10:38 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಜನವರಿ 17 ರಿಂದ ಕನಾ೯ಟಕ ಕ್ರೀಡಾಕೂಟ: 25 ವಿಭಾಗಗಳಲ್ಲಿ ಸ್ಪರ್ಧೆ; 3247 ಕ್ರೀಡಾಪಟುಗಳು ಭಾಗಿ

12/01/2025, 13:46

ಮಂಗಳೂರು( reporterkarnataka.com): ಜನವರಿ 17 ರಿಂದ 23ರವರೆಗೆ ನಡೆಯುವ ಕರ್ನಾಟಕ ಕ್ರೀಡಾಕೂಟದಲ್ಲಿ ಒಟ್ಟು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ ತಿಳಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ -2025ರ ಅಂಗವಾಗಿ ವಿವಿಧ ಶಿಕ್ಷಣ ಸಂಸ್ಥೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
3247 ಕ್ರೀಡಾಪಟುಗಳು ಹಾಗೂ 599 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರ ತಂಡ ಸೇರಿದಂತೆ ಒಟ್ಟು 4250 ಜನ ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಜನವರಿ 17ರಂದು ಸಂಜೆ 5 ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟ – 2025 ರ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದರು.
ಮಂಗಳೂರಿನಲ್ಲಿ ಬ್ಯಾಡ್ಮಿಂಟನ್ ಬಾಸ್ಕೆಟ್ ಬಾಲ್, ಪೆನ್ಸಿಂಗ್, ಫುಟ್ಬಾಲ್, ಹ್ಯಾಂಡ್ ಬಾಲ್, ಕೋಕೋ, ನೆಟ್ ಬಾಲ್, ಈಜು, ಟೇಕ್ವಾಂಡೋ, ವಾಲಿಬಾಲ್ , ವೈಟ್ ಲಿಫ್ಟಿಂಗ್ ಹಾಗೂ ವುಶು ಒಟ್ಟು 12 ಕ್ರೀಡೆಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ಪ್ರತಿಯೊಂದು ಕ್ರೀಡೆಯಲ್ಲಿ ಪುರುಷರು ಮತ್ತು ಮಹಿಳಾ ವಿಭಾಗದಲ್ಲಿ ಪ್ರತ್ಯೇಕ ಸ್ಪರ್ಧೆ ನಡೆಯಲಿದೆ. ಕ್ರೀಡೆಯಲ್ಲಿ ಹಲವು ವಿಭಾಗಗಳಲ್ಲಿ ಒಟ್ಟು 631 ಚಿನ್ನದ ಪದಕ, 631 ಬೆಳ್ಳಿ ಪದಕ ಮತ್ತು 827 ಕಂಚಿನ ಪದಕಗಳಿಗಾಗಿ ಕ್ರೀಡಾಪಟುಗಳ ಸ್ಪರ್ಧೆ ನಡೆಯಲಿದೆ ಎಂದು ಅವರು ನುಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ., ಜಿ. ಪಂ. ಸಿಇಒ ಡಾ. ಆನಂದ್ ಕೆ., ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜಾಕಿಮ್ ಸ್ಟಾನಿ, ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಯು.ಎಚ್. ಉಮ್ಮರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು