7:05 PM Thursday8 - January 2026
ಬ್ರೇಕಿಂಗ್ ನ್ಯೂಸ್
ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್!

ಇತ್ತೀಚಿನ ಸುದ್ದಿ

ಜ.4 ರಂದು ಸ್ವಯಂಪ್ರೇರಿತ ನಂಜನಗೂಡು ಬಂದ್ ಗೆ ಯುವ ಬ್ರಿಗೇಡ್ ಕರೆ

02/01/2024, 21:37

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡು ನಂಜುಂಡೇಶ್ವರನಿಗೆ ಎಂಜಲು ನೀರು ಎರಚಿ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಜ.4 ರಂದು ಸ್ವಯಂಪ್ರೇರಿತ ನಂಜನಗೂಡು ಬಂದ್ ಕರೆ ನೀಡಲಾಗಿದೆ ಎಂದು ಯುವ ಬ್ರಿಗೇಡ್ ಮುಖಂಡ ಗಿರೀಶ್ ಹೇಳಿದರು.


ನಂಜನಗೂಡು ನಗರದ ತಾಲ್ಲೂಕು ಪತ್ರಕರ್ತರ ಭವನದಲ್ಲಿ ಮಾಧ್ಯಮಗೋಷ್ಠಿ ನಡೆ ಮಾತನಾಡಿದ ಅವರು, ದೇವಾಲಯದ ಸಂಪ್ರದಾಯದಂತೆ ಅನಾದಿಕಾಲದಿಂದಲೂ ಹುಣ್ಣಿಮೆಯಂದು ಅಂಧಕಾಸುರನ ಸಂಹಾರ ನಡೆಯುತ್ತದೆ. ಅಂಧಾಕಾಸುರ ಸಂಹಾರದ ಧಾರ್ಮಿಕ ಆಚರಣೆಗೆ ಅಡ್ಡಿಪಡಿಸಿ, ನಂಜುಂಡೇಶ್ವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ನಂಜುಂಡೇಶ್ವರನ ವಿಗ್ರಹದ ಮೇಲೆ ಎಂಜಲು ನೀರು ಎರಚಿ ಕೋಟ್ಯಂತರ ಭಕ್ತರ ನಂಬಿಕೆ ಹಾಗೂ ಭಾವನೆಗಳಿಗೆ ಧಕ್ಕೆ ತಂದು 4 – 5 ದಿನ ಕಳೆದರು ಕಿಡಿಗೇಡಿಗಳನ್ನು ಬಂಧಿಸದೆ ಕಾಲ‌ಹರಣ ಮಾಡುತ್ತಿರುವ ಪೋಲಿಸ್ ಇಲಾಖೆ, ತಾಲ್ಲೂಕು ಆಡಳಿತ, ಜಿಲ್ಲಾಡಳಿತ, ಸರ್ಕಾರದ ಕ್ರಮವನ್ನು ಖಂಡಿಸಿ ನಂಜುಂಡೇಶ್ವರನ ಭಕ್ತರೆಲ್ಲ ಸೇರಿ ಜನವರಿ 4 ರ ಗುರುವಾರ ಸ್ವಯಂ ಪ್ರೇರಿತರವಾಗಿ ನಂಜನಗೂಡು ಬಂದ್ ಮಾಡುವ ಮೂಲಕ ಸರ್ಕಾರವನ್ನು ಎಚ್ಚರ ಮಾಡಬೇಕಾದ ಅನಿವಾರ್ಯತೆ ಬಂದಿದೆ.
ಅದಕ್ಕಾಗಿ ತಾವೆಲ್ಲರೂ ಸ್ವಯಂ ಪ್ರೇರಿತರಾಗಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ದಕ್ಷಿಣ ಕಾಶಿಯ ನಂಜುಂಡೇಶ್ವರನಿಗೆ ಎಂಜಲು ಎರಚಿದವರ ಶಿಕ್ಷೆಗೆ ಈ ಮೂಲಕ ಆಗ್ರಹಿಸ ಬೇಕೆಂದು ಕೋರಿಕೊಳ್ಳುತ್ತೆವೆ ಎಂದು ಮನವಿ ಮಾಡಿದರು.
ಮಾಧ್ಯಮಗೋಷ್ಠಿಯಲ್ಲಿ ನಗರಸಭಾ ಸದಸ್ಯ ಕಪಿಲೇಶ್, ಖಾದಿ ಗ್ರಾಮೋದ್ಯೋಗ ನಿಗಮದ ಮಾಜಿ ಅಧ್ಯಕ್ಷ ಕೃಷ್ಣಪ್ಪಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು