6:57 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಜನ ಸಾಮಾನ್ಯರನ್ನು ದೋಚುವ ಟೋಲ್ ಗೇಟ್ ಸಂಸ್ಕೃತಿ ನನ್ನ ಕ್ಷೇತ್ರಕ್ಕೆ ಬೇಡ: ಸಿಎಲ್ ಪಿ  ಉಪ ನಾಯಕ ಖಾದರ್

30/01/2022, 23:47

ತೊಕ್ಕೊಟ್ಟು(reporterkarnataka.com): ಜನ ಸಾಮಾನ್ಯರನ್ನು ದೋಚುವ ಟೋಲ್ ಗೇಟ್ ಸಂಸ್ಕೃತಿ ನನ್ನ ಕ್ಷೇತ್ರಕ್ಕೆ ಬೇಡ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕ ಖಾದರ್ ಹೇಳಿದರು.


ಅವರು ನಾಟೆಕಲ್ ಜಂಕ್ಷನ್ ನಿಂದ ಅಸೈಗೋಳಿ ಜಂಕ್ಷನ್ ವರೆಗೆ 10 ಕೋಟಿ ರೂ. ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿ ವೀಕ್ಷಿಸಿ ಮಾತನಾಡಿದರು.

ಕಾಮಗಾರಿಗೆ  ಕೇಂದ್ರ ಸರಕಾರದ ಅನುದಾನ ಬಿಡುಗಡೆಯಾಗಿದ್ದರೆ ಟೋಲ್ ಗೇಟನ್ನು ಪ್ರಾರಂಭಿಸಲಿದ್ದರು. ಆದರೆ ಬಡ ಸಾಮಾನ್ಯರನ್ನು ದೋಚುವ ಟೋಲ್ ಗೇಟ್ ಸಂಸ್ಕೃತಿ ನನ್ನ ಕ್ಷೇತ್ರಕ್ಕೆ ಬರಬಾರದೆಂಬ ಉದ್ದೇಶದಿಂದ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಲ್ಲಿ ಈ ರಸ್ತೆ ನಡೆಸಲಾಗುವುದು ಎಂದರು.


ರಾಜ್ಯ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ದಾಸ್ ಪ್ರಕಾಶ್, ಸಹಾಯಕ ಕಾರ್ಯಪಾಲ ಇಂಜಿನಿಯರ್ ಕೆ.ಟಿ.ಚಂದ್ರ ಶೇಕರಯ್ಯ ಮತ್ತು ಕನ್ಸಲ್ಟೆಂಟ್ ಕೌಶಿಕ್ ಅವರೊಂದಿಗೆ ಖಾದರ್ ಕಾಮಗಾರಿಯ ಬಗ್ಗೆ ಮಾತುಕತೆ ನಡೆಸಿದರು.

ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂಚಲಾಕ್ಷಿ, ಬೆಳ್ಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ಸತ್ತಾರ್, ಮಂಜನಾಡಿ ಪಂಚಾಯತ್ ಉಪಾಧ್ಯಕ್ಷ ವಿನ್ಸೆಂಟ್ ವೇಗಸ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಪದ್ಮಾವತಿ ಕಾಂಗ್ರೆಸ್ ಪ್ರಮುಖರಾದ ಎನ್.ಎಸ್. ಕರೀಂ, ರವಿರಾಜ್ ಶೆಟ್ಟಿ ದೇರಳೆಕಟ್ಟೆ, ಟಿ.ಎಸ್ ಅಬ್ದುಲ್ಲಾ, ಅಬ್ದುರ್ರಹ್ಮಾನ್ ಕೋಡಿಜಾಲ್, ನಾಸೀರ್ ಸಾಮಾನಿಗೆ, ಇಸ್ಮಾಯಿಲ್ ನಾಟೆಕಲ್, ಕೊಣಾಜೆ ಗ್ರಾಮ ಪಂಚಾಯತ್ ಸದಸ್ಯರಾದ ನಝರ್ ಷಾ ಪಟ್ಟೋರಿ, ಅಚ್ಚುತ ಗಟ್ಟಿ, ದೇವಣ್ಣ ಶೆಟ್ಟಿ, ಇಕ್ಬಾಲ್, ರುಕಿಯ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಗುಲಾಬಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು