10:16 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಜನವರಿ 17 ರಿಂದ ಕನಾ೯ಟಕ ಕ್ರೀಡಾಕೂಟ: 25 ವಿಭಾಗಗಳಲ್ಲಿ ಸ್ಪರ್ಧೆ; 3247 ಕ್ರೀಡಾಪಟುಗಳು ಭಾಗಿ

12/01/2025, 13:46

ಮಂಗಳೂರು( reporterkarnataka.com): ಜನವರಿ 17 ರಿಂದ 23ರವರೆಗೆ ನಡೆಯುವ ಕರ್ನಾಟಕ ಕ್ರೀಡಾಕೂಟದಲ್ಲಿ ಒಟ್ಟು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ ತಿಳಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ -2025ರ ಅಂಗವಾಗಿ ವಿವಿಧ ಶಿಕ್ಷಣ ಸಂಸ್ಥೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
3247 ಕ್ರೀಡಾಪಟುಗಳು ಹಾಗೂ 599 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರ ತಂಡ ಸೇರಿದಂತೆ ಒಟ್ಟು 4250 ಜನ ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಜನವರಿ 17ರಂದು ಸಂಜೆ 5 ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟ – 2025 ರ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದರು.
ಮಂಗಳೂರಿನಲ್ಲಿ ಬ್ಯಾಡ್ಮಿಂಟನ್ ಬಾಸ್ಕೆಟ್ ಬಾಲ್, ಪೆನ್ಸಿಂಗ್, ಫುಟ್ಬಾಲ್, ಹ್ಯಾಂಡ್ ಬಾಲ್, ಕೋಕೋ, ನೆಟ್ ಬಾಲ್, ಈಜು, ಟೇಕ್ವಾಂಡೋ, ವಾಲಿಬಾಲ್ , ವೈಟ್ ಲಿಫ್ಟಿಂಗ್ ಹಾಗೂ ವುಶು ಒಟ್ಟು 12 ಕ್ರೀಡೆಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ಪ್ರತಿಯೊಂದು ಕ್ರೀಡೆಯಲ್ಲಿ ಪುರುಷರು ಮತ್ತು ಮಹಿಳಾ ವಿಭಾಗದಲ್ಲಿ ಪ್ರತ್ಯೇಕ ಸ್ಪರ್ಧೆ ನಡೆಯಲಿದೆ. ಕ್ರೀಡೆಯಲ್ಲಿ ಹಲವು ವಿಭಾಗಗಳಲ್ಲಿ ಒಟ್ಟು 631 ಚಿನ್ನದ ಪದಕ, 631 ಬೆಳ್ಳಿ ಪದಕ ಮತ್ತು 827 ಕಂಚಿನ ಪದಕಗಳಿಗಾಗಿ ಕ್ರೀಡಾಪಟುಗಳ ಸ್ಪರ್ಧೆ ನಡೆಯಲಿದೆ ಎಂದು ಅವರು ನುಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ., ಜಿ. ಪಂ. ಸಿಇಒ ಡಾ. ಆನಂದ್ ಕೆ., ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜಾಕಿಮ್ ಸ್ಟಾನಿ, ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಯು.ಎಚ್. ಉಮ್ಮರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು