3:49 PM Saturday27 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60…

ಇತ್ತೀಚಿನ ಸುದ್ದಿ

ಜನವರಿ 17 ರಿಂದ ಕನಾ೯ಟಕ ಕ್ರೀಡಾಕೂಟ: 25 ವಿಭಾಗಗಳಲ್ಲಿ ಸ್ಪರ್ಧೆ; 3247 ಕ್ರೀಡಾಪಟುಗಳು ಭಾಗಿ

12/01/2025, 13:46

ಮಂಗಳೂರು( reporterkarnataka.com): ಜನವರಿ 17 ರಿಂದ 23ರವರೆಗೆ ನಡೆಯುವ ಕರ್ನಾಟಕ ಕ್ರೀಡಾಕೂಟದಲ್ಲಿ ಒಟ್ಟು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ ತಿಳಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ -2025ರ ಅಂಗವಾಗಿ ವಿವಿಧ ಶಿಕ್ಷಣ ಸಂಸ್ಥೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
3247 ಕ್ರೀಡಾಪಟುಗಳು ಹಾಗೂ 599 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರ ತಂಡ ಸೇರಿದಂತೆ ಒಟ್ಟು 4250 ಜನ ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಜನವರಿ 17ರಂದು ಸಂಜೆ 5 ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟ – 2025 ರ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದರು.
ಮಂಗಳೂರಿನಲ್ಲಿ ಬ್ಯಾಡ್ಮಿಂಟನ್ ಬಾಸ್ಕೆಟ್ ಬಾಲ್, ಪೆನ್ಸಿಂಗ್, ಫುಟ್ಬಾಲ್, ಹ್ಯಾಂಡ್ ಬಾಲ್, ಕೋಕೋ, ನೆಟ್ ಬಾಲ್, ಈಜು, ಟೇಕ್ವಾಂಡೋ, ವಾಲಿಬಾಲ್ , ವೈಟ್ ಲಿಫ್ಟಿಂಗ್ ಹಾಗೂ ವುಶು ಒಟ್ಟು 12 ಕ್ರೀಡೆಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ಪ್ರತಿಯೊಂದು ಕ್ರೀಡೆಯಲ್ಲಿ ಪುರುಷರು ಮತ್ತು ಮಹಿಳಾ ವಿಭಾಗದಲ್ಲಿ ಪ್ರತ್ಯೇಕ ಸ್ಪರ್ಧೆ ನಡೆಯಲಿದೆ. ಕ್ರೀಡೆಯಲ್ಲಿ ಹಲವು ವಿಭಾಗಗಳಲ್ಲಿ ಒಟ್ಟು 631 ಚಿನ್ನದ ಪದಕ, 631 ಬೆಳ್ಳಿ ಪದಕ ಮತ್ತು 827 ಕಂಚಿನ ಪದಕಗಳಿಗಾಗಿ ಕ್ರೀಡಾಪಟುಗಳ ಸ್ಪರ್ಧೆ ನಡೆಯಲಿದೆ ಎಂದು ಅವರು ನುಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ., ಜಿ. ಪಂ. ಸಿಇಒ ಡಾ. ಆನಂದ್ ಕೆ., ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜಾಕಿಮ್ ಸ್ಟಾನಿ, ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಯು.ಎಚ್. ಉಮ್ಮರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು