10:14 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಜಮೀನಿಗಾಗಿ ವಿಧವೆಯ ಅರೆ ಬೆತ್ತಲೆಗೊಳಿಸಿ ಹಲ್ಲೆ: ಕ್ರಮ ಕೈಗೊಳ್ಳದ ಪೊಲೀಸರು!; ಆರೋಪಿ ಪರ ನಿಂತ್ರಾ ಖಾಕಿ ಅಧಿಕಾರಿಗಳು..?

25/02/2023, 09:58

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.ಕಾಂ

ಓರ್ವ ವಿಧವೆ ಹಾಗೂ ಮಗಳನ್ನ ಜಮೀನಿನ ವ್ಯಾಜ್ಯದ ಸಲುವಾಗಿ ಸಂಬಂಧಿಕರೇ ಅರೆಬೆತ್ತಲಾಗಿ ಥಳಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ, ಅವರ ವಿರುದ್ದ ದೂರು ನೀಡಿದ್ರೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳದೆ ಅವರ ಬೆಂಬಲವಾಗಿ ನಿಂತಿದೆ ಎಂದು ಶಾಂತವ್ವ ನಾಗಪ್ಪ ಮಾಂಗ ಎಂಬ ಮಹಿಳೆ ಆರೋಪಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಘಟನಟ್ಟಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಶಾಂತವ್ವ ನಾಗಪ್ಪ ಮಾಂಗ್ ಎಂಬ ವಿಧವೆಯ ಜಮೀನು ವಶಪಡಿಸಿಕೊಳ್ಳಲು ಗಂಡನ ಅಣ್ಣತಮ್ಮಂದಿರಾದ ಲಕ್ಕಪ್ಪ ಬಾಬು ಮಾಂಗ, ಭೀಮಪ್ಪ ಲಕ್ಕಪ್ಪ ಮಾಂಗ, ಹಣಮಂತ ಲಕ್ಕಪ್ಪ ಮಾಂಗ ಎಂಬುವವರು ಸಂತ್ರಸ್ತೆ ಶಾಂತವ್ವ ಹಾಗೂ ಅವಳ ಅಪ್ರಾಪ್ತ ಮಗಳ ಎದೆಗೆ ಕೈ ಹಾಕಿ, ಜಡೆ ಹಿಡಿದು ಬಡಿಗೆಯಿಂದು ಬಡಿದು ಹಲ್ಲೆ ಮಾಡಿದ್ದರಿಂದ ಕಳೆದ ಮೂರು ದಿನದಿಂದ ಪ್ರಜ್ಞೆ ತಪ್ಪಿದ್ದಾಳೆ. ಈ ಕುರಿತು ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮೂರು ದಿನಗಳಾಗಿದೆ. ಆರೋಪಿತರು ಪೋಲಿಸ್ ಠಾಣೆ ಸುತ್ತಮುತ್ತ ತಿರುಗುತ್ತಿದ್ದರೂ ಸಹ ಬಂಧನ ಮಾಡದೆ ಅವರನ್ನು ಪರಾರಿಯಾಗಲು ಬಿಟ್ಟಿದ್ದಾರೆ ಎಂದು ಸಂತ್ರಸ್ತ ಮಹಿಳೆ ಪೊಲೀಸ್ ಇಲಾಖೆ ಕಾರ್ಯವೈಖರಿ ಪ್ರಶ್ನಿಸುವಂತಹ ಗಂಭೀರ ಆರೋಪ ಮಾಡಿದ್ದಾಳೆ.


ಹಲ್ಲೆಗೊಳಗಾದ ಅಪ್ರಾಪ್ತ ಯುವತಿ ಹಾಗೂ ಸಂತ್ರಸ್ತೆಯ ಆರೋಗ್ಯ ಪರಿಸ್ಥಿತಿ ಗಂಭಿರವಾಗಿದ್ದು, ಅಥಣಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಜವಾಗಿಯೂ ಪೊಲೀಸ್ ಇಲಾಖೆ ಆರೋಪಿತರನ್ನು ರಕ್ಷಿಸುತ್ತಿದೆಯಾ ? ಹಾಗೂ ಮಹಿಳಾ ಆಯೋಗ ಏನ್ಮಾಡ್ತಿದೆ ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು