3:50 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಜ. 29: ಕೇದಾರ ಜಗದ್ಗುರು ಅಡ್ಡಪಲ್ಲಕ್ಕಿ ಉತ್ಸವ; ಧರ್ಮ ಜಾಗೃತಿ ಸಭೆ, ಇಷ್ಟಲಿಂಗ ಪೂಜೆ

16/01/2023, 08:41

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ, ಪಟ್ಟಣದಲ್ಲಿ ಜ29ರಂದು ಶ್ರೀಹಿನವತ್ ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ1008 ಜಗದ್ಗುರು, ಕೇದಾರನಾಥ ರಾಜಗುರುವರ್ಯ ಭೀಮಶಂಕರ ಲಿಂಗ ಶಿವಾಚಾರ್ಯ ರವರ ಅಡ್ಡಪಲ್ಲಕ್ಕಿ ಮಹೋತ್ಸವ. ಸನಾತನ ಧರ್ಮ ಜಾಗೃತಿ ಸಮಾರಂಭ, ಹಾಗೂ ಸಂಗೀತಯುಕ್ತ ಇಷ್ಟಲಿಂಗ ಪೂಜೆ ಜರುಗಲಿದೆ.
ಪಟ್ಟಣದ ಶ್ರೀಪೇಟೆ ಬಸವೇಶ್ವರ ಸೇವಾ ಸಮಿತಿ, ಶ್ರೀಕೇದಾರ ಜಗದ್ಗುರುಗಳ ಉತ್ಸವ ಸಮಿತಿ ಹಾಗೂ ಕೂಡ್ಲಿಗಿ ಪಟ್ಟಣ ಮತ್ತು ತಾಲೂಕಿನ ಸದ್ಭಕ್ತ ವೃಂದ ದವರಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಜ29ರಂದು ಭಾನುವಾರ ಸಂಜೆ 4 ಗಂಟೆಗೆ ಶ್ರೀಪೇಟೆ ಬಸವೇಶ್ವರ ದೇವಸ್ಥಾನದಿಂದ, ಶ್ರೀಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಪ್ರಾರಂಭಗೊಳ್ಳುತ್ತದೆ. ಧಾರ್ಮಿಕ ವಿಧಿವಿಧಾನದಂತೆ ಜರುಗುವ ಶ್ರೀಅಡ್ಧಪಲ್ಲಕ್ಕಿ ಮೆರವಣಿಗೆ, ಪಟ್ಟಣದ ಪ್ರಮುಖ ಬೀದಿಗಳ ಮುಖಂತರ ಸಂಚರಿಸಿ ಪಟ್ಟಣದ ಪಂಚಾಚಾರ್ಯ ಮಂಗಲ ಮಂದಿರದವರೆಗೆ ತೆರಳುವುದು. ನಂತರ ಸಂಜೆ 6 ಗಂಟೆಗೆ ಚಂದ್ರಶೇಖರ ಆಜಾದ್ ರಂಗಮಂದಿರ(ಮೇನ್ ಬಾಯ್ಸ್ ಸ್ಕೂಲ್)ದಲ್ಲಿ ಸನಾತನ ಧರ್ಮ ಜಾಗೃತಿ ಸಮಾರಂಭ ಜರುಗುವುದು, ಇದೇ ಸಂದರ್ಭದಲ್ಲಿ ಮಾತೆಯರಿಗೆ ಉಡಿತುಂಬುವ ಕಾರ್ಯಕ್ರಮ ಜರುವುದು. ಜ30ರಂದು ಬೆಳಿಗ್ಗೆ 8 ಗಂಟೆಗೆ ಶ್ರೀಜಗದ್ಗರುಗಳ ಸಾನಿಧ್ಯದಲ್ಲಿ, ಸಂಗೀತ ಸಮೇತ ಸಾಮೂಹಿಕ ಇಷ್ಟಲಿಂಗ ಮಹಾಪೂಜೆ ಜರುಗಲಿದೆ. ಇಷ್ಟಲಿಂಗ ಮಹಾಪೂಜೆಯಲ್ಲಿ ಪಾಲ್ಗೊಳ್ಳಬಯಸುವ ಶಿವ ಭಕ್ತರು, ಕಡ್ಡಾಯವಾಗಿ ಶುಚಿರ್ಭೂತರಾಗಿ ಧಾರ್ಮಿಕ ಸಂಪ್ರದಾಯ ಬದ್ದ ಉಡುಗೆಯೊಂದಿಗೆ ಲಿಂಗ ಧಾರಣೆಯನ್ನ ಮಾಡಿರಲೇಬೇಕಿದೆ. ಇಷ್ಟಲಿಂಗ ಮಹಾಪೂಜೆಯಲ್ಲಿ ಭಾಗವಹಿಸುವ ಶಿವಭಕ್ತರು, ಜ 25ರೊಳಗಾಗಿ ಸೇವಾ ಸಮಿತಿಯನ್ನ ಸಂಪರ್ಕಿಸಿ ತಮ್ಮ ಹೆಸರನ್ನು ನೊಂದಾಯಿಸಬೇಕಿದೆ. ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕು ಹಾಗೂ ನೆರೆ ಹೊರೆ ತಾಲೂಕುಗಳ ಸಕಲ ಭಕ್ತರು, ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಶ್ರೀಜಗದ್ಗುರುಗಳ ದಿವ್ಯ ಆಶೀರ್ವಾದ ಪಡೆಯಬೇಕೆಂದು. ಕಾರ್ಯಕ್ರಮದ ನೇತೃತ್ವ ವಹಿಸಿರುವ ಕೂಡ್ಲಿಗಿ ಹಿರೇಮಠದ ಚಿದಾನಂದ ಸ್ವಾಮಿ ಹಾಗೂ ಶ್ರೀ ಆರಾಧ್ಯ ಮಠದ ಬಸವರಾಜಯ್ಯನವರು ಕೋರಿದ್ದಾರೆ. ಈ ಸಂದರ್ಭದಲ್ಲಿ ಶ್ರೀಪೇಟೆಬಸವೇಶ್ವರ ಸ್ವಾಮಿ ಸೇವಾ ಸಮಿತಿ, ಶ್ರೀಜಗದ್ಗುರು ಸ್ವಾಮಿಗಳ ಉತ್ಸವ ಸಮಿತಿ ಯವರು ಮತ್ತು ಪಟ್ಟಣದ ಶ್ರೀಪೇಟೆಬಸವೇಶ್ವರ ನಗರದ ದೈವಸ್ತರು ಇದ್ದರು. ಹೆಚ್ಚಿನ ಮಾಹಿತಿಗಾಗಿ:9448632482,9108878205,9945064216,9448234843,9449622707,9535509974,9902779092 ಸಂಪರ್ಕಿಸ ಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು