11:21 PM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಜನ ಸಾಮಾನ್ಯರನ್ನು ದೋಚುವ ಟೋಲ್ ಗೇಟ್ ಸಂಸ್ಕೃತಿ ನನ್ನ ಕ್ಷೇತ್ರಕ್ಕೆ ಬೇಡ: ಸಿಎಲ್ ಪಿ  ಉಪ ನಾಯಕ ಖಾದರ್

30/01/2022, 23:47

ತೊಕ್ಕೊಟ್ಟು(reporterkarnataka.com): ಜನ ಸಾಮಾನ್ಯರನ್ನು ದೋಚುವ ಟೋಲ್ ಗೇಟ್ ಸಂಸ್ಕೃತಿ ನನ್ನ ಕ್ಷೇತ್ರಕ್ಕೆ ಬೇಡ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕ ಖಾದರ್ ಹೇಳಿದರು.


ಅವರು ನಾಟೆಕಲ್ ಜಂಕ್ಷನ್ ನಿಂದ ಅಸೈಗೋಳಿ ಜಂಕ್ಷನ್ ವರೆಗೆ 10 ಕೋಟಿ ರೂ. ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿ ವೀಕ್ಷಿಸಿ ಮಾತನಾಡಿದರು.

ಕಾಮಗಾರಿಗೆ  ಕೇಂದ್ರ ಸರಕಾರದ ಅನುದಾನ ಬಿಡುಗಡೆಯಾಗಿದ್ದರೆ ಟೋಲ್ ಗೇಟನ್ನು ಪ್ರಾರಂಭಿಸಲಿದ್ದರು. ಆದರೆ ಬಡ ಸಾಮಾನ್ಯರನ್ನು ದೋಚುವ ಟೋಲ್ ಗೇಟ್ ಸಂಸ್ಕೃತಿ ನನ್ನ ಕ್ಷೇತ್ರಕ್ಕೆ ಬರಬಾರದೆಂಬ ಉದ್ದೇಶದಿಂದ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಲ್ಲಿ ಈ ರಸ್ತೆ ನಡೆಸಲಾಗುವುದು ಎಂದರು.


ರಾಜ್ಯ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ದಾಸ್ ಪ್ರಕಾಶ್, ಸಹಾಯಕ ಕಾರ್ಯಪಾಲ ಇಂಜಿನಿಯರ್ ಕೆ.ಟಿ.ಚಂದ್ರ ಶೇಕರಯ್ಯ ಮತ್ತು ಕನ್ಸಲ್ಟೆಂಟ್ ಕೌಶಿಕ್ ಅವರೊಂದಿಗೆ ಖಾದರ್ ಕಾಮಗಾರಿಯ ಬಗ್ಗೆ ಮಾತುಕತೆ ನಡೆಸಿದರು.

ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂಚಲಾಕ್ಷಿ, ಬೆಳ್ಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ಸತ್ತಾರ್, ಮಂಜನಾಡಿ ಪಂಚಾಯತ್ ಉಪಾಧ್ಯಕ್ಷ ವಿನ್ಸೆಂಟ್ ವೇಗಸ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಪದ್ಮಾವತಿ ಕಾಂಗ್ರೆಸ್ ಪ್ರಮುಖರಾದ ಎನ್.ಎಸ್. ಕರೀಂ, ರವಿರಾಜ್ ಶೆಟ್ಟಿ ದೇರಳೆಕಟ್ಟೆ, ಟಿ.ಎಸ್ ಅಬ್ದುಲ್ಲಾ, ಅಬ್ದುರ್ರಹ್ಮಾನ್ ಕೋಡಿಜಾಲ್, ನಾಸೀರ್ ಸಾಮಾನಿಗೆ, ಇಸ್ಮಾಯಿಲ್ ನಾಟೆಕಲ್, ಕೊಣಾಜೆ ಗ್ರಾಮ ಪಂಚಾಯತ್ ಸದಸ್ಯರಾದ ನಝರ್ ಷಾ ಪಟ್ಟೋರಿ, ಅಚ್ಚುತ ಗಟ್ಟಿ, ದೇವಣ್ಣ ಶೆಟ್ಟಿ, ಇಕ್ಬಾಲ್, ರುಕಿಯ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಗುಲಾಬಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು