತಿಗೆ ತಲುಪಿದೆ. ನಗರ ಗ್ರಾಮಗಳ ತ್ಯಾಜ್ಯದ ನೀರು ಪ್ಲಾಸ್ಟಿಕ್ ಬಳಕೆ, ರೈತರ ಹೊಲಗದ್ದೆ, ತೋಟಗಳಲ್ಲಿ ಬಳಸುವ ರಾಸಾಯನಿಕ ಗೊಬ್ಬರ, ಕೀಟನಾಶಕಗಳ ಮುಂದಿನ ಪೀಳಿಗೆಯ ಉಸಿರು ಕಸಿದುಕೊಳ್ಳಲಿದೆ ಎಂದು ಎಚ್ಚರಿಸಿದರು.


“ನದಿ ಕಣಿವೆ ಉಳಿಸುವ ಹೋರಾಟ 80ರ ದಶಕದಿಂದಲೂ ನಡೆಯುತ್ತಿದೆ. ಪಾರಂಪರಿಕ ಪದ್ಧತಿ ಅನುಸರಿಸದೆ ಮಾಡುತ್ತಿರುವ ಹೊಸ ಅಭಿವೃದ್ಧಿಗಳು ಪರಿಸರ ನಾಶಕ್ಕೆ ದೊಡ್ಡ ಕೊಡುಗೆ ನೀಡುತ್ತಿದೆ. ಸಾವಯವ, ಅರಣ್ಯ ಕೃಷಿ ಪದ್ಧತಿಯ ಅವಲಂಬನೆ ಹೆಚ್ಚಾಗಬೇಕು. ಅಕ್ರಮ ಮರಳು, ಕ್ರಿಮಿನಾಶಕ ಬಳಕೆಗಳ ಬಗ್ಗೆ ಸರ್ಕಾರ ಸೂಕ್ಷವಾಗಿ ಗಮನಿಸಿ ಕ್ರಮ ಕೈಗೊಳ್ಳಬೇಕು. ಕೃಷಿ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ ಹೆಚ್ಚು ಸಕ್ರೀಯವಾಗಿ ಕೆಲಸ ಮಾಡಬೇಕು” ಎಂದು ಜೀವವೈವಿಧ್ಯ ಮಂಡಳಿ ಮಾಜಿ ಅಧಕ್ಷ ಅನಂತ ಹೆಗಡೆ ಆಶಿಸರ ಹೇಳಿದರು.
“ಪ್ರಮುಖ ನದಿಗಳು ಕಲುಷಿತಗೊಂಡರೆ ಸಾವು ಬದುಕಿನ ಪ್ರಶ್ನೆ ಸೃಷ್ಟಿಯಾಗಲಿದೆ. ಶೇಕಡಾ 60ರಷ್ಟು ಕಾಯಿಲೆಗಳು ನೀರಿನಿಂದ ಬರುತ್ತಿದೆ ಎಂದು ವಿಶ್ವಸಂಸ್ಥೆ ಮಾಹಿತಿ ಹಂಚಿಕೊಂಡಿದೆ. ಆಸ್ಪತ್ರೆ, ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು ಪರ್ಯಾಯ ವ್ಯವಸ್ಥೆ ರೂಪಿಸಬೇಕು. ಆರೋಗ್ಯ ಇಲ್ಲದ ಅಭಿವೃದ್ಧಿ ಯೋಜನೆಗಳನ್ನು ಮಾಡಿದರೆ ಪ್ರಯೋಜನವೇನು? ಬೇರೆಯವರನ್ನು ದೂಷಿಸುವ ಬದಲು ಪ್ರತಿಯೊಬ್ಬ ನಾಗರೀಕ ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಶುದ್ದೀಕರಣ ವ್ಯವಸ್ಥೆ ಇಲ್ಲದೆ ನೇರವಾಗಿ ನೀರು ನದಿಗೆ ಹರಿಸಬಾರದು” ಎಂದು ಪರಿಸರ ಹೋರಾಟಗಾರ ಪ್ರೊ.ಬಿ.ಎಂ.ಕುಮಾರಸ್ವಾಮಿ ಮನವಿ ಮಾಡಿದರು.
“ಸ್ವಾರ್ಥಕ್ಕಾಗಿ ಪ್ರಕೃತಿ ಬಳಕೆ ಮಾಡಿಕೊಳ್ಳಬಾರದು. ವಿನಾಕಾರಣ ಪರಿಸರದ ಮೇಲೆ ಅತಿಕ್ರಮ ಮಾಡಿದರೆ ಪ್ರಕೃತಿ ಮಾನವ ಜಗತ್ತಿನ ಮೇಲೆ ಸೇಡು ತೀರಿಸಿಕೊಳ್ಳಲಿದೆ. ಪ್ರಕೃತಿಯನ್ನು ಪರಿಶುದ್ಧಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಎಚ್ಚರಿಕೆಯ ಕ್ರಮಗಳನ್ನು ಅನುಸರಿಸಬೇಕು. ಯುವಜನತೆ ನದಿ ಉಳಿವಿಗಾಗಿ ಸಾಮಾಜಿಕ ಜಾಲತಾಣವನ್ನು ಸಕ್ರೀಯವಾಗಿ ಬಳಕೆ ಮಾಡಬೇಕು” ಎಂದು ಸಂಸದ ಬಿ.ವೈ.ರಾಘವೇಂದ್ರ ಕರೆ ನೀಡಿದರು.
“ನಿರ್ಮಲ ತುಂಗಾಭದ್ರ ನೀರು ಕುಡಿಯುವವರ ಪಾದಯಾತ್ರೆ. ಶುದ್ಧ ಕುಡಿಯುವ ನೀರು ನಮ್ಮಂತೆಯೇ ಮುಂದಿನ ಪೀಳಿಗೆಗೂ ಸಿಗಬೇಕು. ಎಲ್ಲಾ ಪ್ರಜೆಗಳು ಪರಿಸರ ಪ್ರಜ್ಞೆ ಬೆಳೆಸಿಕೊಂಡು ಜಲ ಮತ್ತು ಬದುಕಿನ ಬಗೆಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಒಂದು ಸಣ್ಣ ಯೋಚನೆ ಪರಿಸರದ ಮೇಲಾಗುವ ಬಹುದೊಡ್ಡ ಅನಾಹುತ ತಪ್ಪಿಸಲಿದೆ” ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
“ತೀರ್ಥಹಳ್ಳಿ ಪಟ್ಟಣದಲ್ಲಿ ಪ್ರಮುಖವಾಗಿ ನಾಲ್ಕು ರಾಜಕಾಲುವೆಗಳಿವೆ. ಭೌಗೋಳಿಕ ಹಿನ್ನಲೆ ಅವಲೋಕಿಸಿದರೆ ಕೇವಲ ಒಂದು ಶುದ್ಧೀಕರಣ ಘಟಕ ಸ್ಥಾಪಿಸಲು ಸಾಧ್ಯವಿಲ್ಲ. 4 ಘಟಕಗಳನ್ನು ಮಾಡುವ ಅನಿವಾರ್ಯ ಇದೆ. ರಾಜ್ಯ ಸರ್ಕಾರದಿಂದ ಈಗಾಗಲೇ ₹30 ಕೋಟಿ ಅನುದಾನ ಜಲಶಕ್ತಿ ಶುದ್ಧೀಕರಣಕ್ಕೆ ನೀಡಿದ್ದು ಕ್ರಿಯಾಯೋಜನೆ ಸಿದ್ಧಪಡಿಸುತ್ತಿದ್ದೇವೆ” ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಟಿ.ರಹಮತ್ ಉಲ್ಲಾ ಅಸಾದಿ ಹೇಳಿದರು.
ಸಭೆಯಲ್ಲಿ ಪಾದಯಾತ್ರೆಯ ಸಂಚಾಲಕ ಎಂ.ಶಂಕರ್, ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಗೀತಾ ರಮೇಶ್, ಮುಖ್ಯಾಧಿಕಾರಿ ಡಿ.ನಾಗರಾಜ, ಮುಖಂಡರಾದ ಬಾಳೇಹಳ್ಳಿ ಪ್ರಭಾಕರ್, ರತ್ನಾಕರ ಶೆಟ್ಟಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು