1:26 PM Monday13 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಜನವರಿ 17 ರಿಂದ ಕನಾ೯ಟಕ ಕ್ರೀಡಾಕೂಟ: 25 ವಿಭಾಗಗಳಲ್ಲಿ ಸ್ಪರ್ಧೆ; 3247 ಕ್ರೀಡಾಪಟುಗಳು ಭಾಗಿ

12/01/2025, 13:46

ಮಂಗಳೂರು( reporterkarnataka.com): ಜನವರಿ 17 ರಿಂದ 23ರವರೆಗೆ ನಡೆಯುವ ಕರ್ನಾಟಕ ಕ್ರೀಡಾಕೂಟದಲ್ಲಿ ಒಟ್ಟು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ ತಿಳಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ -2025ರ ಅಂಗವಾಗಿ ವಿವಿಧ ಶಿಕ್ಷಣ ಸಂಸ್ಥೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
3247 ಕ್ರೀಡಾಪಟುಗಳು ಹಾಗೂ 599 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರ ತಂಡ ಸೇರಿದಂತೆ ಒಟ್ಟು 4250 ಜನ ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಜನವರಿ 17ರಂದು ಸಂಜೆ 5 ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟ – 2025 ರ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದರು.
ಮಂಗಳೂರಿನಲ್ಲಿ ಬ್ಯಾಡ್ಮಿಂಟನ್ ಬಾಸ್ಕೆಟ್ ಬಾಲ್, ಪೆನ್ಸಿಂಗ್, ಫುಟ್ಬಾಲ್, ಹ್ಯಾಂಡ್ ಬಾಲ್, ಕೋಕೋ, ನೆಟ್ ಬಾಲ್, ಈಜು, ಟೇಕ್ವಾಂಡೋ, ವಾಲಿಬಾಲ್ , ವೈಟ್ ಲಿಫ್ಟಿಂಗ್ ಹಾಗೂ ವುಶು ಒಟ್ಟು 12 ಕ್ರೀಡೆಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ಪ್ರತಿಯೊಂದು ಕ್ರೀಡೆಯಲ್ಲಿ ಪುರುಷರು ಮತ್ತು ಮಹಿಳಾ ವಿಭಾಗದಲ್ಲಿ ಪ್ರತ್ಯೇಕ ಸ್ಪರ್ಧೆ ನಡೆಯಲಿದೆ. ಕ್ರೀಡೆಯಲ್ಲಿ ಹಲವು ವಿಭಾಗಗಳಲ್ಲಿ ಒಟ್ಟು 631 ಚಿನ್ನದ ಪದಕ, 631 ಬೆಳ್ಳಿ ಪದಕ ಮತ್ತು 827 ಕಂಚಿನ ಪದಕಗಳಿಗಾಗಿ ಕ್ರೀಡಾಪಟುಗಳ ಸ್ಪರ್ಧೆ ನಡೆಯಲಿದೆ ಎಂದು ಅವರು ನುಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ., ಜಿ. ಪಂ. ಸಿಇಒ ಡಾ. ಆನಂದ್ ಕೆ., ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜಾಕಿಮ್ ಸ್ಟಾನಿ, ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಯು.ಎಚ್. ಉಮ್ಮರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು