8:15 AM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಜನವರಿ 17 ರಿಂದ ಕನಾ೯ಟಕ ಕ್ರೀಡಾಕೂಟ: 25 ವಿಭಾಗಗಳಲ್ಲಿ ಸ್ಪರ್ಧೆ; 3247 ಕ್ರೀಡಾಪಟುಗಳು ಭಾಗಿ

12/01/2025, 13:46

ಮಂಗಳೂರು( reporterkarnataka.com): ಜನವರಿ 17 ರಿಂದ 23ರವರೆಗೆ ನಡೆಯುವ ಕರ್ನಾಟಕ ಕ್ರೀಡಾಕೂಟದಲ್ಲಿ ಒಟ್ಟು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ ತಿಳಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ -2025ರ ಅಂಗವಾಗಿ ವಿವಿಧ ಶಿಕ್ಷಣ ಸಂಸ್ಥೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
3247 ಕ್ರೀಡಾಪಟುಗಳು ಹಾಗೂ 599 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರ ತಂಡ ಸೇರಿದಂತೆ ಒಟ್ಟು 4250 ಜನ ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಜನವರಿ 17ರಂದು ಸಂಜೆ 5 ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟ – 2025 ರ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದರು.
ಮಂಗಳೂರಿನಲ್ಲಿ ಬ್ಯಾಡ್ಮಿಂಟನ್ ಬಾಸ್ಕೆಟ್ ಬಾಲ್, ಪೆನ್ಸಿಂಗ್, ಫುಟ್ಬಾಲ್, ಹ್ಯಾಂಡ್ ಬಾಲ್, ಕೋಕೋ, ನೆಟ್ ಬಾಲ್, ಈಜು, ಟೇಕ್ವಾಂಡೋ, ವಾಲಿಬಾಲ್ , ವೈಟ್ ಲಿಫ್ಟಿಂಗ್ ಹಾಗೂ ವುಶು ಒಟ್ಟು 12 ಕ್ರೀಡೆಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ಪ್ರತಿಯೊಂದು ಕ್ರೀಡೆಯಲ್ಲಿ ಪುರುಷರು ಮತ್ತು ಮಹಿಳಾ ವಿಭಾಗದಲ್ಲಿ ಪ್ರತ್ಯೇಕ ಸ್ಪರ್ಧೆ ನಡೆಯಲಿದೆ. ಕ್ರೀಡೆಯಲ್ಲಿ ಹಲವು ವಿಭಾಗಗಳಲ್ಲಿ ಒಟ್ಟು 631 ಚಿನ್ನದ ಪದಕ, 631 ಬೆಳ್ಳಿ ಪದಕ ಮತ್ತು 827 ಕಂಚಿನ ಪದಕಗಳಿಗಾಗಿ ಕ್ರೀಡಾಪಟುಗಳ ಸ್ಪರ್ಧೆ ನಡೆಯಲಿದೆ ಎಂದು ಅವರು ನುಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ., ಜಿ. ಪಂ. ಸಿಇಒ ಡಾ. ಆನಂದ್ ಕೆ., ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜಾಕಿಮ್ ಸ್ಟಾನಿ, ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಯು.ಎಚ್. ಉಮ್ಮರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು