12:32 PM Friday24 - April 2026
ಬ್ರೇಕಿಂಗ್ ನ್ಯೂಸ್
ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ…

ಇತ್ತೀಚಿನ ಸುದ್ದಿ

ಜ.4 ರಂದು ಸ್ವಯಂಪ್ರೇರಿತ ನಂಜನಗೂಡು ಬಂದ್ ಗೆ ಯುವ ಬ್ರಿಗೇಡ್ ಕರೆ

02/01/2024, 21:37

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡು ನಂಜುಂಡೇಶ್ವರನಿಗೆ ಎಂಜಲು ನೀರು ಎರಚಿ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಜ.4 ರಂದು ಸ್ವಯಂಪ್ರೇರಿತ ನಂಜನಗೂಡು ಬಂದ್ ಕರೆ ನೀಡಲಾಗಿದೆ ಎಂದು ಯುವ ಬ್ರಿಗೇಡ್ ಮುಖಂಡ ಗಿರೀಶ್ ಹೇಳಿದರು.


ನಂಜನಗೂಡು ನಗರದ ತಾಲ್ಲೂಕು ಪತ್ರಕರ್ತರ ಭವನದಲ್ಲಿ ಮಾಧ್ಯಮಗೋಷ್ಠಿ ನಡೆ ಮಾತನಾಡಿದ ಅವರು, ದೇವಾಲಯದ ಸಂಪ್ರದಾಯದಂತೆ ಅನಾದಿಕಾಲದಿಂದಲೂ ಹುಣ್ಣಿಮೆಯಂದು ಅಂಧಕಾಸುರನ ಸಂಹಾರ ನಡೆಯುತ್ತದೆ. ಅಂಧಾಕಾಸುರ ಸಂಹಾರದ ಧಾರ್ಮಿಕ ಆಚರಣೆಗೆ ಅಡ್ಡಿಪಡಿಸಿ, ನಂಜುಂಡೇಶ್ವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ನಂಜುಂಡೇಶ್ವರನ ವಿಗ್ರಹದ ಮೇಲೆ ಎಂಜಲು ನೀರು ಎರಚಿ ಕೋಟ್ಯಂತರ ಭಕ್ತರ ನಂಬಿಕೆ ಹಾಗೂ ಭಾವನೆಗಳಿಗೆ ಧಕ್ಕೆ ತಂದು 4 – 5 ದಿನ ಕಳೆದರು ಕಿಡಿಗೇಡಿಗಳನ್ನು ಬಂಧಿಸದೆ ಕಾಲ‌ಹರಣ ಮಾಡುತ್ತಿರುವ ಪೋಲಿಸ್ ಇಲಾಖೆ, ತಾಲ್ಲೂಕು ಆಡಳಿತ, ಜಿಲ್ಲಾಡಳಿತ, ಸರ್ಕಾರದ ಕ್ರಮವನ್ನು ಖಂಡಿಸಿ ನಂಜುಂಡೇಶ್ವರನ ಭಕ್ತರೆಲ್ಲ ಸೇರಿ ಜನವರಿ 4 ರ ಗುರುವಾರ ಸ್ವಯಂ ಪ್ರೇರಿತರವಾಗಿ ನಂಜನಗೂಡು ಬಂದ್ ಮಾಡುವ ಮೂಲಕ ಸರ್ಕಾರವನ್ನು ಎಚ್ಚರ ಮಾಡಬೇಕಾದ ಅನಿವಾರ್ಯತೆ ಬಂದಿದೆ.
ಅದಕ್ಕಾಗಿ ತಾವೆಲ್ಲರೂ ಸ್ವಯಂ ಪ್ರೇರಿತರಾಗಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ದಕ್ಷಿಣ ಕಾಶಿಯ ನಂಜುಂಡೇಶ್ವರನಿಗೆ ಎಂಜಲು ಎರಚಿದವರ ಶಿಕ್ಷೆಗೆ ಈ ಮೂಲಕ ಆಗ್ರಹಿಸ ಬೇಕೆಂದು ಕೋರಿಕೊಳ್ಳುತ್ತೆವೆ ಎಂದು ಮನವಿ ಮಾಡಿದರು.
ಮಾಧ್ಯಮಗೋಷ್ಠಿಯಲ್ಲಿ ನಗರಸಭಾ ಸದಸ್ಯ ಕಪಿಲೇಶ್, ಖಾದಿ ಗ್ರಾಮೋದ್ಯೋಗ ನಿಗಮದ ಮಾಜಿ ಅಧ್ಯಕ್ಷ ಕೃಷ್ಣಪ್ಪಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು