4:04 AM Wednesday19 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ಜನವರಿ 25ರಂದು ನಭೋ ಮಂಡಲದಲ್ಲಿ ನಡೆಯಲಿದೆ ವಿಸ್ಮಯ: 5 ಗ್ರಹಗಳ ಅಪರೂಪದ ಸಂಯೋಗ

19/01/2025, 21:26

ನವದೆಹಲಿ(reporterkarnataka.com): ಈ ತಿಂಗಳ ಮೂರನೇ ವಾರದ ವಾರಾಂತ್ಯದಲ್ಲಿ ಆಗಸದಲ್ಲಿ ಕೌತುಕವೊಂದು ಏರ್ಪಡಲಿದೆ.
ಈ ವಿಸ್ಮಯವನ್ನು ನೋಡಲು ವಿಶ್ವದ ವಿಜ್ಞಾನಿಗಳ ಜತೆ ಖಗೋಳ ಪ್ರೇಮಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.
ಜನವರಿ 25ರಂದು ಖಗೋಳದಲ್ಲಿ ಈ ವಿಸ್ಮಯ ನಡೆಯಲಿದೆ. 25ರಂದು 5 ಗ್ರಹಳು ಕಾಣಿಸಿಕೊಳ್ಳಲಿದೆ. ಇದು ಬಹಳ ಅಪರೂಪದಲ್ಲಿ ನಡೆಯುವ ಗ್ರಹಗಳ ಸಂಯೋಗ ಆಗಲಿದೆ.
ಸೌರಮಂಡಲದ ಗ್ರಹಗಳಾದ ಬುಧ, ಶುಕ್ರ, ಮಂಗಳ, ಗುರು ಮತ್ತು ಶನಿ ಗ್ರಹಗಳು ಅಪರೂಪವಾದ ಸ್ಥಿತಿಯಲ್ಲಿ ತಮ್ಮ ಸಂಚಾರ ಮಾಡಲಿದೆ.
ಸೂರ್ಯಾಸ್ತದ ನಂತರ ಶುಕ್ರ ಮತ್ತು ಗುರು ಗ್ರಹಗಳು ಸಾಕಷ್ಟು ಪ್ರಕಾಶಮಾನವಾಗಿ ಹೊಳೆಯಲಿದೆ. ಇದರಲ್ಲಿ ಮಂಗಳ ಗ್ರಹ ಇನ್ನಷ್ಟು ಹೊಳಪಿನಲ್ಲಿ ಗೋಚರಿಸಲಿದೆ. ಬೇರೆ ಖಗೋಳ ಘಟನೆಗಳಿಗಿಂತ ವಿಭಿನ್ನವಾಗಿ ಈ ಗ್ರಹಗಳ ಸಂಯೋಗ ನಡೆಯಲಿದೆ. ಇದನ್ನು ಬರಿ ಕಣ್ಣಿನಲ್ಲೇ ನೋಡಬಹುದಾಗಿದೆ ಎಂದು ಖಗೋಳ
ತಜ್ಞರು ಹೇಳಿದ್ದಾರೆ.
ಸೌರಮಂಡಲದ ಹಲವು ಗ್ರಹಗಳು ಸಾಲಾಗಿ ಹತ್ತಿರ ಹತ್ತಿರವಿದ್ದಾಗೆ ಗೋಚರಿಸಲಿದೆ. ವಾಸ್ತವದಲ್ಲಿ ಇದು ಕೋಟಿಗಟ್ಟಲೆ ಮೈಲು ಅಂತರದಲ್ಲಿರುತ್ತದೆ.
ಈ ಅಪರೂಪದ ಘಟನೆಯಲ್ಲಿ ಬುಧ, ಶುಕ್ರ, ಮಂಗಳ, ಗುರು ಮತ್ತು ಶನಿ ಗ್ರಹಗಳು ಆಕಾಶದ ಒಂದೇ ಭಾಗದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತವೆ. ಆದರೆ, ಒಂದೇ ನೇರ ಸಾಲಿನಲ್ಲಿ ಇರುವುದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು