4:27 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಜನವರಿ 4ರಂದು ಕೊಂಕಣಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ: ಆಹ್ವಾನ ಬಿಡುಗಡೆ

31/12/2024, 16:32

ಮಂಗಳೂರು(reporterkarnataka.com):ಕೊಂಕಣಿ ಭಾಷಾ ಮಂಡಳ್ ಕರ್ನಾಟಕವು ತನ್ನ ಸ್ಥಾಪನಾ ದಿನದ ಪ್ರಯುಕ್ತ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಜೊತೆಯಲ್ಲಿ ಜ.4ರಂದು ಒಂದು ದಿನದ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಆಯೋಜನೆ ಮಾಡಿದ್ದು, ಕರ್ನಾಟಕ ಮತ್ತು ಗೋವಾದ ವಿವಿಧ ಕೊಂಕಣಿಯ ಮಾತೃಭಾಷೆ ಇರುವ 300 ಕೊಂಕಣಿ ವಿದ್ಯಾರ್ಥಿಗಳು ಭಾಗವಹಿಸಲು ನೊಂದಣಿ ಮಾಡಿದ್ದಾರೆ.
ಈ ಸಮ್ಮೇಳನದ ಅಹ್ವಾನ ಬಿಡುಗಡೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಇದರ ಕುಲಪತಿ ಡಾ.ಪಾ ಪ್ರವೀಣ್ ಮಾರ್ಟಿಸ್ ಮಾಡಿದರು.
ಗೋವಾ ಕೊಂಕಣಿ ಅಕಾಡೆಮಿಯ ಅಧ್ಯಕ್ಷರಾದ ವಸಂತ್ ಭಾಗ್ವತ್ ಸಾವಂತ್ ಮುಖ್ಯ ಅಥಿತಿಯಾಗಿ ಮತ್ತು ಕಾರ್ಯದರ್ಶಿ ಪರಾಗ್ ನಗರ್‌ಸೇಕರ್ ಭಾಗವಹಿಸುವರು.
ಅಲೋಶಿಯಸ್ ಕಾಲೇಜಿನ ರಿಜಿಸ್ಟ್ರಾರ್ ಡಾಕ್ಟರೇಟ್ ರೊನಾಳ್ಡ್ ನಜ್ರೆತ್, ಎಸ್ ಎಲ್ ಶೇಟ್ ಜ್ಯುವೆಲ್ಲರಿ ಮಾಲಕ ಪ್ರಶಾಂತ ಶೇಟ್, ಕೆನರಾ ಬ್ಯಾಂಕ್ ಸರ್ಕಲ್ ಆಪೀಸ್ ಜನರಲ್ ಮೆನೇಜರ್ ಸುದಾಕರ್ ಕೊತಾರಿ ಇರುವರು.
ಸಮಾರೋಪರಲ್ಲಿ ಉಪ ಕುಲಪತಿ ಫಾ ಮೆಲ್ವಿನ್ ಡಿಕೂನಾ ಅಧ್ಯಕ್ಷ ಹಾಗೂ ಸಮಾರೋಪ ಭಾಷಣವನ್ನು ಸಂತ ಅಲೋಶಿಯಸ್ ಕಾಲೇಜಿನ ರಿಜಿಸ್ಟ್ರಾರ್ ಡಾ ಆಲ್ವಿನ್ ಡೆಸಾ ಮಾಡುವರು. ಇದೇ ವೇಳೆ ಕಾಲೇಜಿನಲ್ಲಿ ‌ಕೊಂಕಣಿ ವಿಭಾಗ ಮೂವತ್ತು ವರ್ಷಗಳ ಮೊದಲು ಆರಂಭ ಮಾಡಿದ ಪ್ರಾಂಶುಪಾಲ ಫಾ ಪ್ರಶಾಂತ ‌ಮಾಡ್ತ ಅವರಿಗೆ ಸನ್ಮಾನ ಮಾಡಲಾಗುವುದು. ಕೆಬಿಎಮ್‌ಕೆ ಅಧ್ಯಕ್ಷ ಕೆ ವಸಂತ ರಾವ್‌, ಕಾರ್ಯದರ್ಶಿ ರೇಮಂಡ್ ಡಿಕೂನಾ ತಾಕೊಡೆ ಜೊತೆಯಲ್ಲಿ ಇರುವರು.

ಕಾರ್ಯಕ್ರಮ ಸಂಯೋಜನೆ ಕೆಬಿಎಮ್‌ಕೆ ಅಧ್ಯಕ್ಷ ಕೆ ವಸಂತ ರಾವ್ ಹಾಗೂ ಅಲೋಶಿಯಸ್ ಕಾಲೇಜಿನ ಕೊಂಕಣಿ ವಿಭಾಗದ ಜೊತೆಯಲ್ಲಿ ಮಾಡಲಾಗುವುದು.
ಇಡೀ ಕಾರ್ಯಕ್ರಮದ ಸಂಯೋಜಕರಾದ ಕೆಬಿಎಮ್‌ಕೆ ಕಾರ್ಯದರ್ಶಿ ರೇಮಂಡ್ ಡಿಕೂನಾ ಸ್ವಾಗತಿಸಿ ಕೊಂಕಣಿ ವಿಭಾಗ ಮುಖ್ಯಸ್ಥೆ ಪ್ಲೊರಾ ಕಾಸ್ತೆಲಿನೊ ವಂದಿಸಿದರು. ಸಂಯೋಜಕಿ ಡಾ ಸೆವ್ರಿನ್ ಪಿಂಟೊ ನಿರೂಪಿಸಿದರು. ಮಿಚೆಲ್ ಅನಿಶಾ ಫೆರ್ನಾಂಡಿಸ್ ಸಾಂಸ್ಕೃತಿಕ ಕಾರ್ಯದರ್ಶಿ, ಕೊಂಕಣಿ ಸಂಘ ಶ್ರೀಮತಿ ಜನಿತಾ ರೇಗೊ, ನೋಂದಣಿ ಸಮಿತಿಯ ಡೆನಿತಾ ಡಿ’ಕುನ್ಹಾ, ಪ್ರೇಯರ್ ಇಂಚಾರ್ಜ್ ಸೇಜಲ್ ಪ್ರೀಮಾ ಅಲ್ವಾರೆಸ್, ಬೆಂಗಾವಲು ಸಮಿತಿಯ ಫ್ರಾಂಕ್ಲಿನ್ ಕ್ರಿಸ್ಟನ್ ಕ್ಯಾಸ್ಟೆಲಿನೊ ಕೊಂಕಣಿ ಸಂಘದ ವಿದ್ಯಾರ್ಥಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು