10:53 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಜ. 24ರಂದು ‘ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ’: ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಪಿಂಕ್ ಲೈಟ್ ಆಚರಣೆ

23/01/2025, 10:50

ಮಂಗಳೂರು (reporterkarnataka.com): ಆರೋಗ್ಯ ಇಲಾಖೆಯ ಜಿಲ್ಲಾ ಸಲಹಾ ಸಮಿತಿ ಮತ್ತು ಜಿಲ್ಲಾ ಮೇಲ್ವಿಚಾರಣಾ ಮತ್ತು ತಪಾಸಣಾ ಸಮಿತಿ ಸಭೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷೆ ಡಾ.ಅಮೃತ ಭಂಡಾರಿ ಅಧ್ಯಕ್ಷತೆಯಲ್ಲಿ ನಡೆಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಸಂಸ್ಥೆಗಳಿಗೆ ಮೂರು ತಿಂಗಳಿಗೊಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪಿಸಿ & ಪಿ.ಎನ್.ಡಿ.ಟಿ ಕಾಯ್ದೆ ಮತ್ತು ಕಾನೂನು ಸಮರ್ಪಕವಾಗಿ ಅನುಷ್ಠಾನಗೊಳಿಸದಿರುವ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಎಂದು ಸೂಚಿಸಿದರು. ಸರ್ಕಾರಿ /ಖಾಸಗಿ ಆಸ್ಪತ್ರೆಗೆ ಸ್ಕ್ಯಾನಿಂಗ್ ಮಾಡಿಸಲು ಬರುವ ಪ್ರತಿ ಗರ್ಭಿಣಿ ಮಹಿಳೆಯರು ಕಡ್ಡಾಯವಾಗಿ ತಾಯಿಕಾರ್ಡ್ ತೆಗೆದುಕೊಂಡು ಹೋಗಬೇಕು ಎಂದು ಹೇಳಿದರು.
ಹೆಣ್ಣು ಭ್ರೂಣ ಮತ್ತು ಶಿಶು ಹತ್ಯೆ ತಡೆಯುವ ನಿಟ್ಟಿನಲ್ಲಿ ಜನವರಿ 24ರಂದು “ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ”ಯನ್ನು ಎಲ್ಲಾ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಪಿಂಕ್ ಲೈಟ್ ಹಾಕಿ ಆಚರಿಸಬೇಕು. ಪೂರ್ವಲಿಂಗ ಪತ್ತೆ ಮತ್ತು ಹತ್ಯೆಯನ್ನು ತಡೆಯುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಅವರು ಸೂಚಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ದೀಪಾ ಪ್ರಭು ಸಭೆಯ ಕಾರ್ಯಸೂಚಿಯನ್ನು ಸಭೆಯ ಗಮನಕ್ಕೆ ತಂದರು.
ಜಿಲ್ಲಾ ಸಲಹಾ ಸಮಿತಿಯ ಸದಸ್ಯರು ಮತ್ತು ಜಿಲ್ಲಾ ಮೇಲ್ವಿಚಾರಣಾ ಮತ್ತು ತಪಾಸಣಾ ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು