3:30 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಜ. 29: ಕೇದಾರ ಜಗದ್ಗುರು ಅಡ್ಡಪಲ್ಲಕ್ಕಿ ಉತ್ಸವ; ಧರ್ಮ ಜಾಗೃತಿ ಸಭೆ, ಇಷ್ಟಲಿಂಗ ಪೂಜೆ

16/01/2023, 08:41

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ, ಪಟ್ಟಣದಲ್ಲಿ ಜ29ರಂದು ಶ್ರೀಹಿನವತ್ ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ1008 ಜಗದ್ಗುರು, ಕೇದಾರನಾಥ ರಾಜಗುರುವರ್ಯ ಭೀಮಶಂಕರ ಲಿಂಗ ಶಿವಾಚಾರ್ಯ ರವರ ಅಡ್ಡಪಲ್ಲಕ್ಕಿ ಮಹೋತ್ಸವ. ಸನಾತನ ಧರ್ಮ ಜಾಗೃತಿ ಸಮಾರಂಭ, ಹಾಗೂ ಸಂಗೀತಯುಕ್ತ ಇಷ್ಟಲಿಂಗ ಪೂಜೆ ಜರುಗಲಿದೆ.
ಪಟ್ಟಣದ ಶ್ರೀಪೇಟೆ ಬಸವೇಶ್ವರ ಸೇವಾ ಸಮಿತಿ, ಶ್ರೀಕೇದಾರ ಜಗದ್ಗುರುಗಳ ಉತ್ಸವ ಸಮಿತಿ ಹಾಗೂ ಕೂಡ್ಲಿಗಿ ಪಟ್ಟಣ ಮತ್ತು ತಾಲೂಕಿನ ಸದ್ಭಕ್ತ ವೃಂದ ದವರಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಜ29ರಂದು ಭಾನುವಾರ ಸಂಜೆ 4 ಗಂಟೆಗೆ ಶ್ರೀಪೇಟೆ ಬಸವೇಶ್ವರ ದೇವಸ್ಥಾನದಿಂದ, ಶ್ರೀಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಪ್ರಾರಂಭಗೊಳ್ಳುತ್ತದೆ. ಧಾರ್ಮಿಕ ವಿಧಿವಿಧಾನದಂತೆ ಜರುಗುವ ಶ್ರೀಅಡ್ಧಪಲ್ಲಕ್ಕಿ ಮೆರವಣಿಗೆ, ಪಟ್ಟಣದ ಪ್ರಮುಖ ಬೀದಿಗಳ ಮುಖಂತರ ಸಂಚರಿಸಿ ಪಟ್ಟಣದ ಪಂಚಾಚಾರ್ಯ ಮಂಗಲ ಮಂದಿರದವರೆಗೆ ತೆರಳುವುದು. ನಂತರ ಸಂಜೆ 6 ಗಂಟೆಗೆ ಚಂದ್ರಶೇಖರ ಆಜಾದ್ ರಂಗಮಂದಿರ(ಮೇನ್ ಬಾಯ್ಸ್ ಸ್ಕೂಲ್)ದಲ್ಲಿ ಸನಾತನ ಧರ್ಮ ಜಾಗೃತಿ ಸಮಾರಂಭ ಜರುಗುವುದು, ಇದೇ ಸಂದರ್ಭದಲ್ಲಿ ಮಾತೆಯರಿಗೆ ಉಡಿತುಂಬುವ ಕಾರ್ಯಕ್ರಮ ಜರುವುದು. ಜ30ರಂದು ಬೆಳಿಗ್ಗೆ 8 ಗಂಟೆಗೆ ಶ್ರೀಜಗದ್ಗರುಗಳ ಸಾನಿಧ್ಯದಲ್ಲಿ, ಸಂಗೀತ ಸಮೇತ ಸಾಮೂಹಿಕ ಇಷ್ಟಲಿಂಗ ಮಹಾಪೂಜೆ ಜರುಗಲಿದೆ. ಇಷ್ಟಲಿಂಗ ಮಹಾಪೂಜೆಯಲ್ಲಿ ಪಾಲ್ಗೊಳ್ಳಬಯಸುವ ಶಿವ ಭಕ್ತರು, ಕಡ್ಡಾಯವಾಗಿ ಶುಚಿರ್ಭೂತರಾಗಿ ಧಾರ್ಮಿಕ ಸಂಪ್ರದಾಯ ಬದ್ದ ಉಡುಗೆಯೊಂದಿಗೆ ಲಿಂಗ ಧಾರಣೆಯನ್ನ ಮಾಡಿರಲೇಬೇಕಿದೆ. ಇಷ್ಟಲಿಂಗ ಮಹಾಪೂಜೆಯಲ್ಲಿ ಭಾಗವಹಿಸುವ ಶಿವಭಕ್ತರು, ಜ 25ರೊಳಗಾಗಿ ಸೇವಾ ಸಮಿತಿಯನ್ನ ಸಂಪರ್ಕಿಸಿ ತಮ್ಮ ಹೆಸರನ್ನು ನೊಂದಾಯಿಸಬೇಕಿದೆ. ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕು ಹಾಗೂ ನೆರೆ ಹೊರೆ ತಾಲೂಕುಗಳ ಸಕಲ ಭಕ್ತರು, ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಶ್ರೀಜಗದ್ಗುರುಗಳ ದಿವ್ಯ ಆಶೀರ್ವಾದ ಪಡೆಯಬೇಕೆಂದು. ಕಾರ್ಯಕ್ರಮದ ನೇತೃತ್ವ ವಹಿಸಿರುವ ಕೂಡ್ಲಿಗಿ ಹಿರೇಮಠದ ಚಿದಾನಂದ ಸ್ವಾಮಿ ಹಾಗೂ ಶ್ರೀ ಆರಾಧ್ಯ ಮಠದ ಬಸವರಾಜಯ್ಯನವರು ಕೋರಿದ್ದಾರೆ. ಈ ಸಂದರ್ಭದಲ್ಲಿ ಶ್ರೀಪೇಟೆಬಸವೇಶ್ವರ ಸ್ವಾಮಿ ಸೇವಾ ಸಮಿತಿ, ಶ್ರೀಜಗದ್ಗುರು ಸ್ವಾಮಿಗಳ ಉತ್ಸವ ಸಮಿತಿ ಯವರು ಮತ್ತು ಪಟ್ಟಣದ ಶ್ರೀಪೇಟೆಬಸವೇಶ್ವರ ನಗರದ ದೈವಸ್ತರು ಇದ್ದರು. ಹೆಚ್ಚಿನ ಮಾಹಿತಿಗಾಗಿ:9448632482,9108878205,9945064216,9448234843,9449622707,9535509974,9902779092 ಸಂಪರ್ಕಿಸ ಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು