6:02 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಜಮೀರ್ ಸಂವಿಧಾನಕ್ಕೂ ಬೆಲೆ ಕೊಡದ ಸಚಿವ; ಕಾಂಗ್ರೆಸ್ ನಲ್ಲೇ ಹೆಚ್ಚು ಕೋಮುವಾದಿಗಳಿದ್ದಾರೆ: ಶಾಸಕ ಡಾ.ಭರತ್ ಶೆಟ್ಟಿ

19/11/2023, 13:06

ಮಂಗಳೂರು(reporterjarnataka.com):ಎಪಿಜೆ ಅಬ್ದುಲ್ ಕಲಾಂ ಅವರಂತಹ ಶ್ರೇಷ್ಟರನ್ನು ರಾಷ್ಟ್ರಪತಿ ಮಾಡಿದ ಬಿಜೆಪಿ,ಸಂವಿಧಾನಾತ್ಮಕ ಹುದ್ದೆಯನ್ನು ಹೊಂದಿರುವ ಶಾಸಕ ಯು.ಟಿ. ಖಾದರ್ ಅವರಿಗೂ, ಗೌರವ ಕೊಡುತ್ತದೆ. ಜಾತಿ ಮತ ಭೇದವನ್ನು ಪರಿಗಣಿಸಿಲ್ಲ.
ಕಾಂಗ್ರೆಸ್ ವಲಸೆ ನಾಯಕ, ಸಚಿವ ಜಮೀರ್ ಅಹ್ಮದ್ ಸದಾ ತನ್ನ ಕೋಮಿನ ಜನರನ್ನು ಹಿಂದುಗಳ ವಿರುದ್ದ ಎತ್ತಿಕಟ್ಟಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೋಮುವಾದಿ ಎಂಬುದು ಬಹಿರಂಗವಾಗಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಟೀಕಿಸಿದ್ದಾರೆ.
ಬಿಜೆಪಿ‌ಯು ಶಾನ್ವಾಝ್ , ಅಬ್ಬಾಸ್ ನಕ್ವಿ‌ ಅವರಂತಹವರಿಗೆ ಸಚಿವ ಸ್ಥಾನ ನೀಡಿ ಗೌರವಿಸಿದೆ. ಅವರೆಲ್ಲಾ ದೇಶದ ಸಂವಿಧಾನ, ರಾಷ್ಟ್ರೀಯತೆಯಲ್ಲಿ ನಂಬಿಕೆ ಯುಳ್ಳ ರಾಷ್ಟ್ರವಾದಿ ಚಿಂತಕರು, ನಿಮ್ಮಂತೆ ಜಾತಿ ಓಲೈಕೆಯ ಸಂಕುಚಿತ ಮನಸ್ಸಿನ ನಾಯಕರಲ್ಲ. ರಾಷ್ಟ್ರೀಯತೆ ಏನೇಂಬುದೇ ನಿಮಗೆ ತಿಳಿದಿಲ್ಲ ಎಂದು ಡಾ.ಭರತ್ ಶೆಟ್ಟಿ ವೈ ತಿರುಗೇಟು ನೀಡಿದ್ದಾರೆ.
ತೆಲಂಗಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ಅತಿಯಾದ ಮುಸ್ಲಿಂ ಒಲೈಕೆಗೆ ಮುಂದಾಗಿರುವ ಜಮೀರ್ ಅಹ್ಮದ್ ಪ್ರಚಾರ ಬದಲು ತಮ್ಮ ಜಾತಿಯೇ ಮೇಲು ಎಂದು ಬಿಂಬಿಸುವ ಯತ್ನ ನಡೆಸಿದ್ದಾರೆ.
ಚಾಮರಾಜಪೇಟೆ, ಹುಬ್ಬಳ್ಳಿ ಮೈದಾನದ ಗಣೇಶೋತ್ಸವ ವಿವಾದದ ತುಪ್ಪ ಸುರಿದ,ಟಿಪ್ಪು ಜಯಂತಿಗೆ ಕುಮ್ಮಕ್ಕು, ಅಪರಾಧ ಕೃತ್ಯ ನಡೆಸಿದವರಿಗೆ ಬೆಂಬಲ ಇಂತಹ ಕೆಲಸ ಕಾರ್ಯಗಳಿಗೆ ಒತ್ತು ನೀಡುವ ಜಮೀರ್ ಅಹ್ಮದ್ ರಿಂದ ಬೇರೆ ಏನು ನಿರೀಕ್ಷಿಸಲು ಸಾಧ್ಯವಿಲ್ಲ.
ಬಿಜೆಪಿ ಕೋಮುವಾದಿ ಪಕ್ಷ ಎಂದು ಹೇಳಿಕೆ ಕೊಡುವ ಕಾಂಗ್ರೆಸ್ ನಾಯಕರು ತಮ್ಮ ಪಕ್ಷವೇ ಹೆಚ್ಚು ಕೋಮುವಾದಿ ನಾಯಕರನ್ನು ಹೊಂದಿದೆ ಎಂಬುದನ್ನು ಒಪ್ಪಿಕೊಳ್ಳುವ ಕಾಲ ಬಂದಿದೆ ಎಂದು ವ್ಯಂಗ್ಯವಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು