4:54 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಜನವರಿ 25ರಂದು ನಭೋ ಮಂಡಲದಲ್ಲಿ ನಡೆಯಲಿದೆ ವಿಸ್ಮಯ: 5 ಗ್ರಹಗಳ ಅಪರೂಪದ ಸಂಯೋಗ

19/01/2025, 21:26

ನವದೆಹಲಿ(reporterkarnataka.com): ಈ ತಿಂಗಳ ಮೂರನೇ ವಾರದ ವಾರಾಂತ್ಯದಲ್ಲಿ ಆಗಸದಲ್ಲಿ ಕೌತುಕವೊಂದು ಏರ್ಪಡಲಿದೆ.
ಈ ವಿಸ್ಮಯವನ್ನು ನೋಡಲು ವಿಶ್ವದ ವಿಜ್ಞಾನಿಗಳ ಜತೆ ಖಗೋಳ ಪ್ರೇಮಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.
ಜನವರಿ 25ರಂದು ಖಗೋಳದಲ್ಲಿ ಈ ವಿಸ್ಮಯ ನಡೆಯಲಿದೆ. 25ರಂದು 5 ಗ್ರಹಳು ಕಾಣಿಸಿಕೊಳ್ಳಲಿದೆ. ಇದು ಬಹಳ ಅಪರೂಪದಲ್ಲಿ ನಡೆಯುವ ಗ್ರಹಗಳ ಸಂಯೋಗ ಆಗಲಿದೆ.
ಸೌರಮಂಡಲದ ಗ್ರಹಗಳಾದ ಬುಧ, ಶುಕ್ರ, ಮಂಗಳ, ಗುರು ಮತ್ತು ಶನಿ ಗ್ರಹಗಳು ಅಪರೂಪವಾದ ಸ್ಥಿತಿಯಲ್ಲಿ ತಮ್ಮ ಸಂಚಾರ ಮಾಡಲಿದೆ.
ಸೂರ್ಯಾಸ್ತದ ನಂತರ ಶುಕ್ರ ಮತ್ತು ಗುರು ಗ್ರಹಗಳು ಸಾಕಷ್ಟು ಪ್ರಕಾಶಮಾನವಾಗಿ ಹೊಳೆಯಲಿದೆ. ಇದರಲ್ಲಿ ಮಂಗಳ ಗ್ರಹ ಇನ್ನಷ್ಟು ಹೊಳಪಿನಲ್ಲಿ ಗೋಚರಿಸಲಿದೆ. ಬೇರೆ ಖಗೋಳ ಘಟನೆಗಳಿಗಿಂತ ವಿಭಿನ್ನವಾಗಿ ಈ ಗ್ರಹಗಳ ಸಂಯೋಗ ನಡೆಯಲಿದೆ. ಇದನ್ನು ಬರಿ ಕಣ್ಣಿನಲ್ಲೇ ನೋಡಬಹುದಾಗಿದೆ ಎಂದು ಖಗೋಳ
ತಜ್ಞರು ಹೇಳಿದ್ದಾರೆ.
ಸೌರಮಂಡಲದ ಹಲವು ಗ್ರಹಗಳು ಸಾಲಾಗಿ ಹತ್ತಿರ ಹತ್ತಿರವಿದ್ದಾಗೆ ಗೋಚರಿಸಲಿದೆ. ವಾಸ್ತವದಲ್ಲಿ ಇದು ಕೋಟಿಗಟ್ಟಲೆ ಮೈಲು ಅಂತರದಲ್ಲಿರುತ್ತದೆ.
ಈ ಅಪರೂಪದ ಘಟನೆಯಲ್ಲಿ ಬುಧ, ಶುಕ್ರ, ಮಂಗಳ, ಗುರು ಮತ್ತು ಶನಿ ಗ್ರಹಗಳು ಆಕಾಶದ ಒಂದೇ ಭಾಗದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತವೆ. ಆದರೆ, ಒಂದೇ ನೇರ ಸಾಲಿನಲ್ಲಿ ಇರುವುದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು