11:27 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಜಮೀರ್- ಮಲ್ಲಿಕಾರ್ಜುನ್ ಜಟಾಪಟಿ?: ದಾವಣಗೆರೆ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಗೆ ಬಿಸಿ ತುಪ್ಪವಾಗುತ್ತಿದೆಯೇ?

31/03/2026, 15:05

ದಾವಣಗೆರೆ(reporterkarnataka.com): ಉಪ ಚುನಾವಣೆ ನಡೆಯಲಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ ಶಾಮನೂರು ಪರ ಪ್ರಚಾರ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಹೀಗಾಗಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮುಸ್ಲಿಂ ಮತಗಳನ್ನು ಗಳಿಸುವ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ.
ಜಮೀರ್ ಸದ್ಯ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರದಲ್ಲಿ ನಿರತರಾಗಿದ್ದಾರೆ.
ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ 33 ಕ್ಷೇತ್ರಗಳ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ. ಸಮುದಾಯದ ಮತದಾರರ ಮೇಲೆ ಪ್ರಭಾವ ಬೀರಲು ಅವರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ ಮತ್ತು ಧರ್ಮಗುರುಗಳೊಂದಿಗೆ ಸಂವಹನ ನಡೆಸುತ್ತಿದ್ದಾರೆ.
ದಾವಣಗೆರೆ ದಕ್ಷಿಣದಿಂದ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಶಾಮನೂರು ಕಣದಲ್ಲಿದ್ದಾರೆ, ಕ್ಷೇತ್ರದಲ್ಲಿ ಪ್ರಚಾರಕ್ಕೆ ಜಮೀರ್ ಬಾರದೇ ಇದ್ದರೂ ನಡೆಯುತ್ತೆ ಎಂದು ಮಲ್ಲಿಕಾರ್ಜುನ್ ಹೇಳಿಕೆ ನೀಡಿದ್ದರು. ಈ ಬಗ್ಗೆ ಸಿದ್ದರಾಮಯ್ಯ ಜತೆ ಮಾತನಾಡಿರುವ ಜಮೀರ್‌, ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ, ಅಲ್ಲಿಗೆ ಪ್ರಚಾರಕ್ಕೆ ಹೋಗಬೇಕೇ ಎಂದು ಪ್ರಶ್ನಿಸಿದ್ದಾರೆಂದು ತಿಳಿದು ಬಂದಿದೆ.
ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಸಮುದಾಯದ ಸದಸ್ಯರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಜಮೀರ್ ಒತ್ತಾಯಿಸಿದ್ದರು. ಕಾಂಗ್ರೆಸ್ ನಾಯಕ ಸಾದಿಕ್ ಪೈಲ್ವಾನ್ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಮತ್ತು ಪರಿಷತ್ತಿನ ಮುಖ್ಯ ಸಚೇತಕ ಎಂಎಲ್‌ಸಿ ಸಲೀಂ ಅಹ್ಮದ್ ಸೇರಿ ಸಾದಿಕ್ ಅವರ ಮನವೊಲಿಸುವಲ್ಲಿ ಯಶಸ್ವಿಯಾದರು.
ಮಲ್ಲಿಕಾರ್ಜುನ ಅವರಿಗೆ ಬೇಡವಾದರೆ ದಾವಣಗೆರೆ ದಕ್ಷಿಣಕ್ಕೆ ಹೋಗುವುದಿಲ್ಲ ಎಂದು ಜಮೀರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳಿದ್ದರು. ತಮ್ಮ ಸಮುದಾಯದ ಸದಸ್ಯರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಮುಸ್ಲಿಂ ಧಾರ್ಮಿಕ ನಾಯಕರು ಸಮುದಾಯದ ಸದಸ್ಯರಿಗೆ ಆಗ್ರಹಿಸಿದ್ದಾರೆ, ಹೀಗಾಗಿ ಧಾರ್ಮಿಕ ಮುಖಂಡರ ಕೋಪಕ್ಕೆ ಹೆದರಿ ಜಮೀರ್ ದಾವಣಗೆರೆ ಕ್ಷೇತ್ರ ಪ್ರಚಾರ ನಿರಾಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು