6:31 AM Monday6 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಜಮೀರ್ ಸಂವಿಧಾನಕ್ಕೂ ಬೆಲೆ ಕೊಡದ ಸಚಿವ; ಕಾಂಗ್ರೆಸ್ ನಲ್ಲೇ ಹೆಚ್ಚು ಕೋಮುವಾದಿಗಳಿದ್ದಾರೆ: ಶಾಸಕ ಡಾ.ಭರತ್ ಶೆಟ್ಟಿ

19/11/2023, 13:06

ಮಂಗಳೂರು(reporterjarnataka.com):ಎಪಿಜೆ ಅಬ್ದುಲ್ ಕಲಾಂ ಅವರಂತಹ ಶ್ರೇಷ್ಟರನ್ನು ರಾಷ್ಟ್ರಪತಿ ಮಾಡಿದ ಬಿಜೆಪಿ,ಸಂವಿಧಾನಾತ್ಮಕ ಹುದ್ದೆಯನ್ನು ಹೊಂದಿರುವ ಶಾಸಕ ಯು.ಟಿ. ಖಾದರ್ ಅವರಿಗೂ, ಗೌರವ ಕೊಡುತ್ತದೆ. ಜಾತಿ ಮತ ಭೇದವನ್ನು ಪರಿಗಣಿಸಿಲ್ಲ.
ಕಾಂಗ್ರೆಸ್ ವಲಸೆ ನಾಯಕ, ಸಚಿವ ಜಮೀರ್ ಅಹ್ಮದ್ ಸದಾ ತನ್ನ ಕೋಮಿನ ಜನರನ್ನು ಹಿಂದುಗಳ ವಿರುದ್ದ ಎತ್ತಿಕಟ್ಟಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೋಮುವಾದಿ ಎಂಬುದು ಬಹಿರಂಗವಾಗಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಟೀಕಿಸಿದ್ದಾರೆ.
ಬಿಜೆಪಿ‌ಯು ಶಾನ್ವಾಝ್ , ಅಬ್ಬಾಸ್ ನಕ್ವಿ‌ ಅವರಂತಹವರಿಗೆ ಸಚಿವ ಸ್ಥಾನ ನೀಡಿ ಗೌರವಿಸಿದೆ. ಅವರೆಲ್ಲಾ ದೇಶದ ಸಂವಿಧಾನ, ರಾಷ್ಟ್ರೀಯತೆಯಲ್ಲಿ ನಂಬಿಕೆ ಯುಳ್ಳ ರಾಷ್ಟ್ರವಾದಿ ಚಿಂತಕರು, ನಿಮ್ಮಂತೆ ಜಾತಿ ಓಲೈಕೆಯ ಸಂಕುಚಿತ ಮನಸ್ಸಿನ ನಾಯಕರಲ್ಲ. ರಾಷ್ಟ್ರೀಯತೆ ಏನೇಂಬುದೇ ನಿಮಗೆ ತಿಳಿದಿಲ್ಲ ಎಂದು ಡಾ.ಭರತ್ ಶೆಟ್ಟಿ ವೈ ತಿರುಗೇಟು ನೀಡಿದ್ದಾರೆ.
ತೆಲಂಗಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ಅತಿಯಾದ ಮುಸ್ಲಿಂ ಒಲೈಕೆಗೆ ಮುಂದಾಗಿರುವ ಜಮೀರ್ ಅಹ್ಮದ್ ಪ್ರಚಾರ ಬದಲು ತಮ್ಮ ಜಾತಿಯೇ ಮೇಲು ಎಂದು ಬಿಂಬಿಸುವ ಯತ್ನ ನಡೆಸಿದ್ದಾರೆ.
ಚಾಮರಾಜಪೇಟೆ, ಹುಬ್ಬಳ್ಳಿ ಮೈದಾನದ ಗಣೇಶೋತ್ಸವ ವಿವಾದದ ತುಪ್ಪ ಸುರಿದ,ಟಿಪ್ಪು ಜಯಂತಿಗೆ ಕುಮ್ಮಕ್ಕು, ಅಪರಾಧ ಕೃತ್ಯ ನಡೆಸಿದವರಿಗೆ ಬೆಂಬಲ ಇಂತಹ ಕೆಲಸ ಕಾರ್ಯಗಳಿಗೆ ಒತ್ತು ನೀಡುವ ಜಮೀರ್ ಅಹ್ಮದ್ ರಿಂದ ಬೇರೆ ಏನು ನಿರೀಕ್ಷಿಸಲು ಸಾಧ್ಯವಿಲ್ಲ.
ಬಿಜೆಪಿ ಕೋಮುವಾದಿ ಪಕ್ಷ ಎಂದು ಹೇಳಿಕೆ ಕೊಡುವ ಕಾಂಗ್ರೆಸ್ ನಾಯಕರು ತಮ್ಮ ಪಕ್ಷವೇ ಹೆಚ್ಚು ಕೋಮುವಾದಿ ನಾಯಕರನ್ನು ಹೊಂದಿದೆ ಎಂಬುದನ್ನು ಒಪ್ಪಿಕೊಳ್ಳುವ ಕಾಲ ಬಂದಿದೆ ಎಂದು ವ್ಯಂಗ್ಯವಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು