4:56 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಜಲ್ಲಿಗುಡ್ಡೆ ಜಯನಗರದ ಹದಗೆಟ್ಟ ರಸ್ತೆ: ಕೂಡಲೇ ಕಾಂಕ್ರಿಟೀಕರಣಕ್ಕೆ ಒತ್ತಾಯಿಸಿ ಪಾಲಿಕೆ ಆಡಳಿತಕ್ಕೆ ಮನವಿ

23/06/2023, 19:13

ಮಂಗಳೂರು(reporterkarnataka.com):ನಗರ ಹೊರವಲಯದ ಮಹಾನಗರ ಪಾಲಿಕೆ ವ್ಯಾಪ್ತಿಯ ಬಜಾಲ್ ವಾರ್ಡಿನ ಜಲ್ಲಿಗುಡ್ಡೆಯಿಂದ ಜಯನಗರ ಪ್ರದೇಶಕ್ಕೆ ಸಂಪರ್ಕಿಸುವ ಮುಖ್ಯರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ತಕ್ಷಣ ರಸ್ತೆ ದುರಸ್ತಿ ಮಾಡುವಂತೆ ಪಾಲಿಕೆ ಆಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಸ್ಥಳೀಯ ನಿವಾಸಿಗಳ ಸುಗಮ ಸಂಚಾರಕ್ಕೆ ಬಹಳ ಅಡಚಣೆಯುಂಟಾಗಿದೆ. ರಸ್ತೆಯುದ್ದಕ್ಕೂ ಇರುವ ಗುಂಡಿಗಳಿಗೆ ಮಣ್ಣು ಮತ್ತು ಜಲ್ಲಿ ಮಿಶ್ರಣ ಮಾಡಿದ ಪರಿಣಾಮ ರಸ್ತೆಯಲ್ಲೆಲ್ಲ ಕೆಸರುಮಯವಾಗಿದೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಉರುಳಿ ಬೀಳುವಂತಹ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದ್ದು ರಸ್ತೆಯಲ್ಲಿ ವಾಹನ ಸಂಚಾರ ಮಾಡಲು ಕೂಡಾ ಅಯೋಗ್ಯವಾಗಿದೆ.ಮಾತ್ರವಲ್ಲ ನಡೆದಾಡಲೂ ಆಗದಂತಹ ಪರಿಸ್ಥಿತಿಯಿಂದ ಸ್ಥಳೀಯ ನಾಗರಿಕರು ದಿನನಿತ್ಯ ಸಮಸ್ಯೆಯನ್ನು ಅನುಭವಿಸುವಂತಾಗಿದೆ. ಈ ಬಗ್ಗೆ ಊರ ನಾಗರೀಕರು ಹಲವಾರು ಬಾರಿ ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಈ ರಸ್ತೆಯನ್ನು ದುರಸ್ತಿಗೊಳಿಸಲು ಸಾಧ್ಯವಾಗಿಲ್ಲ. ಈಗಾಗಲೇ ನಗರದಲ್ಲೆಲ್ಲ ಎಲ್ಲಾ ಮುಖ್ಯ ರಸ್ತೆ ಹಾಗೂ ಒಳರಸ್ತೆಗಳಿಗೆಲ್ಲ ಕಾಂಕ್ರಟೀಕರಣಗೊಳಿಸಲಾಗುತ್ತಿದ್ದೆ. ಆದರೆ ಬಜಾಲ್ ವಾರ್ಡಿನ ಮುಖ್ಯರಸ್ತೆಯಿಂದ ಹಿಡಿದು ಒಳರಸ್ತೆಗಳ ವರೆಗೂ ಯಾವುದೇ ರಸ್ತೆಗಳನ್ನು ಕಾಂಕ್ರಟೀಕರಣಗೊಳಿಸಲು ಸಾಧ್ಯವಾಗದೆ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ.

ಈ ಎಲ್ಲಾ ಹಿನ್ನಲೆಯಲ್ಲಿ ಪಾಲಿಕೆ ಆಡಳಿತ ಈ ಕೂಡಲೇ ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಜಯನಗರದ ಹದಗೆಟ್ಟ ರಸ್ತೆಯನ್ನು ಕೂಡಲೇ ಕಾಂಕ್ರಟೀಕರಣಗೊಳಿಸಲು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಮನವಿಯನ್ನು ಸಲ್ಲಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು